Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಏ.6 : ಜಿಲ್ಲೆಯಾದ್ಯಂತ ಬಿಜೆಪಿ ಸ್ಥಾಪನಾ ದಿನಾಚರಣೆಗೆ ಕುತ್ಯಾರು ನವೀನ್ ಶೆಟ್ಟಿ ಕರೆ

Dhrishya News by Dhrishya News
03/04/2026
in ಸುದ್ದಿಗಳು
0
ಏ.6 : ಜಿಲ್ಲೆಯಾದ್ಯಂತ ಬಿಜೆಪಿ ಸ್ಥಾಪನಾ ದಿನಾಚರಣೆಗೆ ಕುತ್ಯಾರು ನವೀನ್ ಶೆಟ್ಟಿ ಕರೆ
0
SHARES
12
VIEWS
Share on FacebookShare on Twitter

ಉಡುಪಿ: ಏಪ್ರಿಲ್ 03:ರಾಷ್ಟ್ರ ನಿರ್ಮಾಣದಲ್ಲಿ ಸಮರ್ಪಿಸಿಕೊಂಡಿರುವ ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷ ಭಾರತೀಯ ಜನತಾ ಪಾರ್ಟಿಯ ಸ್ಥಾಪನಾ ದಿನವನ್ನು ಏ.6ರಂದು ಜಿಲ್ಲೆಯಾದ್ಯಂತ ಸಂಭ್ರಮದಿಂದ ಆಚರಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು. 

 

ಅವರು ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ, ನೂತನ ಮಂಗಳೂರು ವಿಭಾಗ ಪ್ರಭಾರಿ ಭಾರತೀಶ್ ಅವರನ್ನು ಜಿಲ್ಲಾ ಬಿಜೆಪಿ ವತಿಯಿಂದ ಶಾಲು ಹೊದೆಸಿ ಅಭಿನಂದಿಸಿ ಮಾತನಾಡಿದರು.

 

ಏ.6ರಂದು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ತಮ್ಮ ಮನೆಯ ಮೇಲೆ ಬಿಜೆಪಿ ಧ್ವಜವನ್ನು ಹಾರಿಸುವ ಜೊತೆಗೆ ಜಿಲ್ಲೆಯ ಎಲ್ಲಾ 1,112 ಬೂತ್ ಗಳ ಅಧ್ಯಕ್ಷರು ತಮ್ಮ ಮನೆಯ ಮೇಲೆ ಪಕ್ಷದ ಧ್ವಜವನ್ನು ಹಾರಿಸಿ, ಬೂತ್ ಸಮಿತಿ ಸಭೆಯನ್ನು ಆಯೋಜಿಸಬೇಕು. ಪಕ್ಷದ ಸ್ಥಾಪನೆ, ಇತಿಹಾಸ ಮತ್ತು ಸಾಧನೆಗಳ ಬಗ್ಗೆ ಬೆಳಕು ಚೆಲ್ಲುವ ಕಾರ್ಯಕ್ರಮ‌ವನ್ನು ಆಯೋಜಿಸುವ ಸಹಿತ ಪಕ್ಷದ ಹಿರಿಯರನ್ನು ಗೌರವಿಸುವ ಮೂಲಕ ಸ್ಥಾಪನಾ ದಿನವನ್ನು ಭಾವನಾತ್ಮಕವಾಗಿ ಸಂಭ್ರಮದಿಂದ ಆಚರಿಸಬೇಕು ಎಂದರು.

 

ಏ.14ರಂದು ಸಂವಿಧಾನ ಶಿಲ್ಪಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯನ್ನು ಜಿಲ್ಲೆಯ ಎಲ್ಲಾ ಬೂತ್ ಗಳಲ್ಲಿ ವ್ಯವಸ್ಥಿತವಾಗಿ ಆಚರಿಸುವ ಜೊತೆಗೆ ಅಂಬೇಡ್ಕರ್ ಅವರ ಪ್ರತಿಮೆಗಳ ಸ್ವಚ್ಛತೆ ಮತ್ತು ಹಾರಾರ್ಪಣೆಗೆ ಆದ್ಯತೆ ನೀಡಬೇಕು. ಪಕ್ಷದ ಕಾರ್ಯ ಚಟುವಟಿಕೆಗಳ ಜೊತೆಗೆ ಪ್ರಶಿಕ್ಷಣ ವರ್ಗ ಹಾಗೂ ಎಸ್ಐಆರ್ ಪ್ರಕ್ರಿಯೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸದೃಢ ಪಕ್ಷ ಸಂಘಟನೆಗೆ ಬದ್ಧತೆಯಿಂದ ಶ್ರಮಿಸಬೇಕು ಎಂದು ಅವರು ತಿಳಿಸಿದರು.

 

ಮಂಗಳೂರು ವಿಭಾಗ ಪ್ರಭಾರಿ ಭಾರತೀಶ್ ಕೊಡಗು ಅವರು ಎಸ್ಐಆರ್ ಅಭಿಯಾನ, ಪ್ರಶಿಕ್ಷಣ ವರ್ಗ ಸಹಿತ ಪಕ್ಷದ ಸಂಘಟನಾತ್ಮಕ ವಿಚಾರಗಳ ಕುರಿತು ವಿಸ್ತ್ರತ ಮಾಹಿತಿ ನೀಡಿದರು.

 

ಮಾ.29ರ ‘ಮನ್ ಕೀ ಬಾತ್’ ವೀಕ್ಷಣೆಯ ವರದಿ ಅಪ್ಲೋಡ್ ಪ್ರಕ್ರಿಯೆಯಲ್ಲಿ 100% ಸಾಧನೆಗೈದಿರುವ ಮಂಡಲಗಳಿಗೆ ಅಭಿನಂದನೆ ಸಲ್ಲಿಸಲಾಯಿತು. 

 

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಮಂಡಲವಾರು ಸಂಘಟನಾತ್ಮಕ ಚಟುವಟಿಕೆಗಳ ವರದಿ ಸಂಗ್ರಹಿಸಿದರು.

 

ಪಕ್ಷದ ಪ್ರಮುಖರು, ಬಿಜೆಪಿ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಚಾಲಕರು, ಬಿಎಲ್ಎ ಮತ್ತು ಪ್ರಶಿಕ್ಷಣ ತಂಡದ ಸದಸ್ಯರು ಉಪಸ್ಥಿತರಿದ್ದರು.

ಜಿಲ್ಲಾ ಪ್ರಕೋಷ್ಠಗಳ ಸಹ ಸಂಯೋಜಕ ಶಂಕರ ಅಂಕದಕಟ್ಟೆ ವಂದೇ ಮಾತರಂ ಹಾಡಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು ಸ್ವಾಗತಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಕಾರ್ಯಕ್ರಮ ನಿರೂಪಿಸಿ, ಜಿಲ್ಲಾ ಕಾರ್ಯದರ್ಶಿ ಉಮೇಶ್ ಎ. ನಾಯ್ಕ್ ವಂದಿಸಿದರು.

Previous Post

ಬ್ರಹ್ಮಾವರ ಮಹೇಶ್ ಆಸ್ಪತ್ರೆಯಲ್ಲಿ ಪ್ರಸೂತಿ ತಜ್ಞೆ ಡಾ. ಕುಮುದಾ ಎಸ್. ಸೇರ್ಪಡೆ..!!

Next Post

ಕಾರ್ಯಕ್ರಮದಲ್ಲಿ ಕುಸಿದುಬಿದ್ದ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ – ಆಸ್ಪತ್ರೆಗೆ ದಾಖಲು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಯಕ್ರಮದಲ್ಲಿ ಕುಸಿದುಬಿದ್ದ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ – ಆಸ್ಪತ್ರೆಗೆ ದಾಖಲು

ಕಾರ್ಯಕ್ರಮದಲ್ಲಿ ಕುಸಿದುಬಿದ್ದ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ – ಆಸ್ಪತ್ರೆಗೆ ದಾಖಲು

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026