Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಮಾಹೆ ಮತ್ತು ಹೆಲೋಜನ್ ನಡುವೆ ಮಹತ್ವದ ಒಪ್ಪಂದ: ಬಾಹ್ಯಾಕಾಶ ಆಧಾರಿತ ಜೀವವೈದ್ಯಕೀಯ ಸಂಶೋಧನೆಗೆ ಹೊಸ ನಾಂದಿ 

Dhrishya News by Dhrishya News
13/04/2026
in ಮುಖಪುಟ
0
ಮಾಹೆ ಮತ್ತು ಹೆಲೋಜನ್ ನಡುವೆ ಮಹತ್ವದ ಒಪ್ಪಂದ: ಬಾಹ್ಯಾಕಾಶ ಆಧಾರಿತ ಜೀವವೈದ್ಯಕೀಯ ಸಂಶೋಧನೆಗೆ ಹೊಸ ನಾಂದಿ 
0
SHARES
5
VIEWS
Share on FacebookShare on Twitter

ಮಣಿಪಾಲ್, ಭಾರತ ಮತ್ತು ನ್ಯೂಯಾರ್ಕ್, ಏಪ್ರಿಲ್ 13, 2026: ಮಣಿಪಾಲ್‌ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವಿಶ್ವವಿದ್ಯಾಲಯ ಎಂದು ಪರಿಗಣಿತವಾಗಿರುವ ಉತ್ಕೃಷ್ಟ ಸಂಸ್ಥೆಯು ಅಮೆರಿಕ ಮೂಲದ ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದ ಪ್ರಮುಖ ಕಂಪನಿ ‘ಹೆಲೋಜನ್ ಕಾರ್ಪೊರೇಷನ್’ ಜತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದೆ.  

 

 ಬಾಹ್ಯಾಕಾಶ ಆಧಾರಿತ ಜೀವವೈದ್ಯಕೀಯ ಸಂಶೋಧನೆಗಾಗಿ ಈ ಒಪ್ಪಂದ ಮಾಡಿಕೊಳ್ಳಲಾಗಿದೆ. ಮಾಹೆ ಮತ್ತು ಹೆಲೋಜನ್ ಕಾರ್ಪೊರೇಷನ್ ಜಂಟಿಯಾಗಿ ಸುಧಾರಿತ ಬಯೋಮಟಿರಿಯಲ್‌ ಕುರಿತು ಸಂಶೋಧನೆ ನಡೆಸಲು, ಮಿಷನ್ ಸಿದ್ಧಪಡಿಸಲು ಮತ್ತು ಹೊಸ ಪ್ರಯೋಗಗಳನ್ನು ಕೈಗೊಳ್ಳಲು ಈ ಪಾಲುದಾರಿಕೆ ಸಹಕಾರಿಯಾಗಲಿದೆ.   

 

  

 

ಹಂತ ಹಂತವಾಗಿ ಈ ಸಂಶೋದನೆ ನಡೆಯಲಿದ್ದು, ಭೂಮಿ ಮತ್ತು ಬಾಹ್ಯಾಕಾಶದಲ್ಲಿ ಬಳಸಬಹುದಾದ ಸ್ನಾಯು ಮಾದರಿಗಳನ್ನು ಒಳಗೊಂಡಂತೆ ಜೀವಕೋಶಗಳ ಮಾದರಿ ಅಭಿವೃದ್ಧಿ ಮತ್ತು ಮೂಳೆ ಸವೆತದ ಅಧ್ಯಯನದ ಬಗ್ಗೆ ಈ ಸಹಯೋಗವು ಗಮನ ಹರಿಸಲಿದೆ. ಈ ಒಪ್ಪಂದದ ಅಡಿಯಲ್ಲಿ, ಮಾಹೆಯು ಬಾಹ್ಯಾಕಾಶ ಜೀವಶಾಸ್ತ್ರದ ಸಂಶೋಧನೆಯ ನೇತೃತ್ವ ವಹಿಸಲಿದೆ. ಭಾರತದ ಬಾಹ್ಯಾಕಾಶ ಯೋಜನೆಗಳಿಗೆ ಪೂರಕವಾದ ಹೊಸ ಪ್ರಯೋಗಗಳನ್ನು ಸಿದ್ಧಪಡಿಸುವ ಗುರಿ ಹೊಂದಿದೆ. ಈ ಒಪ್ಪಂದ ಮೂಲಕ ನಡೆಯುವ ಸಂಶೋಧನೆಗಳು ಭಾರತದ ಹೊಸ ಬಾಹ್ಯಾಕಾಶ ನಿಲ್ದಾಣ ಯೋಜನೆಗಳಿಗೆ ಪೂರಕವಾಗಿರಲಿದೆ. ಮುಖ್ಯವಾಗಿ, ಭವಿಷ್ಯದಲ್ಲಿ ಸ್ಥಾಪನೆಯಾಗಲಿರುವ ‘ಭಾರತೀಯ ಅಂತರಿಕ್ಷ ನಿಲ್ದಾಣ’ದ ಮೂಲಕ ಶೂನ್ಯ ಗುರುತ್ವಾಕರ್ಷಣೆಯಲ್ಲಿ ದೀರ್ಘಕಾಲದವರೆಗೆ ಮತ್ತು ಶಾಶ್ವತವಾಗಿ ಸಂಶೋಧನೆಗಳನ್ನು ನಡೆಸಲು ಇದು ಸಹಾಯ ಮಾಡಲಿದೆ.  

 

  

 

ಸಹಯೋಗದ ಪ್ರಮುಖಾಂಶಗಳು:  

 

ಸುಧಾರಿತ ಸಂಶೋಧನಾ ತಂತ್ರಜ್ಞಾನ: ಮಾಹೆ ತನ್ನದೇ ಆದ ‘ಆರ್ಗನಾಯ್ಡ್’ (ಅಂಗಾಂಶ ಮಾದರಿ) ಸಂಶೋಧನೆ ಯನ್ನು ಹೆಲೋಜನ್ ಸಂಸ್ಥೆಯ ಅತ್ಯಾಧುನಿಕ ತಂತ್ರಜ್ಞಾನಗಳೊಂದಿಗೆ ಸಂಯೋಜಿಸಲಿದೆ. ಇದು ಬಾಹ್ಯಾಕಾಶದಲ್ಲಿ ಬಯೋಮಟಿರಿಯಲ್‌ ಅಭಿವೃದ್ಧಿ, ಅವುಗಳ ವೈಜ್ಞಾನಿಕ ಅಧ್ಯಯನಕ್ಕೆ ನೆರವಾಗಲಿದೆ.  

 

ವೈಜ್ಞಾನಿಕ ನಾಯಕತ್ವ: ಮಾಹೆಯ ಮಣಿಪಾಲ್ ಸ್ಕೂಲ್ ಆಫ್ ಲೈಫ್ ಸೈನ್ಸಸ್‌ನ ಸಹ ಪ್ರಾಧ್ಯಾಪಕರಾದ ಡಾ. ಮಾನಶ್ ಕೆ. ಪಾಲ್ ಅವರು ಈ ಕಾರ್ಯಕ್ರಮದ ಮುಖ್ಯ ಸಂಶೋಧಕರಾಗಿ ಒಟ್ಟಾರೆ ವೈಜ್ಞಾನಿಕ ನಾಯಕತ್ವ ಮತ್ತು ಮಾರ್ಗದರ್ಶನ ನೀಡಲಿದ್ದಾರೆ. ಇವರು ಮಾಹೆಯ ಸೆಂಟರ್ ಫಾರ್ ಆರ್ಗನಾಯ್ಡ್ ಬಯೋ ಇಂಜಿನಿಯರಿಂಗ್, ಬಯೋಪ್ರಿಂಟಿಂಗ್, ಬಯೋಬ್ಯಾಂಕಿಂಗ್ ಮತ್ತು ಬಯೋಮೆಡಿಕಲ್ ಸೈನ್ಸಸ್‌ನ ಸಂಯೋಜಕರೂ ಆಗಿದ್ದಾರೆ. ಕಸ್ತೂರಬಾ ಮೆಡಿಕಲ್ ಕಾಲೇಜ್‌ನ ವೈದ್ಯಕೀಯ ತಜ್ಞರ ತಂಡ ಮತ್ತು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ತಜ್ಞರ ತಂಡ ಇವರಿಗೆ ಬೆಂಬಲ ನೀಡಲಿದೆ.  

 

ಸಂಪೂರ್ಣ ಮಿಷನ್ ಬೆಂಬಲ: ಈ ಸಹಯೋಗವು ಮಾಹೆಯ ವಿವಿಧ ಕ್ಷೇತ್ರಗಳ ಸಂಶೋಧನಾ ಪರಿಣತಿಯನ್ನು ಮತ್ತು ಹೆಲೋಜನ್ ಸಂಸ್ಥೆಯ ಸಂಪೂರ್ಣ ಬಾಹ್ಯಾಕಾಶ ಮಿಷನ್ ಸೇವೆಗಳನ್ನು ಒಂದಾಗಿಸುತ್ತದೆ.  

 

  

 

ʼಜೀವವೈದ್ಯಕೀಯ ವಿಜ್ಞಾನ ಮತ್ತು ಬಾಹ್ಯಾಕಾಶ ತಂತ್ರಜ್ಞಾನ ಸಂದಿಸುವ ಕ್ಷೇತ್ರದಲ್ಲಿ, ಭವಿಷ್ಯಕ್ಕೆ ಪೂರಕವಾದ ಸಂಶೋಧನೆಗಳನ್ನು ಉತ್ತೇಜಿಸಲು ಮಾಹೆ ಸದಾ ಸಿದ್ಧವಾಗಿದೆ ಎಂಬುದನ್ನು ಈ ಸಹಯೋಗವು ಸಾಬೀತುಪಡಿಸುತ್ತದೆ. ಶೈಕ್ಷಣಿಕ ಜ್ಞಾನ ಮತ್ತು ವೈದ್ಯಕೀಯ ಅನುಭವವನ್ನು ಬಾಹ್ಯಾಕಾಶ ತಂತ್ರಜ್ಞಾನದೊಂದಿಗೆ ಬಳಸಿಕೊಳ್ಳುವ ಮೂಲಕ, ವಿಜ್ಞಾನದ ದೃಷ್ಟಿಯಿಂದ ನಿಖರವಾದ ಹಾಗೂ ಸಮಾಜಕ್ಕೆ ಉಪಯುಕ್ತವಾದ ಹೊಸ ಮಾಹಿತಿಯನ್ನು ಪಡೆಯುವುದು ನಮ್ಮ ಗುರಿಯಾಗಿದೆʼ ಎಂದು ಮಾಹೆ ಕುಲಪತಿ ಲೆಫ್ಟಿನೆಂಟ್ ಜನರಲ್ (ಡಾ.) ಎಂ. ಡಿ. ವೆಂಕಟೇಶ್ ತಿಳಿಸಿದರು.  

 

  

 

‘ಮುಂದಿನ ತಲೆಮಾರಿನ ಜೀವವೈದ್ಯಕೀಯ ಸಂಶೋಧನೆಯಲ್ಲಿ ಮಹತ್ತರ ಸಾಧನೆ ಮಾಡಲು ಬಾಹ್ಯಾಕಾಶದ ‘ಶೂನ್ಯ ಗುರುತ್ವಾಕರ್ಷಣೆ’ ಬಳಸಿಕೊಳ್ಳುವ ನಿಟ್ಟಿನಲ್ಲಿ ಈ ಒಪ್ಪಂದವು ಒಂದು ಪ್ರಮುಖ ಹೆಜ್ಜೆಯಾಗಿದೆ. ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಪ್ರಯೋಗ ನಡೆಸಿದ ಅನುಭವವಿರುವ ಮಾಹೆಯ ಪರಿಣಿತ ತಂಡದೊಂದಿಗೆ ಕೆಲಸ ಮಾಡುತ್ತಿರುವುದು ನಮಗೆ ಸಂತಸ ತಂದಿದೆ. ಇದು ಭಾರತದ ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಅತ್ಯಂತ ಪ್ರಮುಖವಾದ ಸಹಯೋಗಗಳಲ್ಲಿ ಒಂದಾಗಲಿದೆ’ ಎಂದು ಹೆಲೋಜನ್ ಕಾರ್ಪೊರೇಶನ್‌ನ ಸಿಇಒ ಶಿಶಿರ್ ಬಂಕಾಪುರ ಅಭಿಪ್ರಾಯಪಟ್ಟರು.  

 

  

 

‘ಹೆಲೋಜನ್ ಜತೆಗಿನ ಒಪ್ಪಂದದಿಂದ ನಮ್ಮ ಸಂಶೋಧಕರಿಗೆ ಬಾಹ್ಯಾಕಾಶ ಆಧಾರಿತ ವಿಶಿಷ್ಟ ತಂತ್ರಜ್ಞಾನಗಳನ್ನು ಬಳಸುವ ಅವಕಾಶ ಸಿಗಲಿದೆ. ಸಂಶೋಧನೆ ಕ್ಷೇತ್ರದಲ್ಲಿ ಮಾಹೆ ಸಂಸ್ಥೆಗೆ ಇದೊಂದುಸ ಹೊಸ ಗರಿ ಮೂಡಿಸಲಿದೆʼ ಎಂದು ಮಣಿಪಾಲ್ ಸ್ಕೂಲ್ ಆಫ್ ಲೈಫ್ ಸೈನ್ಸಸ್‌ನ ಸಹ ಪ್ರಾಧ್ಯಾಪಕ ಡಾ. ಮಾನಶ್ ಕೆ. ಪಾಲ್ ತಿಳಿಸಿದರು.

Previous Post

ಜಿಲ್ಲಾ ಬಿಜೆಪಿಯಿಂದ ‘ನಾರಿ ಶಕ್ತಿ ವಂದನ ಸಮ್ಮೇಳನ’ದ ನೇರ ಪ್ರಸಾರ ವೀಕ್ಷಣೆ

Next Post

ಕರ್ನೂಲ್‌ನಲ್ಲಿ ಭೀಕರ ಅಪಘಾತ: ಸುಳ್ಯದ ಸಾಫ್ಟ್‌ವೇರ್ ಇಂಜಿನಿಯರ್ ಕ್ಷಿಪ್ರಾ ಸಾವು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕರ್ನೂಲ್‌ನಲ್ಲಿ ಭೀಕರ ಅಪಘಾತ: ಸುಳ್ಯದ ಸಾಫ್ಟ್‌ವೇರ್ ಇಂಜಿನಿಯರ್ ಕ್ಷಿಪ್ರಾ ಸಾವು

ಕರ್ನೂಲ್‌ನಲ್ಲಿ ಭೀಕರ ಅಪಘಾತ: ಸುಳ್ಯದ ಸಾಫ್ಟ್‌ವೇರ್ ಇಂಜಿನಿಯರ್ ಕ್ಷಿಪ್ರಾ ಸಾವು

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕರಾಯ ಬ್ರಹ್ಮಕಲಶೋತ್ಸವ: ದ್ವಾದಶ ಜ್ಯೋತಿರ್ಲಿಂಗ ದರ್ಶನ ಮೇಳಕ್ಕೆ ಚಾಲನೆ

ಕರಾಯ ಬ್ರಹ್ಮಕಲಶೋತ್ಸವ: ದ್ವಾದಶ ಜ್ಯೋತಿರ್ಲಿಂಗ ದರ್ಶನ ಮೇಳಕ್ಕೆ ಚಾಲನೆ

15/04/2026
ತೇಜಸ್ F404-IN20 ಇಂಜಿನ್‌ ನಿರ್ವಹಣೆಗೆ ದೇಶೀಯ ಡಿಪೋ: ಜಿಇ–ವಾಯುಪಡೆ ಒಪ್ಪಂದ..!

ತೇಜಸ್ F404-IN20 ಇಂಜಿನ್‌ ನಿರ್ವಹಣೆಗೆ ದೇಶೀಯ ಡಿಪೋ: ಜಿಇ–ವಾಯುಪಡೆ ಒಪ್ಪಂದ..!

15/04/2026
ಉಡುಪಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣ ಹೆಚ್ಚಿಸಲು: ಆಗ್ರಹಿಸಿ ಸಿಪಿಎಂ ಮನವಿ

ಉಡುಪಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣ ಹೆಚ್ಚಿಸಲು: ಆಗ್ರಹಿಸಿ ಸಿಪಿಎಂ ಮನವಿ

15/04/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 15 ಬುಧವಾರ  )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 15 ಬುಧವಾರ  )

15/04/2026

Recent News

ಕರಾಯ ಬ್ರಹ್ಮಕಲಶೋತ್ಸವ: ದ್ವಾದಶ ಜ್ಯೋತಿರ್ಲಿಂಗ ದರ್ಶನ ಮೇಳಕ್ಕೆ ಚಾಲನೆ

ಕರಾಯ ಬ್ರಹ್ಮಕಲಶೋತ್ಸವ: ದ್ವಾದಶ ಜ್ಯೋತಿರ್ಲಿಂಗ ದರ್ಶನ ಮೇಳಕ್ಕೆ ಚಾಲನೆ

15/04/2026
ತೇಜಸ್ F404-IN20 ಇಂಜಿನ್‌ ನಿರ್ವಹಣೆಗೆ ದೇಶೀಯ ಡಿಪೋ: ಜಿಇ–ವಾಯುಪಡೆ ಒಪ್ಪಂದ..!

ತೇಜಸ್ F404-IN20 ಇಂಜಿನ್‌ ನಿರ್ವಹಣೆಗೆ ದೇಶೀಯ ಡಿಪೋ: ಜಿಇ–ವಾಯುಪಡೆ ಒಪ್ಪಂದ..!

15/04/2026
ಉಡುಪಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣ ಹೆಚ್ಚಿಸಲು: ಆಗ್ರಹಿಸಿ ಸಿಪಿಎಂ ಮನವಿ

ಉಡುಪಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣ ಹೆಚ್ಚಿಸಲು: ಆಗ್ರಹಿಸಿ ಸಿಪಿಎಂ ಮನವಿ

15/04/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 15 ಬುಧವಾರ  )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 15 ಬುಧವಾರ  )

15/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved