ಕಾರ್ಕಳ: ಮುಡಾರು ಗ್ರಾಮದ ಮಾಳ ಘಾಟ್ನಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ನವೀನ್ ಜಯಕುಮಾರ್ ಅವರು ಚಲಾಯಿಸುತ್ತಿದ್ದ ಬೈಕ್ ಟಿಪ್ಪರ್ಗೆ ಢಿಕ್ಕಿ ಹೊಡೆದ ಪರಿಣಾಮ, ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅತಿವೇಗ ಮತ್ತು ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.ಘಟನೆಯಲ್ಲಿ ಹಿಂಬದಿ ಸವಾರನಾಗಿದ್ದ ಯುವಕನಿಗೂ ಗಾಯಗಳಾಗಿವೆ
ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.







