Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕನ್ನಡ ಪರ ಹೋರಾಟ: ರಾಜ್ಯಪಾಲ ಗೆಹ್ಲೋಟ್ ವಜಾಗೊಳಿಸಲು ಒತ್ತಾಯ

ಕನ್ನಡ ವಿರೋಧಿ ರಾಜ್ಯಪಾಲ ಗೆಹ್ಲೋಟ್ ವಜಾಗೊಳಿಸಿ : ಕರವೇ ಜಿಲ್ಲಾಧ್ಯಕ್ಷ ಪ್ರಭಾಕರ್ ಪೂಜಾರಿ ಆಗ್ರಹ - ಹಿಂದಿ ಭಾಷೆ ಹೇರಿಕೆ ಹುನ್ನಾರ ಖಂಡಿಸಿ ಧರಣಿ..!

Dhrishya News by Dhrishya News
08/04/2026
in ಕರಾವಳಿ, ಸುದ್ದಿಗಳು
0
ಕನ್ನಡ ಪರ ಹೋರಾಟ: ರಾಜ್ಯಪಾಲ ಗೆಹ್ಲೋಟ್ ವಜಾಗೊಳಿಸಲು ಒತ್ತಾಯ
0
SHARES
17
VIEWS
Share on FacebookShare on Twitter

ಉಡುಪಿ: ಏಪ್ರಿಲ್ 08: ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತಿದ್ದು, ಕರ್ನಾಟಕ ವಿರೋಧಿ ಧೋರಣೆ ಅನುಸರಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಕೂಡಲೇ ಅವರನ್ನು ರಾಜ್ಯಪಾಲ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಉಡುಪಿ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡ ಬಣ)ಯ ಜಿಲ್ಲಾಧ್ಯಕ್ಷ ಅ.ರಾ. ಪ್ರಭಾಕರ್ ಪೂಜಾರಿ ಆಗ್ರಹಿಸಿದರು.

ರಾಜ್ಯ ಸರ್ಕಾರವು ಎಸ್ಎಸ್ಎಲ್ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದ ನಿರ್ಧಾರವನ್ನು ಮರು ಪರಿಶೀಲಿಸುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಜಿಲ್ಲಾ ಕರವೇ ವತಿಯಿಂದ ಮಂಗಳವಾರ (ಏ.7) ಹಮ್ಮಿಕೊಂಡಿದ್ದ ಧರಣಿಯಲ್ಲಿ ಮಾತನಾಡಿದರು.

ರಾಜ್ಯಪಾಲರು ಬರೆದಿರುವ ಪತ್ರದ ಹಿಂದೆ ಕರ್ನಾಟಕದಲ್ಲಿ ಶಾಶ್ವತವಾಗಿ ಹಿಂದಿ ಭಾಷೆ ಹೇರಿಕೆ ಮಾಡುವ ಹುನ್ನಾರವಿದೆ. ‘ಬೆಂಗಳೂರು ಸ್ಥಳೀಯ ಭಾಷೆಗಳ ಸಂರಕ್ಷಣಾ ಸಂಘ’ ಎಂಬ ಅನಾಮಧೇಯ ಸಂಘಟನೆಯ ಮನವಿಗೆ ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಅವರು ತಮ್ಮ ಕಾರ್ಯವ್ಯಾಪ್ತಿಯನ್ನೂ ಮೀರಿ ಕನ್ನಡಿಗರ ಆಶೋತ್ತರಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಹಿಂದಿ ಮಾಫಿಯಾದವರ ಪರವಾಗಿ ಕಾರ್ಯ ನಿರ್ವಹಿಸುತ್ತಿರುವಂತೆ ತೋರುತ್ತಿದೆ. ಹೀಗಾಗಿ ಅವರು ಕರ್ನಾಟಕದಲ್ಲಿ ರಾಜ್ಯಪಾಲರಾಗಿ ಉಳಿಯುವ ನೈತಿಕತೆ ಕಳೆದುಕೊಂಡಿದ್ದಾರೆ ಎಂದು ಅ. ರಾ. ಪ್ರಭಾಕರ್ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡ ವಿರೋಧಿ ನಿಲುವು ತಾಳಿರುವ ರಾಜ್ಯಪಾಲರನ್ನು ಕೇಂದ್ರ ಸರ್ಕಾರ ವಜಾ ಮಾಡುವಂತೆ ಆಗ್ರಹಿಸಿ ಎಡಿಸಿ ಅಬೀದ್ ಗದ್ಯಾಳ್ ಅವರಿಗೆ ಅ.ರಾ. ಪ್ರಭಾಕರ್ ಪೂಜಾರಿ ಮನವಿ ಸಲ್ಲಿಸಿದರು.

ಜನರಿಂದ ಆಯ್ಕೆಯಾದ ರಾಜ್ಯ ಸರ್ಕಾರವೇ ಕರ್ನಾಟಕದ ಶಿಕ್ಷಣ ನೀತಿ ಕುರಿತು ತೀಮಾರ್ನಿಸುತ್ತದೆ. ಅದನ್ನು ಪ್ರಶ್ನಿಸಲು ರಾಜ್ಯಪಾಲರು ಯಾರು? ಅವರಿಗೆ ಸಂವಿಧಾನ ಈ ಅವಕಾಶ ನೀಡಿಲ್ಲ. ಕೂಡಲೇ ಅವರನ್ನು ರಾಜ್ಯಪಾಲರ ಸ್ಥಾನದಿಂದ ವಜಾ ಮಾಡಬೇಕೆಂಬ ಮನವಿಯನ್ನು ಜಿಲ್ಲಾಡಳಿತದ ಮೂಲಕ ಕೇಂದ್ರ ಸರ್ಕಾರಕ್ಕೆ ನೀಡಲಾಯಿತು. ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮನವಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ಬಸ್ರುರ್, ಉಪಾಧ್ಯಕ್ಷ ಶಹಾಬುದ್ದೀನ್, ನಗರ ಅಧ್ಯಕ್ಷ ಅಜರುದ್ಧೀನ್, ಜಿಲ್ಲಾ ಸಾಮಾಜಿಕ ಜಾಲತಾಣದ ಸಂಚಾಲಕ ಪುರುಷೋತ್ತಮ ಪೂಜಾರಿ, ಉಡುಪಿ ಜಿಲ್ಲಾ ಮಹಿಳಾ ಘಟಕದ ಪ್ರಮುಖರಾದ ಅಶ್ವಿನಿ ನಾಯಕ್, ಅನೂಷಾ ಆಚಾರ್, ಗೀತಾ ಪೂಜಾರಿ, ಸುನಂದಾ ಕೋಟ್ಯಾನ್, ಜಿಲ್ಲಾ ಸಂಚಾಲಕ ಕೃಷ್ಣ ಪಾಂಗಾಳ, ಗೋಪಾಲ್ ದೊರೆ, ಅಯ್ಯಪ್ಪ, ಮಹೇಶ್ ಬಿ. ಎಚ್, ರಾಗು ಪೂಜಾರಿ, ಸುಕುಮಾರ್ ಶೆಟ್ಟಿ, ಅಕ್ಷತ್, ಕಾರ್ಕಳ ತಾಲೂಕು ಉಪಾಧ್ಯಕ್ಷ ಮುಬಿನ್ ಮೊದಲಾದವರು ಉಪಸ್ಥಿತರಿದ್ದರು.

Previous Post

ಮಣಿಪಾಲದ ಮಾಹೆಯಲ್ಲಿ ‘ಉತ್ಸವ್ 2026’ ಸಂಭ್ರಮ: 5 ದಿನಗಳ ಸಾಂಸ್ಕೃತಿಕ ಹಬ್ಬಕ್ಕೆ ಅದ್ದೂರಿ ಚಾಲನೆ

Next Post

ಆನ್‌ಲೈನ್ ಹೂಡಿಕೆ ಹೆಸರಲ್ಲಿ ಮೋಸ: ಟೆಲಿಗ್ರಾಂ ಲಿಂಕ್ ಮೂಲಕ ₹1.5 ಲಕ್ಷ ವಂಚನೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಆನ್‌ಲೈನ್ ಹೂಡಿಕೆ ಹೆಸರಲ್ಲಿ ಮೋಸ: ಟೆಲಿಗ್ರಾಂ ಲಿಂಕ್ ಮೂಲಕ ₹1.5 ಲಕ್ಷ ವಂಚನೆ

ಆನ್‌ಲೈನ್ ಹೂಡಿಕೆ ಹೆಸರಲ್ಲಿ ಮೋಸ: ಟೆಲಿಗ್ರಾಂ ಲಿಂಕ್ ಮೂಲಕ ₹1.5 ಲಕ್ಷ ವಂಚನೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026