ಉಡುಪಿ:ಮಾರ್ಚ್ 22: ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ ಜಸ್ಟೀಸ್ ಶ್ರೀಮತಿ ಗೀತಾ ಕೆ.ಬಿ ಅವರು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಪರ್ಯಾಯ ಶ್ರೀ ಶೀರೂರು ಮಠದ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು ಫಲ ಹಾಗೂ ಮಂತ್ರಾಕ್ಷತೆ ಸ್ವೀಕರಿಸಿದರು.
ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅವರು ಪರ್ಯಾಯ ಮಠದಲ್ಲಿ ಗುರುಗಳೊಂದಿಗೆ ಸಂವಾದ ನಡೆಸಿದರು.







