Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕರ್ಣೆ ದಾಖಲೆಯವಹಿವಾಟು ಮತ್ತು ಲಾಭಾಂಶ.

Dhrishya News by Dhrishya News
02/05/2026
in ಸುದ್ದಿಗಳು
0
ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.
0
SHARES
13
VIEWS
Share on FacebookShare on Twitter

ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಪ್ರತಿಷ್ಠಿತ ಸಹಕಾರಿ ಸಂಘವಾಗಿರುವ ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಯು 2025-26ನೇ ಸಾಲಿನಲ್ಲಿ 1290 ಕೋಟಿ ರೂ ವಾರ್ಷಿಕ ವ್ಯವಹಾರ ನಡೆಸಿ 5.29 ಕೋಟಿ ರೂ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷರಾದ ಬಿ ಅಶೋಕ್ ಕುಮಾರ್ ಶೆಟ್ಟಿ ಮೈರ್ಮಾಡಿ ಕರ್ಜೆ ತಿಳಿಸಿದರು.

 

ಸುವರ್ಣ ಮಹೋತ್ಸವದ ಹೊಸ್ತಿಲಲ್ಲಿರುವ ಸಂಘವು 2025-26ನೇ ಆರ್ಥಿಕ ವರ್ಷಾಂತ್ಯಕ್ಕೆ ಒಟ್ಟು 28026 ಸದಸ್ಯರನ್ನು ಹೊಂದಿದ್ದು, ವರದಿ ವರ್ಷಾಂತ್ಯಕ್ಕೆ 186.84 ಕೋಟಿ ಠೇವಣಿ ಸಂಗ್ರಹಿಸಿರುತ್ತದೆ. ಸಂಘವು ಶೂನ್ಯ ಬಡ್ಡಿದರದ ಬೆಳೆ ಸಾಲ ಮತ್ತು ಪಶುಸಂಗೋಪನಾ ಸಾಲವನ್ನು ಬ್ರಹ್ಮಾವರ ತಾಲೂಕಿನಲ್ಲಿಯೇ ಅತೀ ಹೆಚ್ಚು ವಿತರಣೆ ಮಾಡಿರುವ ಹೆಮ್ಮೆಯ ರೈತ ಸೇವಾ ಸಹಕಾರಿ ಸಂಘವಾಗಿದೆ. ಅಲ್ಲದೆ ಗ್ರಾಹಕರ ಅನುಕೂಲಕ್ಕಾಗಿ ಚಿನ್ನಾಭರಣ ಈಡಿನ ಸಾಲ, ಗೃಹ ನಿರ್ಮಾಣ, ವಾಹನ ಖರೀದಿ, ಸ್ವಸಹಾಯ ಗುಂಪು ಸಾಲ, ಉಚಾಪತಿ ಸಾಲ, ಉತ್ಪತ್ತಿ ಈಡಿನ ಸಾಲ, ಸೇರಿದಂತೆ ವಿವಿಧ ರೀತಿಯ ಸಾಲ ಸೌಲಭ್ಯವನ್ನು ಸದಸ್ಯರಿಗೆ ನೀಡುತ್ತಿದ್ದು, 2025-26ನೇ ಸಾಲಿನ ವರ್ಷಾಂತ್ಯಕ್ಕೆ 169.35 ಕೋಟಿ ರೂ ಒಟ್ಟು ಸಾಲ ಹೊರಬಾಕಿಯನ್ನು ಹೊಂದಿ 97.39 ಶೇ ವಸೂಲಾತಿಯನ್ನು ದಾಖಲಿಸಿದೆ. ಸಂಘವು ಒಟ್ಟು 13.16 ಕೋಟಿ ರೂ ನಿಧಿ ಹಾಗೂ 62.92 ಕೋಟಿ ರೂ ಹೂಡಿಕೆ ಹೊಂದಿದ್ದು, ಒಟ್ಟು 236.18 ಕೋಟಿ ರೂ ದುಡಿಯುವ ಬಂಡವಾಳವನ್ನು ಹೊಂದಿರುತ್ತದೆ.

ಸಂಘದ ಏಳು ಶಾಖೆಗಳು ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು ಪ್ರಧಾನ ಕಛೇರಿ ಮತ್ತು ಕೊಕ್ಕರ್ಣೆ ಶಾಖೆಗೆ ಗೊದಾಮು ಒಳಗೊಂಡಂತೆ ನೂತನ ಸುಸಜ್ಜಿತ ಕಟ್ಟಡ ನಿರ್ಮಾಣದ ರೂಪುರೇಷೆ ಸಿದ್ದಗೊಂಡಿದ್ದು ಶಿಲಾನ್ಯಾಸಕ್ಕೆ ದಿನಾಂಕ ನಿಗದಿ ಪಡಿಸಲಾಗಿದೆ.

 

ಸಂಘವು ಬ್ಯಾಂಕಿಂಗ್ ವ್ಯವಹಾರ ಅಲ್ಲದೇ ಅತೀ ಕಡಿಮೆ ಬೆಲೆಯಲ್ಲಿ ರಾಸಾಯನಿಕ ರಸಗೊಬ್ಬರ, ಸಾವಯವ ಗೊಬ್ಬರ, ಕೃಷಿ ಉಪಕರಣ, ಬಿತ್ತನೆ ಬೀಜ, ಗೃಹೋಪಯೋಗಿ ವಸ್ತುಗಳು, ಸಿಮೆಂಟ್, ಮತ್ತು ಕಟ್ಟಡ ನಿರ್ಮಾಣ ಸಾಮಾಗ್ರಿಗಳ ಮಾರಾಟ ಮಳಿಗೆಯನ್ನು ಹೊಂದಿರುತ್ತದೆ.

 

ಸಂಘವು ಸರ್ಕಾರದ ಮಹತ್ವಾಕಾಂಕ್ಷೆಯ ಬೆಳೆ ವಿಮೆ ಯೋಜನೆಯನ್ನು ಯಶ್ವಸಿಯಾಗಿ ಕಾರ್ಯವ್ಯಾಪ್ತಿಯ ರೈತರಿಗೆ 2016ರಿಂದ ಅಳವಡಿಸಿದ್ದು, ಬ್ರಹ್ಮಾವರ ತಾಲೂಕಿನಲ್ಲಿಯೇ ಅತೀ ಹೆಚ್ಚು ಬೆಳೆ ವಿಮೆಯನ್ನು ದೊರಕಿಸಿ ಕೊಟ್ಟ ಸಹಕಾರಿ ಸಂಘವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಯಶಸ್ವಿನಿ ಯೋಜನೆಯಲ್ಲಿಯೂ ಕೂಡ ಸಂಘದ ಅತೀ ಹೆಚ್ಚು ಸದಸ್ಯರನ್ನು ಅಳವಡಿಸಲಾಗಿದೆ.

 

ಸಾಮಾಜಿಕ ಜವಾಬ್ದಾರಿ ಹಾಗೂ ಹಲವಾರು ಸಮಾಜಮುಖಿ ಕಾರ್ಯಗಳೊಂದಿಗೆ ಮುಂದುವರೆಯುತ್ತಿರುವ ಸಹಕಾರಿ ಸಂಘವು ಕಾರ್ಯವ್ಯಾಪ್ತಿಯ ವಿದ್ಯಾರ್ಥಿಗಳ ಶಿಕ್ಷಣಕ್ಕೆ 12 ಲಕ್ಷಕ್ಕೂ ಅಧಿಕ ಪ್ರೋತ್ಸಾಹ ಧನ ವಿತರಿಸಿದ್ದು, ಸಾರ್ವಜನಿಕ ಉಪಕಾರ ನಿಧಿ, ಸಂಘ ಸಂಸ್ಥೆ ಮತ್ತು ಧಾರ್ಮಿಕ ದೇಣಿಗೆ ನಿಧಿ, ರೈತರ ಕಲ್ಯಾಣ ನಿಧಿಯಿಂದ ಸಹಾಯ ಹಸ್ತವನ್ನು ನೀಡುತ್ತಾ ಬಂದಿರುತ್ತದೆ. ಮರಣೋತ್ತರ ನಿಧಿಯ ಮೂಲಕ ಸಾಲಗಾರ ಸದಸ್ಯರು ಮರಣ ಹೊಂದಿದ ಸಂದರ್ಭದಲ್ಲಿ ಸದಸ್ಯರ ಅವಲಂಬಿತರನ್ನು ಋಣ ಮುಕ್ತಗೊಳಿಸಲಾಗಿದೆ.

ಸೇವೆಗಳು: ಇ-ಸ್ಟಾಂಪಿಂಗ್,ಆರ್.ಟಿ.ಜಿ.ಎಸ್/ನೆಫ್ಟ್,ಸೇಫ್ ಡೆಪಾಸಿಟ್ ಲಾಕರ್,ಉಚಿತ ಶವ ಶಿಥಿಲೀಕರಣ ಪೆಟ್ಟಿಗೆ,

ಕೃಷಿ ಉತ್ಪನ್ನ ಶೇಖರಣಾ ಗೋದಾಮು,ರೈತರ ವಿಚಾರಣ ಸಂಕಿರಣ ಕಾರ್ಯಕ್ರಮ,ಬೆಳೆ ಸಮೀಕ್ಷೆ ಬಗ್ಗೆ ವಿಶೇಷ ಕಾಳಜಿ ಮತ್ತು ರೈತರೀಗೆ ಮಾಹಿತಿನೀಡುತ್ತಿದೆ.

 

 

Previous Post

ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

Next Post

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026
ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

02/05/2026
ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

02/05/2026
ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

02/05/2026

Recent News

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026
ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

02/05/2026
ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

02/05/2026
ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

02/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved