Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಸನಾತನ ಹಿಂದೂ ಸಂಸ್ಕೃತಿಯ ಸಂರಕ್ಷಣೆ-ಸಂವರ್ಧನೆಗಾಗಿ ಶ್ರೀಪುತ್ತಿಗೆ ಸುಗುಣ ಶಿಬಿರ 

Dhrishya News by Dhrishya News
16/04/2026
in ಮುಖಪುಟ
0
ಸನಾತನ ಹಿಂದೂ ಸಂಸ್ಕೃತಿಯ ಸಂರಕ್ಷಣೆ-ಸಂವರ್ಧನೆಗಾಗಿ ಶ್ರೀಪುತ್ತಿಗೆ ಸುಗುಣ ಶಿಬಿರ 
0
SHARES
1
VIEWS
Share on FacebookShare on Twitter

ಉಡುಪಿ :ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಶ್ರೀ ಪುತ್ತಿಗೆ ಮಠದ ವಿಶ್ವಮಾನ್ಯ ಯತಿಕುಲ ಚಕ್ರವರ್ತಿ ಶ್ರೀಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತವರ ಶಿಷ್ಯ ಶ್ರೀಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದಂಗಳವರ ಮಾರ್ಗದರ್ಶನ ಮತ್ತು ದಿವ್ಯ ಉಪಸ್ಥಿತಿಯಲ್ಲಿ ಸಮಸ್ತ ಹಿಂದೂ ಬಾಂಧವರಿಗಾಗಿ ಉಡುಪಿ ಗೀತಾಮಂದಿರದಲ್ಲಿ ಶ್ರೀಪುತ್ತಿಗೆ ಸುಗುಣ ಶಿಬಿರವನ್ನು ಮೊಟ್ಟಮೊದಲ ಬಾರಿಗೆ ಆಯೋಜಿಸಲಾಗುತ್ತಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ. ಏಪ್ರಿಲ್ 19ರಂದು ಅಪರಾಹ್ನ 3 ಗಂಟೆಯಿಂದ ಉದ್ಘಾಟನಾ ಸಮಾರಂಭ ನಡೆಯಲಿದ್ದು ಶ್ರೀಪಾದದ್ವಯರ ದಿವ್ಯ ಉಪಸ್ಥಿತಿಯಲ್ಲಿ, ಪರ್ಯಾಯ ಶ್ರೀಶೀರೂರು ಶ್ರೀಕೃಷ್ಣ ಮಠದ ಶ್ರೀಶ್ರೀ ವೇದವರ್ಧನತೀರ್ಥ ಶ್ರೀಪಾದರು ಉದ್ಘಾಟನೆಗೈಯಲ್ಲಿದ್ದಾರೆ. ಉಡುಪಿ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಯಶಪಾಲ್ ಸುವರ್ಣ, ರಾಷ್ಟ್ರ ಪ್ರಶಸ್ತಿ ವಿಜೇತ ನಟ-ನಿರ್ದೇಶಕ ರಿಷಭ್ ಶೆಟ್ಟಿ, ಕಾಪು ಹೊಸ ಮಾರಿಗುಡಿ ಕ್ಷೇತ್ರದ ರಾಜರ್ಷಿ ವಾಸುದೇವ ಶೆಟ್ಟಿ ಮತ್ತು ಮಂಗಳೂರು ಶ್ರೀನಿವಾಸ ಯುನಿವರ್ಸಿಟಿಯ ಕುಲಾಧಿಪತಿ ಡಾ। ಶ್ರೀನಿವಾಸ ರಾವ್ ಭಾಗವಹಿಸಲಿದ್ದಾರೆ. ಸಮಗ್ರ ಶಿಬಿರಕ್ಕೆ ಭಾರತೀಯ ಸಂತ ಮಹಾಪರಿಷತ್, ವಿಶ್ವಹಿಂದೂ ಪರಿಷತ್, ಸಂಸ್ಕಾರ ಭಾರತಿ, ಕುಟುಂಬ ಪ್ರಬೋಧನ ಸಮಿತಿ ಮತ್ತು ಪತಂಜಲಿ ಯೋಗ ಸಮಿತಿಗಳ ಉಡುಪಿ ಘಟಕಗಳು ಸಹಯೋಗ ನೀಡಲಿವೆ. ಏಪ್ರಿಲ್ 20ರಿಂದ ಏಪ್ರಿಲ್ 30ರವರೆಗೆ ಪ್ರತಿದಿನ ಅಪರಾಹ್ನ 2.00ರಿಂದ ಸಂಜೆ 5.30ರವರೆಗೆ ನಡೆಯಲಿರುವ ಈ ಶಿಬಿರದಲ್ಲಿ 5 ವರ್ಷ ವಯೋಮಿತಿಯಿಂದ 60 ವರ್ಷ ಮೇಲ್ಪಟ್ಟವರೆಗೂ ಐದು ವಿಭಾಗಗಳಲ್ಲಿ ತರಗತಿಗಳನ್ನು ನಡೆಸಲಾಗುತ್ತದೆ. ಸರಳ ನಿತ್ಯ-ವಿಧಿಗಳು, ಹಿಂದೂ ಆಚಾರ-ವಿಚಾರಗಳು, ಹಾಡು, ಭಜನೆ, ಕಲೆ, ಹೂ ಕಟ್ಟುವುದು, ರಂಗವಲ್ಲಿ, ವಿವಿಧ ಆಟಗಳು, ಕರ-ಕುಶಲ, ಹಬ್ಬ-ಹರಿದಿನಗಳ ಮಾಹಿತಿ, ಉಪನ್ಯಾಸಗಳು ಹಾಗೂ ಸಾಧಕ-ಸಂವಾದ ವಿಭಾಗಗಳಲ್ಲಿ ತರಬೇತಿ ನೀಡಲಾಗುತ್ತದೆ. ಯಾವುದೇ ವಯೋಮಾನದ ಹಿಂದೂ ಬಾಂಧವರು ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂಬುದಾಗಿ ಶಿಬಿರ ಸಮಿತಿ ಮತ್ತು ಶ್ರೀಮಠದ ಪ್ರಕಟಣೆ ತಿಳಿಸಿದೆ.

 

 

ಒಟ್ಟು ಹತ್ತು ದಿನಗಳ ಕಾಲ ನಡೆಯಲಿರುವ ಈ ಶಿಬಿರದ ಸಂಪನ್ಮೂಲ ವ್ಯಕ್ತಿಗಳಾಗಿ ವಿದ್ವಾಂಸರಾದ ವೇದವ್ಯಾಸ ಪುರಾಣಿಕ ಡಾ। ಸುನಿಲ್ ಆಚಾರ್ಯ, ಕೆ ವಿ ರಮಣಾಚಾರ್ಯ, ವಿಕ್ರಮ್ ಕುಂಟಾರ್, ಸಮರ್ಥ ಜೋಷಿ, ರಾಘವೇಂದ್ರ ಆಚಾರ್ಯ, ರಾಘವೇಂದ್ರ ಭಟ್, ವಿ| ಉಷಾ ಹೆಬ್ಬಾರ್, ಸರಸ್ವತಮ್ಮ, ಸರೋಜಕ್ಕ, ಸುಮಿತ್ರ ಕೆರೆಮಠ ಮತ್ತಿತರರು ತರಬೇತಿ ನೀಡಲಿದ್ದಾರೆ. ಶಿಬಿರದಲ್ಲಿ ಹಬ್ಬ ಹರಿದಿನಗಳು ಎನ್ನುವ ವಿಚಾರವದಲ್ಲಿ ಯುಗಾದಿ, ನಾಗರ ಪಂಚಮಿ, ಚೌತಿ, ಶ್ರೀ ಕೃಷ್ಣ ಜನ್ಮಾಷ್ಟಮಿ, ನವರಾತ್ರಿ, ನರಸಿಂಹ ಜಯಂತಿ, ತುಳಸೀಪೂಜೆ-ದೀಪಾವಳಿ-ಗೋಪೂಜೆ ಸಹಿತ ಕಾರ್ತಿಕ ಮಾಸ, ಗೀತಾ ಜಯಂತಿ, ಏಕಾದಶಿ ಮುಂತಾದ ಪರ್ವ ದಿನಗಳ ಕುರಿತಂತೆ ವಿದ್ವಾಂಸರಿಂದ ಪ್ರವಚನ ಏರ್ಪಡಿಸಲಾಗಿದೆ. ವಿದ್ವಾಂಸರಾದ ಮಹಾ ಮಹೋಪಾಧ್ಯಾಯ ಶತಾವಧಾನಿ ಡಾ। ಉಡುಪಿ ರಾಮನಾಥ ಆಚಾರ್ಯ, ವಿ। ಸಗ್ರಿ ಆನಂದತೀರ್ಥ ಉಪಾಧ್ಯಾಯ, ವಿ| ಷಣ್ಮುಖ ಹೆಬ್ಬಾರ್, ಡಾ. ಸುನಿಲ್ ಆಚಾರ್ಯ, ವಿ। ಸುಧೀಂದ್ರ ಆಚಾರ್ಯ ಮುಂತಾದವರು ಹಬ್ಬಗಳ ಆಚರಣೆಗಳ ವಿಧಿ-ವಿಧಾನಗಳ ಬಗ್ಗೆ ತಿಳಿಸಿಕೊಡಲಿದ್ದಾರೆ. ಪ್ರತಿದಿನ ಸಂಜೆ 4 ರಿಂದ 5 ರವರೆಗೆ ನಡೆಯುವ ಈ ವಿಶೇಷ ಉಪನ್ಯಾಸದಲ್ಲಿ ಶಿಬಿರಾರ್ಥಿಗಳಲ್ಲದೆ ಸಾರ್ವಜನಿಕರು ಭಾಗವಹಿಸಬಹುದಾಗಿದೆ. ಇದರೊಂದಿಗೆ ಸಾಧಕ-ಸಂವಾದ ಎನ್ನುವ ಇನ್ನೊಂದು ಅವಧಿಯನ್ನು ಸಂಜೆ 5 ರಿಂದ 5:45 ರವರೆಗೆ ಹಮ್ಮಿಕೊಳ್ಳಲಾಗಿದ್ದು, ವಿವಿಧ ಕ್ಷೇತ್ರಗಳ ಸಾಧಕರ ಜೊತೆ ಮುಖಾಮುಖಿ ಪ್ರಶ್ನೋತ್ತರ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಡಾ. ಶ್ರುತಿ ಬಲ್ಲಾಳ್, ಡಾ। ಎಂ. ಮೋಹನ ಆಳ್ವ, ಡಾ। ರಾಮಕೃಷ್ಣ ಆಜಾರ್, ಡಾ। ಬಿ. ಗೋಪಾಲಾಚಾರ್ಯ, ಡಾ ವಿಜಯೇಂದ್ರ ವಸಂತ್, ಡಾ। ಸುಧೀರ್ ರಾಜ್, ಶ್ರೀ ವಾದಿರಾಜ, ಶ್ರೀ ರತ್ನಾಕರ ಇಂದ್ರಾಳಿ ಮುಂತಾದ ಸಾಧಕರು ವಿವಿಧ ವಿಚಾರಗಳ ಕುರಿತಂತೆ ಮಾಹಿತಿ ನೀಡಿ ಪ್ರೇಕ್ಷಕರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. ಏಪ್ರಿಲ್ 30ರಂದು ಹಿರಿಯಡ್ಕದಲ್ಲಿರುವ ಶ್ರೀ ಪುತ್ತಿಗೆ ಮೂಲಮಠದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿ ಹಾಗೂ ನೋಂದಣಿಗಾಗಿ 9880835626 ಅಥವಾ 8792158946 ಅಥವಾ 9663891702 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

Previous Post

ಏ.18-19 : ಅಂಬಲಪಾಡಿ ಪಡುಪಾಲು ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರ ದೈವಗಳ ನೇಮೋತ್ಸವ

Next Post

ವಿಕಾಸ ಜನಸೇವಾ ಕಛೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಆಚರಣೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ವಿಕಾಸ ಜನಸೇವಾ ಕಛೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಆಚರಣೆ

ವಿಕಾಸ ಜನಸೇವಾ ಕಛೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಆಚರಣೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಹೊಸ ವಿನ್ಯಾಸದ ನವೀಕರಣದೊಂದಿಗೆ ಯಮಹಾ ಫ್ಯಾಸಿನೊ ಶೈಲಿಯನ್ನು ಬದಲಾಯಿಸುತ್ತದೆ

ಹೊಸ ವಿನ್ಯಾಸದ ನವೀಕರಣದೊಂದಿಗೆ ಯಮಹಾ ಫ್ಯಾಸಿನೊ ಶೈಲಿಯನ್ನು ಬದಲಾಯಿಸುತ್ತದೆ

16/04/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 17 ಶುಕ್ರವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 17 ಶುಕ್ರವಾರ )

16/04/2026
ಜಾಗತಿಕ ಮಟ್ಟದಲ್ಲಿ ‘ಮಾಹೆ’ ಶಿಕ್ಷಣದ ಹಿರಿಮೆ : ಐವಿಎಫ್‌ ಚಿಕಿತ್ಸೆಯಲ್ಲಿ ಆಫ್ರಿಕಾ ವೈದ್ಯನ ಅಪೂರ್ವ ಸಾಧನೆ ..!

ಜಾಗತಿಕ ಮಟ್ಟದಲ್ಲಿ ‘ಮಾಹೆ’ ಶಿಕ್ಷಣದ ಹಿರಿಮೆ : ಐವಿಎಫ್‌ ಚಿಕಿತ್ಸೆಯಲ್ಲಿ ಆಫ್ರಿಕಾ ವೈದ್ಯನ ಅಪೂರ್ವ ಸಾಧನೆ ..!

16/04/2026
ವಿಕಾಸ ಜನಸೇವಾ ಕಛೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಆಚರಣೆ

ವಿಕಾಸ ಜನಸೇವಾ ಕಛೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಆಚರಣೆ

16/04/2026

Recent News

ಹೊಸ ವಿನ್ಯಾಸದ ನವೀಕರಣದೊಂದಿಗೆ ಯಮಹಾ ಫ್ಯಾಸಿನೊ ಶೈಲಿಯನ್ನು ಬದಲಾಯಿಸುತ್ತದೆ

ಹೊಸ ವಿನ್ಯಾಸದ ನವೀಕರಣದೊಂದಿಗೆ ಯಮಹಾ ಫ್ಯಾಸಿನೊ ಶೈಲಿಯನ್ನು ಬದಲಾಯಿಸುತ್ತದೆ

16/04/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 17 ಶುಕ್ರವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 17 ಶುಕ್ರವಾರ )

16/04/2026
ಜಾಗತಿಕ ಮಟ್ಟದಲ್ಲಿ ‘ಮಾಹೆ’ ಶಿಕ್ಷಣದ ಹಿರಿಮೆ : ಐವಿಎಫ್‌ ಚಿಕಿತ್ಸೆಯಲ್ಲಿ ಆಫ್ರಿಕಾ ವೈದ್ಯನ ಅಪೂರ್ವ ಸಾಧನೆ ..!

ಜಾಗತಿಕ ಮಟ್ಟದಲ್ಲಿ ‘ಮಾಹೆ’ ಶಿಕ್ಷಣದ ಹಿರಿಮೆ : ಐವಿಎಫ್‌ ಚಿಕಿತ್ಸೆಯಲ್ಲಿ ಆಫ್ರಿಕಾ ವೈದ್ಯನ ಅಪೂರ್ವ ಸಾಧನೆ ..!

16/04/2026
ವಿಕಾಸ ಜನಸೇವಾ ಕಛೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಆಚರಣೆ

ವಿಕಾಸ ಜನಸೇವಾ ಕಛೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಆಚರಣೆ

16/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved