ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘ(CITU)ಮತ್ತು ಕಾರ್ಕಳ ಕಾರ್ಮಿಕ ಇಲಾಖೆಯ ಸಹಯೋಗದೊಂದಿಗೆ ಇಂದು ಕಾರ್ಕಳದಲ್ಲಿ ಬೀಡಿ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆಯನ್ನು ಕಾರ್ಕಳದ ಸಿಐಟಿಯು ಕಛೇರಿಯಲ್ಲಿ ಇಂದು ಮಾಡಲಾಯಿತು
ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ರಾಜ್ಯಾದ್ಯಂತ ಅಸಂಘಟಿತ ವಲಯದಲ್ಲಿ ದುಡಿಯುವ ಬೀಡಿ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುತ್ತಿದೆ .ಕಾರ್ಕಳದ ಲ್ಲಿ ಸಾವಿರಾರು ಬೀಡಿ ಕಾರ್ಮಿಕರು ಇದ್ದಾರೆ ಇಂದು ಮೊದಲ ಹಂತದ ಕಾರ್ಡ್ ನ್ನು ಕಾರ್ಮಿಕರಿಗೆ ನೀಡಲಾಯಿತು.
ಸದ್ಯ ಈ ಯೋಜನೆ ಯಲ್ಲಿ
1.ಅಪಘಾತ ಪರಿಹಾರ ಸೌಲಭ್ಯಗಳು
2.ಸಹಜ ಮರಣ ಪರಿಹಾರ ಮತ್ತು ಅಂತ್ಯಕ್ರಿಯೆ ವೆಚ್ಚ ದೊರಕಲಿದೆ.
ಸರಕಾರ ಇನ್ನೂ ಹೆಚ್ಚಿನ ಸವಲತ್ತುಗಳನ್ನು ನೀಡಬೇಕಾಗಿದೆ.ಕರ್ನಾಟಕ ರಾಜ್ಯದಲ್ಲಿ ಲಕ್ಷಾಂತರ ಬೀಡಿ ಕಾರ್ಮಿಕರು ಕಡಿಮೆ ವೇತನದಲ್ಲಿ ದುಡಿಯುತ್ತಿದ್ದು ಅವರಿಗೆ ಈ ಕಾರ್ಡ್ ತುಂಬಾ ಸಹಕಾರಿಯಾಗಲಿದೆ
ಮುಂದಿನ ದಿನಗಳಲ್ಲಿ ಈ ಯೋಜನೆ ಸಮರ್ಪಕವಾಗಿ ಜಾರಿ ಮಾಡಲು ಹೆಚ್ಚಿನ ಸವಲತ್ತುಗಳನ್ನು ಪಡೆಯಲು ಹೋರಾಟದ ಅಗತ್ಯ ವು ಇದೆ ಎಂದು ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಕವಿರಾಜ್. ಎಸ್ ..ಕಾಂಚನ್ ಕಾರ್ಮಿಕರಿಗೆ ಮಾಹಿತಿ ನೀಡಿದರು.
ಕಾರ್ಕಳ ಬೀಡಿ ಕಾರ್ಮಿಕ ಸಂಘದ ಅಧ್ಯಕ್ಷ ರಾದ ಸುನೀತಾ ಶೆಟ್ಟಿ, ಮತ್ತು ಸಿಐಟಿಯು ಮುಖಂಡರಾದ ಪುಷ್ಪ ಉಪಸ್ಥಿತರಿದ್ದರು.







