ಮಂಗಳೂರು, ಮಾ. 14 : ಮಂಗಳೂರಿನ ನಂತೂರು ಜಂಕ್ಷನ್ನಲ್ಲಿ ಪಿಕಪ್ ವಾಹನ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರು ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಶನಿವಾರ ಮುಂಜಾನೆ ನಡೆದಿದೆ.
ಮುಂಜಾನೆ ಸುಮಾರು 2.45ರ ವೇಳೆಗೆ ಈ ಅಪಘಾತ ಸಂಭವಿಸಿದ್ದು, ಬಿಕರ್ನಕಟ್ಟೆಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಕಾರಿಗೆ ಕೆಪಿಟಿ ಭಾಗದಿಂದ ಪಂಪ್ವೆಲ್ ಕಡೆಗೆ ಸಾಗುತ್ತಿದ್ದ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಡಿಕ್ಕಿಯ ತೀವ್ರತೆಯಿಂದ ಕಾರಿನ ಮುಂಭಾಗ ಸಂಪೂರ್ಣವಾಗಿ ಹಾನಿಗೊಂಡಿದ್ದು, ಕಾರು ಚಾಲಕನಿಗೆ ಸಣ್ಣ ಗಾಯಗಳಾಗಿವೆ.
ಘಟನೆಯ ಮಾಹಿತಿ ತಿಳಿದ ಮಂಗಳೂರು ಕದ್ರಿ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.







