ಉಡುಪಿ:ಮಾರ್ಚ್ 25:ಮೋದಿಯವರು ಅಧಿಕಾರಕ್ಕೆ ಬಂದ ತರುವಾಯ ದೇಶದ ಹೆಣ್ಣು ಮಕ್ಕಳ ಕಣ್ಣಲ್ಲಿ ನೀರು ಬರುವುದನ್ನು ತಪ್ಪಿಸಲು ಉಜ್ವಲ ಯೋಜನೆ ಮೂಲಕ ಸಬ್ಸಿಡಿ ಕಸಿದರು ಈಗ ಯುದ್ಧ ಕೋರ ಅಮೇರಿಕಾ ಬೆಂಬಲಿಸಿ ಮಹಿಳೆಯರ ಕಣ್ಣೀರು ಹಾಕುವಂತೆ ಮಾಡುತ್ತಿದ್ದಾರೆ ಎಂದು ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಸರೋಜಾ ಹೇಳಿದರು

ಕರೋನಾದಂತೆ 140 ಕೋಟಿ ಜನರನ್ನು ರಕ್ಷಿಸುತ್ತೇನೆ,ತೈಲ ಮತ್ತು ಅಡುಗೆ ಅನಿಲದ ಕೊರತೆ ಇಲ್ಲ ಎಂದು ಹೇಳಿದ ನಂತರ ಈಗಲೂ ಮನೆಗಳಲ್ಲಿ ಹೋಟೆಲ್ ಗಳಲ್ಲಿ ಅಡುಗೆ ಅನಿಲ ಸಿಗದೇ ಇರುವುದು ಅವರು ದೇಶದ ಜನರಿಗೆ ಸುಳ್ಳು ಹೇಳಿದ್ದಾರೆ ಅಲ್ಲದೇ ಇಂತಹ ಸಂಕಷ್ಟ ಸಮಯದಲ್ಲಿ ಅಡುಗೆ ಅನಿಲ ಬೆಲೆ ಏರಿಕೆ ಮಾಡಿರುವುದು ಇದು ಕೇಂದ್ರ ಸರ್ಕಾರದ ವೈಫಲ್ಯ ಎಂದು ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಸರೋಜಾ ಅವರು ಹೇಳಿದರು.
ಅವರು ಉಡುಪಿ ಅಜ್ಜರಕಾಡು ವಿನಲ್ಲಿ ಮಾರ್ಚ್ 23ರಂದು ನಡೆದ ಗ್ಯಾಸ್ ಸಿಲಿಂಡರ್ ಕೊರತೆ ವಿರುದ್ಧ ಹಾಗೂ ಬೆಲೆಯೇರಿಕೆ ವಿರುದ್ದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.
ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿ: ಅಮೇರಿಕಾ ಹಾಗೂ ಇಸ್ರೇಲ್ ಕೇವಲ ಇರಾನ್ ಮೇಲೆ ಹೂಡಿದ ಯುದ್ಧವಲ್ಲ ಬದಲಾಗಿ ಅದು ಜಗತ್ತಿನ ಜನರ ಮೇಲೆ ನಡೆಸುತ್ತಿರುವ ಪೈಶಾಚಿಕ ದಾಳಿಯಾಗಿದೆ.ಟ್ರಂಪ್ ಪುಂಡಾಟಿಕೆ ಇಂದು ಜಗತ್ತಿನ ಜನರು ಸಂಕಟ ಪಡುವಂತಾಗಿದೆ.
ಅಮೇರಿಕಾದೊಳಗೆ ಹಾಗೂ ಜಗತ್ತಿನಾದ್ಯಂತ ಇಂದು ಯುದ್ಧ ವಿರೋಧಿ ಪ್ರತಿಭಟನೆ ನಡೆಯುತ್ತಿದೆ.ಅಮೇರಿಕಾದ ಮಿತ್ರರು ನ್ಯಾಟೋ ದೇಶಗಳು ವಿರೋಧಿಸುತ್ತಿವೆ ಆದುದರಿಂದ ಟ್ರಂಪ್ ನನ್ನು ಜಗತ್ತಿನ ಭಯೋತ್ಪಾದಕ ಎಂದು ಹೇಳಿದರು.
ಪ್ರತಿಭಟನೆಯನ್ನುದ್ದೇಶಿಸಿ ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಅಧ್ಯಕ್ಷ ಸಂಜೀವ ಬಳ್ಕೂರು ಯುದ್ಧ ವಿರೋಧಿ ಮಾತುಗಳನ್ನಾಡಿದರು. ಸಿಐಟಿಯು ಜಿಲ್ಲಾ ಅಧ್ಯಕ್ಷ ಶಶಿಧರ ಗೊಲ್ಲ, ಕೋಶಾಧಿಕಾರಿ ಕವಿರಾಜ್ ಎಸ್ ಕಾಂಚನ್ ಮಾತನಾಡಿದರು.

ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶೀಲಾವತಿ, ಬಲ್ಕೀಸ್, ಶಶಿಕಲಾ,ನಳಿನಿ, ಕೂಲಿಕಾರರ ಸಂಘಟನೆ ವೆಂಕಟೇಶ್ ಕೋಣಿ ಸಿಐಟಿಯು ಮುಖಂಡರಾದ ಉಮೇಶ್ ಕುಂದರ್, ಸುಭಾಶ್ಚಂದ್ರ ನಾಯಕ್,ರಾಮಕಾರ್ಕಡ ಇದ್ದರು.
ಒಲೆಯಲ್ಲಿ ಕಾಪಿ ಮಾಡಿ ಕುಡಿದು ಕೇಂದ್ರ ಸರ್ಕಾರದ ವಿರುದ್ಧ ವಿನೂತನ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.






