Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಆನೆಕೆರೆ ಬಾವಿಯಲ್ಲಿ ಸತ್ತ ಮೀನು; ದುರ್ವಾಸನೆ ಮಧ್ಯೆ ಯಾತ್ರಾರ್ಥಿಗಳ ಸಂಕಷ್ಟ – ಮಾಜಿ ಸದಸ್ಯರಿಂದ ಸ್ವಚ್ಛತಾ ಕಾರ್ಯ….!

Dhrishya News by Dhrishya News
14/03/2026
in ಕರಾವಳಿ, ಸುದ್ದಿಗಳು
0
ಆನೆಕೆರೆ ಬಾವಿಯಲ್ಲಿ ಸತ್ತ ಮೀನು; ದುರ್ವಾಸನೆ ಮಧ್ಯೆ ಯಾತ್ರಾರ್ಥಿಗಳ ಸಂಕಷ್ಟ – ಮಾಜಿ ಸದಸ್ಯರಿಂದ ಸ್ವಚ್ಛತಾ ಕಾರ್ಯ….!
0
SHARES
17
VIEWS
Share on FacebookShare on Twitter

ಕಾರ್ಕಳ, ಮಾ. 14: ಕಾರ್ಕಳ ಪುರಸಭಾ ವ್ಯಾಪ್ತಿಯ ಆನೆಕೆರೆ ಪ್ರದೇಶದಲ್ಲಿರುವ ಕುಡಿಯುವ ನೀರಿನ ಬಾವಿಯಲ್ಲಿ ಹಾವು ಮೀನು (ಪೂ ಮೀನು) ಸತ್ತು ಹಲವು ದಿನಗಳಾದರೂ ಅದನ್ನು ಗಮನಿಸದಿರುವುದು ಸ್ಥಳೀಯರಲ್ಲಿ ಆಶ್ಚರ್ಯ ಹುಟ್ಟಿಸಿದೆ.

ಆನೆಕೆರೆ ಬಸದಿ ಕಡೆಗೆ ಪ್ರತಿದಿನವೂ ನೂರಾರು ಯಾತ್ರಾರ್ಥಿಗಳು ಸಂಚರಿಸುತ್ತಿದ್ದು, ಬಾವಿಯಿಂದ ಉಂಟಾದ ದುರ್ವಾಸನೆಯ ಕಾರಣದಿಂದಾಗಿ ಮೂಗು ಮುಚ್ಚಿಕೊಂಡೇ ತೆರಳುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಸ್ಥಳೀಯ ಟೆಂಪೋ ಚಾಲಕರು ಈ ಸಮಸ್ಯೆಯನ್ನು ಕಾರ್ಕಳ ಪುರಸಭೆಯ ಮಾಜಿ ಸದಸ್ಯ ಪ್ರಕಾಶ್ ರಾವ್ ಅವರಿಗೆ ದೂರವಾಣಿ ಮೂಲಕ ತಿಳಿಸಿದ ಬಳಿಕ, ಅವರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಕುಡಿಯುವ ನೀರಿನ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಬಾವಿಯಲ್ಲಿ ಸತ್ತಿದ್ದ ಮೀನನ್ನು ಹೊರತೆಗೆದು ಸ್ವಚ್ಛಗೊಳಿಸುವ ಕಾರ್ಯಕ್ಕೆ ಮುಂದಾದರು.

ಪುರಸಭೆಯಿಂದ ತಕ್ಷಣ ಕ್ರಮ ಕೈಗೊಳ್ಳದ ಹಿನ್ನೆಲೆ, ರಾತ್ರಿ ವೇಳೆಯಲ್ಲಿಯೇ ಪುರಸಭಾ ಕಾರ್ಮಿಕ ಆನಂದ ಬಂಡಿಮಠ ಅವರೊಂದಿಗೆ ಸೇರಿ ಮೀನನ್ನು ಹೊರತೆಗೆದು ಸಮಸ್ಯೆ ಪರಿಹರಿಸಿದ ಕಾರ್ಯವನ್ನು ಸ್ಥಳೀಯರು ಪ್ರಶಂಸಿಸಿದ್ದಾರೆ.

ಸ್ಥಳೀಯ ಆಡಳಿತದ ಅಧಿಕಾರಿಗಳು ಹೆಡ್ ಕ್ವಾಟ್ರಸ್‌ನಲ್ಲಿ ಇದ್ದರೂ ಇಂತಹ ಸಮಸ್ಯೆಗಳ ಬಗ್ಗೆ ತಕ್ಷಣ ಸ್ಪಂದಿಸುವ ವ್ಯವಸ್ಥೆ ಮಾಡಬೇಕಾಗಿದೆ. ಇಲ್ಲವಾದರೆ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನಾದರೂ ಇಂತಹ ಸಾರ್ವಜನಿಕ ಸಮಸ್ಯೆಗಳಿಗೆ ಪುರಸಭೆ ಶೀಘ್ರವಾಗಿ ಸ್ಪಂದಿಸುವಂತೆ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹವೂ ಕೇಳಿಬರುತ್ತಿದೆ.

 

Previous Post

ಮೇಲ್ಜಡ್ಡು ಪ್ರದೇಶದ 2 ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಆಗ್ರಹ – ತಹಸೀಲ್ದಾರ್, ಪೊಲೀಸರಿಗೆ ಮನವಿ…!

Next Post

ಕಮರ್ಷಿಯಲ್ ಗ್ಯಾಸ್ ಕೊರತೆ: ಜಿಲ್ಲಾಧಿಕಾರಿಗೆ ಹೋಟೆಲ್ ಮಾಲೀಕರ ಮನವಿ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಮರ್ಷಿಯಲ್ ಗ್ಯಾಸ್ ಕೊರತೆ: ಜಿಲ್ಲಾಧಿಕಾರಿಗೆ ಹೋಟೆಲ್ ಮಾಲೀಕರ ಮನವಿ….!

ಕಮರ್ಷಿಯಲ್ ಗ್ಯಾಸ್ ಕೊರತೆ: ಜಿಲ್ಲಾಧಿಕಾರಿಗೆ ಹೋಟೆಲ್ ಮಾಲೀಕರ ಮನವಿ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

30/04/2026
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

30/04/2026
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved