Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಕೇಂದ್ರ ಸರ್ಕಾರದ ಕಠಿಣ ಆರ್ಥಿಕ ನೀತಿಗಳೇ ಬಡ ಜನರನ್ನು ಸರ್ಕಾರಿ ಯೋಜನೆಗಳಿಂದ ವಂಚಿತರನ್ನಾಗಿಸಿದೆ: ಅಜಿತ್ ಹೆಗ್ಡೆ ಮಾಳ

Dhrishya News by Dhrishya News
10/04/2026
in ಮುಖಪುಟ
0
ಕೇಂದ್ರ ಸರ್ಕಾರದ ಕಠಿಣ ಆರ್ಥಿಕ ನೀತಿಗಳೇ ಬಡ ಜನರನ್ನು ಸರ್ಕಾರಿ ಯೋಜನೆಗಳಿಂದ ವಂಚಿತರನ್ನಾಗಿಸಿದೆ: ಅಜಿತ್ ಹೆಗ್ಡೆ ಮಾಳ
0
SHARES
6
VIEWS
Share on FacebookShare on Twitter

ಕಾರ್ಕಳ:ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ಅಧಿವೇಶನದಲ್ಲಿ ಮಾತನಾಡುತ್ತಾ ಗ್ಯಾರಂಟಿ ಯೋಜನೆಗಳನ್ನು ನೀಡುವುದರಿಂದ ಸರ್ಕಾರ ದಿವಾಳಿಯಾಗುತ್ತದೆ ಸಬ್ಸಿಡಿ ಸಂಸ್ಕೃತಿಯನ್ನು ನಿಲ್ಲಿಸಿ ಎಂದು ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳ ಬಗ್ಗೆ ತಮಗಿರುವ ಅಸಮಾಧಾನವನ್ನು ಸದನದಲ್ಲಿಯೇ ಬಹಿರಂಗವಾಗಿ ತೋರ್ಪಡಿಸಿದ್ದಾರೆ. ಈಗ ಕಾರ್ಕಳ ಬಿಜೆಪಿ ಅಧ್ಯಕ್ಷರು ಕೂಡ ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿಯಾಗಿದೆ ಎನ್ನುವ ಅದೇ ಶಾಸಕರ ಮಾತನ್ನೇ ಪರೋಕ್ಷವಾಗಿ ಪುನರುಚ್ಚರಿಸಿದ್ದಾರೆ, ರಾಜ್ಯ ಸರ್ಕಾರವು ಬಡವರಿಗೆ ನೀಡುವ ಗ್ಯಾರಂಟಿ ಯೋಜನೆಗಳ ಮೇಲೆ ಕಾರ್ಕಳ ಶಾಸಕರು ಮತ್ತು ಬಿಜೆಪಿ ಅಧ್ಯಕ್ಷರಿಗೆ ಯಾಕೆ ಇಷ್ಟು ಹೊಟ್ಟೆ ಉರಿ..? ಅವಕಾಶ ಸಿಕ್ಕಾಗಲೆಲ್ಲ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ಇವರು ಜನರಿಗೆ ತಪ್ಪು ಮಾಹಿತಿ ನೀಡುತ್ತಾ ಟೀಕಿಸುವುದರ ಹಿಂದೆ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಲು ಮಾಡುವ ಹುನ್ನಾರ ಅಡಗಿದೆ. 

 

ಕೇಂದ್ರ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜನರು ತಮ್ಮ ಮಕ್ಕಳ ಶಿಕ್ಷಣಕ್ಕೆ ಮನೆ ನಿರ್ಮಾಣಕ್ಕೆ, ವ್ಯಾಪಾರ ವಹಿವಾಟುವಿಗೆ ಬ್ಯಾಂಕುಗಳಲ್ಲಿ ಸಾಲವನ್ನು ಪಡೆಯುತ್ತಿದ್ದರು, ಜನರ ಈ ಎಲ್ಲಾ ವ್ಯವಹಾರಗಳಿಗೆ ಯಾವುದೇ ನಿರ್ಬಂಧ ಇಲ್ಲದೆ ನಿರಾತಂಕವಾಗಿ ವ್ಯವಹಾರ ನಡೆಸುತ್ತಿದ್ದರು. 

 

 2014ರಲ್ಲಿ ಅಚ್ಚೆ ದಿನ್ ಕೊಡುತ್ತೇವೆ ಎನ್ನುವ ಸುಂದರ ಸುಳ್ಳಿನ ಕನಸನ್ನು ಜನರ ಮನಸ್ಸಿನಲ್ಲಿ ಬಿತ್ತಿ ಅಧಿಕಾರಕ್ಕೆ ಬಂದ ಮೋದಿ ಸರ್ಕಾರದ ಕಠಿಣ ಆರ್ಥಿಕ ನೀತಿಯಿಂದಾಗಿ ಜನ ಪ್ರತಿಯೊಂದು ಸಣ್ಣಪುಟ್ಟ ಬ್ಯಾಂಕ್ ವ್ಯವಹಾರಗಳಿಗೆ ಪಾನ್ ಕಾರ್ಡ್ ಕಡ್ಡಾಯಗೊಳಿಸಿದ ಪರಿಣಾಮವೇ ಇಂದು ಬಡ ಜನರು ಪಡೆಯುವ ಪಿಂಚಣಿ ಮುಂತಾದ ಯೋಜನೆಗಳಿಗೆ ಕೊಡಲಿಯೇಟು ಬಿದ್ದಿದೆ. 

 

  ಸಣ್ಣಪುಟ್ಟ ಹಣಕಾಸಿನ ವ್ಯವಹಾರಗಳಿಗೆ, ಲೋನ್,ಗಳಿಗೆ ಪ್ರತಿಯೊಂದು ವ್ಯವಹಾರಗಳಿಗು ಪಾನ್ ಕಾರ್ಡ್ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರದ ಕಠಿಣ ಆರ್ಥಿಕ ನೀತಿಯಿಂದಾಗಿ ಜನ ಬ್ಯಾಂಕುಗಳಲ್ಲಿ ಸಣ್ಣಪುಟ್ಟ ಸಾಲ ಪಡೆಯುಲು ಹೆಚ್ಚಿನ ಆದಾಯ ತೋರಿಸುವ ಅನಿವಾರ್ಯತೆ ಜನರಿಗೆ ಎದುರಾಗಿದೆ. 

 

ಜನ ಸಾಲ ಪಡೆಯಲು ಹೆಚ್ಚಿನ ಆದಾಯದ ದಾಖಲೆ ತೋರಿಸಿದ ಕೂಡಲೇ ಪಾನ್ ಕಾರ್ಡ್ ಮೂಲಕ ಅದರ ಮಾಹಿತಿಯು ಸರ್ಕಾರದ ಇಲಾಖೆಗಳಿಗೆ ರವಾನೆಯಾಗುತ್ತಿರುವ ಪರಿಣಾಮದಿಂದಾಗಿ ಬಡ ಜನರ ಬಿಪಿಎಲ್ ಕಾರ್ಡ್,ಗಳು ರದ್ದಾಗುತ್ತಿವೆ. ಬಂಡವಾಳಶಾಹಿಗಳ ಪರವಾಗಿರುವ ಜನ ವಿರೋಧಿಯಾಗಿರುವ ಕೇಂದ್ರ ಬಿಜೆಪಿ ಸರ್ಕಾರದ ಸರ್ವಾಧಿಕಾರಿ ಧೋರಣೆಯ ಕಠಿಣ ಆರ್ಥಿಕ ನೀತಿಯೇ ಇಂದು ಜನರಿಗೆ ಮುಳುಗಿದ್ದು ಸರ್ಕಾರಗಳು ಬಡ ಜನರಿಗೆ ನೀಡುವ ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲ ವೇತನ ಮುಂತಾದ ಯೋಜನೆಗಳಿಂದ ಕೆಲವೊಂದು ಕುಟುಂಬಗಳು ವಂಚಿತವಾಗಲು ಕೇಂದ್ರ ಮೋದಿ‌ ಸರ್ಕಾರದ ಕಠಿಣ ನಿಲುವುಗಳೇ ಕಾರಣ ಎನ್ನುವುದನ್ನು ಬಿಜೆಪಿಯವರು ಅರ್ಥ ಮಾಡಿಕೊಳ್ಳಬೇಕು. ಮೋದಿ ಸರ್ಕಾರದ ಕಠಿಣ ಆರ್ಥಿಕ ನೀತಿಯಿಂದಾಗಿ ಜನ ಬವಣೆ ಪಡುತ್ತಿರುವುದನ್ನು ಕರ್ನಾಟಕದಿಂದ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದಿರುವ ಬಿಜೆಪಿ ಸಂಸದರುಗಳು ಮೋದಿ ಸರ್ಕಾರಕ್ಕೆ ಮನವರಿಕೆ ಮಾಡಿಸಬೇಕು.  

 

ಕಾರ್ಕಳ ಶಾಸಕರು ಮತ್ತು ಅವರ ಹಿಂಬಾಲಕರು ಪದೇ ಪದೇ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ಮಾತನಾಡುತ್ತಿದ್ದು ಮುಂದೆಯೂ ಇದನ್ನೇ ಪುನರಾವರ್ತಿಸಿದರೆ ನಾವು ನೇರವಾಗಿ ಜನರ ಬಳಿಗೆ ಹೋಗಿ ಗ್ಯಾರಂಟಿ ಯೋಜನೆಗಳ ಬಗ್ಗೆ ಜನಾಭಿಪ್ರಾಯ ಸಂಗ್ರಹಕ್ಕೆ ಮುಂದಾಗಬೇಕಾಗುತ್ತದೆ ಎಂದು ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Previous Post

ಕಾರ್ಕಳ ಪುರಸಭಾ ಮಾಹಿತಿ ಹಕ್ಕು ಅಧಿಕಾರಿ ವಿರುದ್ಧ ಮಾಜಿ ಸದಸ್ಯನಿಂದ ಪ್ರತಿಭಟನೆ 

Next Post

ಕುಂದಾಪುರ : ಸ್ಕೂಟರ್ ಡಿಕ್ಕಿಯಾಗಿ ಪಾದಚಾರಿ ಮೃತ್ಯು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!

ಕುಂದಾಪುರ : ಸ್ಕೂಟರ್ ಡಿಕ್ಕಿಯಾಗಿ ಪಾದಚಾರಿ ಮೃತ್ಯು

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರೀ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ ನಾಳೆ (ಜು,25) ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ..!

ನಾಳೆ (ಆಗಸ್ಟ್ 4) ಉಡುಪಿ ಜಿಲ್ಲೆಯಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

03/08/2026
ಮಾಹೆ ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನ 2026 ಪ್ರಕಟಣೆ

ಮಾಹೆ ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನ 2026 ಪ್ರಕಟಣೆ

03/08/2026
ಭಾರತೀಯ ಫ್ಯಾಷನ್ ವೀಕ್‌ನಲ್ಲಿ ಹೌಸ್ ಆಫ್ ಮಸಾಬಾ ಅವರ ವಧು ಪ್ರದರ್ಶನಕ್ಕಾಗಿಯೇ ವಿನ್ಯಾಸಗೊಳಿಸಲಾದ ವಿಶೇಷ ಚಿನ್ನದ, ಸಾಂಪ್ರದಾಯಿಕ ಹಾಗೂ ದೇವಾಲಯ ಶೈಲಿಯ ಕರಕುಶಲ ಆಭರಣಗಳಿಗೆ ವೇದಿಕೆ ಕಲ್ಪಿಸಿಸಿರುವ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಪ್ರಾಯೋಜಿತ ಇಂದ್ರಿಯಾ

ಭಾರತೀಯ ಫ್ಯಾಷನ್ ವೀಕ್‌ನಲ್ಲಿ ಹೌಸ್ ಆಫ್ ಮಸಾಬಾ ಅವರ ವಧು ಪ್ರದರ್ಶನಕ್ಕಾಗಿಯೇ ವಿನ್ಯಾಸಗೊಳಿಸಲಾದ ವಿಶೇಷ ಚಿನ್ನದ, ಸಾಂಪ್ರದಾಯಿಕ ಹಾಗೂ ದೇವಾಲಯ ಶೈಲಿಯ ಕರಕುಶಲ ಆಭರಣಗಳಿಗೆ ವೇದಿಕೆ ಕಲ್ಪಿಸಿಸಿರುವ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಪ್ರಾಯೋಜಿತ ಇಂದ್ರಿಯಾ

03/08/2026
ಜನ್ಮಾಷ್ಟಮಿ ವಿಶೇಷ: ಶ್ರೀಕೃಷ್ಣ ಮಠದಲ್ಲಿ ಯಶಸ್ವಿಯಾಗಿ ನಡೆದ ಚಿತ್ರಕಲಾ ಸ್ಪರ್ಧೆ

ಜನ್ಮಾಷ್ಟಮಿ ವಿಶೇಷ: ಶ್ರೀಕೃಷ್ಣ ಮಠದಲ್ಲಿ ಯಶಸ್ವಿಯಾಗಿ ನಡೆದ ಚಿತ್ರಕಲಾ ಸ್ಪರ್ಧೆ

03/08/2026

Recent News

ಭಾರೀ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ ನಾಳೆ (ಜು,25) ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ..!

ನಾಳೆ (ಆಗಸ್ಟ್ 4) ಉಡುಪಿ ಜಿಲ್ಲೆಯಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

03/08/2026
ಮಾಹೆ ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನ 2026 ಪ್ರಕಟಣೆ

ಮಾಹೆ ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನ 2026 ಪ್ರಕಟಣೆ

03/08/2026
ಭಾರತೀಯ ಫ್ಯಾಷನ್ ವೀಕ್‌ನಲ್ಲಿ ಹೌಸ್ ಆಫ್ ಮಸಾಬಾ ಅವರ ವಧು ಪ್ರದರ್ಶನಕ್ಕಾಗಿಯೇ ವಿನ್ಯಾಸಗೊಳಿಸಲಾದ ವಿಶೇಷ ಚಿನ್ನದ, ಸಾಂಪ್ರದಾಯಿಕ ಹಾಗೂ ದೇವಾಲಯ ಶೈಲಿಯ ಕರಕುಶಲ ಆಭರಣಗಳಿಗೆ ವೇದಿಕೆ ಕಲ್ಪಿಸಿಸಿರುವ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಪ್ರಾಯೋಜಿತ ಇಂದ್ರಿಯಾ

ಭಾರತೀಯ ಫ್ಯಾಷನ್ ವೀಕ್‌ನಲ್ಲಿ ಹೌಸ್ ಆಫ್ ಮಸಾಬಾ ಅವರ ವಧು ಪ್ರದರ್ಶನಕ್ಕಾಗಿಯೇ ವಿನ್ಯಾಸಗೊಳಿಸಲಾದ ವಿಶೇಷ ಚಿನ್ನದ, ಸಾಂಪ್ರದಾಯಿಕ ಹಾಗೂ ದೇವಾಲಯ ಶೈಲಿಯ ಕರಕುಶಲ ಆಭರಣಗಳಿಗೆ ವೇದಿಕೆ ಕಲ್ಪಿಸಿಸಿರುವ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಪ್ರಾಯೋಜಿತ ಇಂದ್ರಿಯಾ

03/08/2026
ಜನ್ಮಾಷ್ಟಮಿ ವಿಶೇಷ: ಶ್ರೀಕೃಷ್ಣ ಮಠದಲ್ಲಿ ಯಶಸ್ವಿಯಾಗಿ ನಡೆದ ಚಿತ್ರಕಲಾ ಸ್ಪರ್ಧೆ

ಜನ್ಮಾಷ್ಟಮಿ ವಿಶೇಷ: ಶ್ರೀಕೃಷ್ಣ ಮಠದಲ್ಲಿ ಯಶಸ್ವಿಯಾಗಿ ನಡೆದ ಚಿತ್ರಕಲಾ ಸ್ಪರ್ಧೆ

03/08/2026