Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಮರ್ಷಿಯಲ್ ಗ್ಯಾಸ್ ಕೊರತೆ: ಜಿಲ್ಲಾಧಿಕಾರಿಗೆ ಹೋಟೆಲ್ ಮಾಲೀಕರ ಮನವಿ….!

Dhrishya News by Dhrishya News
14/03/2026
in ಕರಾವಳಿ, ಸುದ್ದಿಗಳು
0
ಕಮರ್ಷಿಯಲ್ ಗ್ಯಾಸ್ ಕೊರತೆ: ಜಿಲ್ಲಾಧಿಕಾರಿಗೆ ಹೋಟೆಲ್ ಮಾಲೀಕರ ಮನವಿ….!
0
SHARES
12
VIEWS
Share on FacebookShare on Twitter

ಉಡುಪಿ, ಮಾ. 14: ಪ್ರಸ್ತುತ ಕೊಲ್ಲಿ ರಾಷ್ಟ್ರಗಳಲ್ಲಿ ಯುದ್ಧದ ಭೀತಿ ಹೆಚ್ಚುತ್ತಿರುವ ಹಿನ್ನೆಲೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆ ಕುಂಠಿತವಾಗಿದ್ದು, ಇದರ ಪರಿಣಾಮವಾಗಿ ಜಿಲ್ಲೆಯ ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳನ್ನು ನಡೆಸುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಹೋಟೆಲ್ ಮಾಲೀಕರು ಆತಂಕ ವ್ಯಕ್ತಪಡಿಸಿದ್ದಾರೆ.

ಗ್ಯಾಸ್ ಸಿಲಿಂಡರ್‌ಗಳ ಕೊರತೆ ಮುಂದುವರಿದಲ್ಲಿ ಜಿಲ್ಲೆಯಾದ್ಯಂತ ಅನೇಕ ಹೋಟೆಲ್‌ಗಳನ್ನು ತಾತ್ಕಾಲಿಕವಾಗಿ ಮುಚ್ಚುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಮತ್ತು ಕಾರ್ಮಿಕರು ತಮ್ಮ ದಿನನಿತ್ಯದ ಊಟ ಹಾಗೂ ಉಪಹಾರಕ್ಕಾಗಿ ಹೋಟೆಲ್‌ಗಳನ್ನು ಅವಲಂಬಿಸಿಕೊಂಡಿದ್ದಾರೆ. ಹೋಟೆಲ್‌ಗಳು ಮುಚ್ಚಿದರೆ ಇವರಿಗೆ ಆಹಾರದ ವ್ಯವಸ್ಥೆ ದೊಡ್ಡ ಸಮಸ್ಯೆಯಾಗಲಿದೆ ಎಂದು ಹೇಳಲಾಗಿದೆ.

ಇನ್ನು ಉಡುಪಿ ಜಿಲ್ಲೆ ಪ್ರಮುಖ ಪ್ರವಾಸಿ ತಾಣವಾಗಿದ್ದು, ಪ್ರತಿದಿನ ಸಾವಿರಾರು ಪ್ರವಾಸಿಗರು ಇಲ್ಲಿ ಆಗಮಿಸುತ್ತಾರೆ. ಹೋಟೆಲ್‌ಗಳು ಕಾರ್ಯನಿರ್ವಹಿಸದಿದ್ದರೆ ಪ್ರವಾಸಿಗರ ಊಟೋಪಚಾರ ವ್ಯವಸ್ಥೆಯ ಮೇಲೂ ಪರಿಣಾಮ ಬಿದ್ದು ಪ್ರವಾಸೋದ್ಯಮಕ್ಕೂ ಧಕ್ಕೆಯಾಗುವ ಸಾಧ್ಯತೆ ಇದೆ.

ಹೋಟೆಲ್ ಕ್ಷೇತ್ರದ ಮೇಲೆ ಅವಲಂಬಿಸಿಕೊಂಡಿರುವ ಸಾವಿರಾರು ಕಾರ್ಮಿಕರು, ಜೊತೆಗೆ ಸ್ವಿಗ್ಗಿ ಹಾಗೂ ಜೋಮ್ಯಾಟೋ ಮುಂತಾದ ಡೆಲಿವರಿ ಸೇವೆಗಳಲ್ಲಿ ಕೆಲಸ ಮಾಡುವವರು ಉದ್ಯೋಗ ಕಳೆದುಕೊಳ್ಳುವ ಆತಂಕವೂ ಎದುರಾಗಿದೆ. ಇದಲ್ಲದೆ ಹೋಟೆಲ್ ಉದ್ಯಮಕ್ಕೆ ಸಂಬಂಧಿಸಿದ ಹಣ್ಣು-ತರಕಾರಿ, ದಿನಸಿ ವ್ಯಾಪಾರಿಗಳು ಸೇರಿದಂತೆ ಅನೇಕ ಸಣ್ಣ ವ್ಯಾಪಾರಸ್ಥರ ಜೀವನೋಪಾಯಕ್ಕೂ ದೊಡ್ಡ ಹೊಡೆತ ಬೀಳಲಿದೆ ಎಂದು ತಿಳಿಸಲಾಗಿದೆ.

ಒಟ್ಟಾರೆ ಈ ಸಮಸ್ಯೆಯಿಂದ ಜಿಲ್ಲೆಯ ಜನಜೀವನವೇ ಅಸ್ತವ್ಯಸ್ತವಾಗುವ ಸಾಧ್ಯತೆ ಇರುವುದರಿಂದ, ಸರ್ಕಾರ ಮತ್ತು ಸಂಬಂಧಿತ ಇಲಾಖೆಗಳು ತಕ್ಷಣ ಕ್ರಮ ಕೈಗೊಂಡು ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯನ್ನು ಶೀಘ್ರ ಪುನಃಸ್ಥಾಪಿಸಬೇಕೆಂದು ಹೋಟೆಲ್ ಮಾಲೀಕರು ಮನವಿ ಮಾಡಿದ್ದಾರೆ.

Previous Post

ಆನೆಕೆರೆ ಬಾವಿಯಲ್ಲಿ ಸತ್ತ ಮೀನು; ದುರ್ವಾಸನೆ ಮಧ್ಯೆ ಯಾತ್ರಾರ್ಥಿಗಳ ಸಂಕಷ್ಟ – ಮಾಜಿ ಸದಸ್ಯರಿಂದ ಸ್ವಚ್ಛತಾ ಕಾರ್ಯ….!

Next Post

ಯುದ್ಧದ ಪರಿಣಾಮ: ವಾಣಿಜ್ಯ ಗ್ಯಾಸ್ ಸರಬರಾಜು ವ್ಯತ್ಯಯ, ಪರ್ಯಾಯ ಇಂಧನ ಬಳಕೆ ಅಗತ್ಯ – ಡಿಸಿ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಯುದ್ಧದ ಪರಿಣಾಮ: ವಾಣಿಜ್ಯ ಗ್ಯಾಸ್ ಸರಬರಾಜು ವ್ಯತ್ಯಯ, ಪರ್ಯಾಯ ಇಂಧನ ಬಳಕೆ ಅಗತ್ಯ – ಡಿಸಿ….!

ಯುದ್ಧದ ಪರಿಣಾಮ: ವಾಣಿಜ್ಯ ಗ್ಯಾಸ್ ಸರಬರಾಜು ವ್ಯತ್ಯಯ, ಪರ್ಯಾಯ ಇಂಧನ ಬಳಕೆ ಅಗತ್ಯ – ಡಿಸಿ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

30/04/2026
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

30/04/2026
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved