ಉಡುಪಿ, ಏ.4; ಶ್ರೀಕೃಷ್ಣ ಮಠದ ರಾಜಾಂಗಣದ ಬಳಿ, ಸೊಂಟದ ಸ್ವಾಧೀನ ಕಳೆದುಕೊಂಡು, ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು, ಸವಿತಾ ಎನ್ನುವರ ಸಹಕಾರದಿಂದ, ರಕ್ಷಿಸಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿರುವ ಘಟನೆ ಶನಿವಾರ ನಡೆದಿದೆ. ವೃದ್ಧರು ದಾಖಲು ಪ್ರಕ್ರಿಯೆ ನಡೆಸುವಾಗ ಹೆಸರು ರುದ್ರುಪ್ಪ (7೦ವ) ತಂದೆ ಸಂಗಪ್ಪ, ಚೆನ್ನಗಿರಿ ನಿವಾಸಿ ಎಂದು ಹೇಳಿಕೊಂಡಿದ್ದಾರೆ. ವಾರಸುದಾರರು ತುರ್ತಾಗಿ ಉಡುಪಿ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.






