ಆಸ್ಟ್ರೇಲಿಯಾ: ಆಸ್ಟ್ರೇಲಿಯಾದ ಕನ್ನಡ ಸಂಘದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮೆಲ್ಬರ್ನ್ ನಗರದಲ್ಲಿರುವ ಶ್ರೀ ಪುತ್ತಿಗೆ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ಪ್ರಸಾದವನ್ನು ಭಕ್ತಿಪೂರ್ವಕವಾಗಿ ಸ್ವೀಕರಿಸಿದರು.
ಈ ವೇಳೆ ಮಠದ ವತಿಯಿಂದ ಯದುವೀರ ಒಡೆಯರ್ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಿ, ಆಶೀರ್ವಚನಗಳನ್ನು ನೀಡಲಾಯಿತು. ಮಠದ ಧಾರ್ಮಿಕ ವಾತಾವರಣದಲ್ಲಿ ಅವರು ಕೆಲಕಾಲ ಕಳೆದಿದ್ದು, ಭಕ್ತರೊಂದಿಗೆ ಸಂಭಾಷಣೆ ನಡೆಸಿದರು.
ಕಾರ್ಯಕ್ರಮದಲ್ಲಿ ಆಸ್ಟ್ರೇಲಿಯಾದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂಭ್ರಮಿಸಿದರು. ಮೈಸೂರು ಅರಸರ ಭೇಟಿ ಸ್ಥಳೀಯ ಕನ್ನಡ ಸಮುದಾಯದಲ್ಲಿ ಸಂತಸ ಮೂಡಿಸಿತು.








