ಕಾರ್ಕಳ: ರಾಜ್ಯ ಕಾಂಗ್ರೆಸ್ ಸರಕಾರವು ಅಭಿವೃದ್ಧಿ ಕಾರ್ಯಗಳನ್ನು ಸಂಪೂರ್ಣ ಸ್ಥಗಿತಗೊಳಿಸಿದ್ದಾಗಿ ಆರೋಪಿಸಿ, ಕಾರ್ಕಳ ವಿಧಾನಸಭಾ ಕ್ಷೇತ್ರದ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಭಾರಿ ಪ್ರತಿಭಟನೆ ಜರುಗಿತು. ಈ ಪ್ರತಿಭಟನೆ ಶನಿವಾರ ಕಾರ್ಕಳ ಪುರಸಭೆ ಆವರಣದಲ್ಲಿ ಬಿಜೆಪಿ ಆಯೋಜಿಸಿದೆ.
ಕಾರ್ಕಳ ಬಿಜೆಪಿ ಕ್ಷೇತ್ರ ಅಧ್ಯಕ್ಷ ನವೀನ್ ನಾಯಕ್ ಅವರು ಮಾತನಾಡಿ, ಕಳೆದ ಎರಡು ವರ್ಷಗಳಿಂದ ರಾಜ್ಯ ಸರಕಾರವು ಗ್ರಾಮ ಪಂಚಾಯತ್ ಮತ್ತು ಪುರಸಭೆಗಳಿಗೆ ಅನುದಾನ ನೀಡಿಲ್ಲ ಎಂದು ಆರೋಪಿಸಿದರು. “ಇಡೀ ರಾಜ್ಯದಲ್ಲಿಯೂ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಕುಂಟಿತವಾಗಿದೆ. ಕಾಂಗ್ರೆಸ್ ಗೆಳೆಯರು ಶಾಸಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ, ಆದರೆ ವಾಸ್ತವದಲ್ಲಿ ಅವರು ತಮ್ಮದೇ ಸರಕಾರದಿಂದ ಅನುದಾನ ನೀಡದೇ ಅಭಿವೃದ್ಧಿಗೆ ಅಡ್ಡಿಪಡಿಸುತ್ತಿದ್ದಾರೆ,” ಎಂದು ಅವರು ಹೇಳಿದರು.
ಶಾಸಕ ವಿ. ಸುನಿಲ್ ಕುಮಾರ್ ಅಧಿಕಾರಕ್ಕೆ ಬಂದ ಬಳಿಕ ಕಾರ್ಕಳದ ಹಳ್ಳಿಹಳ್ಳಿ ಗಳ ಸಂಪರ್ಕ ರಸ್ತೆ ಅಭಿವೃದ್ಧಿ ಹೊಂದಿದ್ದು, ಅನೇಕ ಕಡೆಗಳಲ್ಲಿ ರಸ್ತೆ ಕಾಂಕ್ರೀಟ್ ಮಾಡುವ ಮೂಲಕ ಮೂಲ ಸೌಕರ್ಯ ಸುಧಾರಿಸಲಾಗಿದೆ. ಆದರೆ, ಕಾಂಗ್ರೆಸ್ ಸರಕಾರ ರಾಜಕೀಯ ದ್ವೇಷಕ್ಕಾಗಿ ನಿಟ್ಟಿ ಜವಳಿ ಪಾರ್ಕ್ ಮುಂತಾದ ಮಹತ್ವದ ಯೋಜನೆಗಳ ಅಭಿವೃದ್ಧಿಗೆ ಅಡ್ಡಿಪಡಿಸುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದರು.
ಇತ್ತೀಚೆಗೆ ಕಾರ್ಕಳಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಕ್ಷೇತ್ರಕ್ಕೆ ಯಾವುದೇ ಶಾಶ್ವತ ಯೋಜನೆಗಳನ್ನು ಘೋಷಿಸದೇ, ಜನರಲ್ಲಿ ನಿರಾಶೆ ಮೂಡಿಸಿದ್ದರೆಂದು ಟೀಕಿಸಿದರು. “ಇದು ವಾಸ್ತವದಲ್ಲಿ ವರ್ಥ್ಯ ಭೇಟಿ” ಎಂದು ಅವರು ಹೇಳಿದರು.
ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮಹಾವೀರ ಹೆಗಡೆ ಅವರು, “ಕಾರ್ಕಳದಲ್ಲಿ ಕಾಂಗ್ರೆಸ್ ಪಕ್ಷದ ನಾಟಕ ಕಂಪನಿಯ ಆಟಗಳು ಈಗ ಜನರಿಗೆ ಅರ್ಥವಾಗಿದೆ” ಎಂದು ತೀವ್ರ ಟೀಕಿಸಿದರು.
ಈ ಪ್ರತಿಭಟನೆಯಲ್ಲಿ ಪಕ್ಷದ ಪ್ರಮುಖ ಮುಖಂಡರಾದ ನಿರಂಜನ ಜೈನ್, ಬೋಳ ಸತೀಶ ಪೂಜಾರಿ, ಪ್ರಕಾಶ್ ರಾವ್, ಶ್ರೀನಿವಾಸ ಕಾರ್ಕಳ, ಜಿ. ರಾಮ ಚಂದ್ರ ನಾಯಕ್, ವಿಗ್ನೇಶ್ ಪ್ರಸಾದ್, ಯೋಗೀಶ್ ದೇವಾಡಿಗ, ವಿಜೇಂದ್ರ ಕಿಣಿ ಮತ್ತು ಹಲವಾರು ಕಾರ್ಯಕರ್ತರು ಪಾಲ್ಗೊಂಡು ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.






