ಕಾರ್ಕಳ ತಾಲೂಕಿನಲ್ಲಿ “ನಾರಿ ಶಕ್ತಿ ವಂದನಾ” ಕಾರ್ಯಕ್ರಮ ವಿ . ಸುನಿಲ್ ಕುಮಾರ್ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರು ಹಾಗೂ ಬಾಲಕಿಯರನ್ನು ಗೌರವಿಸಲಾಗುತ್ತದೆ.
ಮಹಿಳೆಯರು ಇಂದು ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸುತ್ತಿದ್ದು, ಸಾಮಾಜಿಕ, ಶೈಕ್ಷಣಿಕ ಹಾಗೂ ವೃತ್ತಿಪರ ಕ್ಷೇತ್ರಗಳಲ್ಲಿ ಮುನ್ನಡೆಯುತ್ತಿದ್ದಾರೆ. ಈ ಸಾಧನೆಯನ್ನು ಗುರುತಿಸಿ ಅಭಿನಂದಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಸುರಭಿ ವಾಗ್ಮಿ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ವ್ಯಕ್ತಿಯೊಬ್ಬರು ಉಪನ್ಯಾಸ ನೀಡಲಿದ್ದು, ಮಹಿಳೆಯರಲ್ಲಿ ಆತ್ಮವಿಶ್ವಾಸ ಮತ್ತು ಪ್ರೇರಣೆಯನ್ನು ಮೂಡಿಸುವ ಸಂದೇಶ ಹಂಚಿಕೊಳ್ಳಲಿದ್ದಾರೆ.
ಓಡಿಯೂರು ಮಠದ ಸಾದ್ವಿ ಶ್ರೀ ಶ್ರೀ ಮಾತನಂದಮಯಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಲಿದ್ದಾರೆ.
ಇದೇ ವೇಳೆ ಕೊರಗ ಸಮುದಾಯದಲ್ಲಿ ಬೆಳೆದು ವೈದ್ಯಕೀಯ ಕ್ಷೇತ್ರದಲ್ಲಿ ಪದವಿ ಪಡೆದು ಮಂಗಳೂರಿನಲ್ಲಿ ಅಧ್ಯಾಪಕಿಯಾಗಿ ಸೇವೆ ಸಲ್ಲಿಸುತ್ತಿರುವ ಡಾ . ಸವಿತಾ ಕೊರಗ ಅವರು ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದು, ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಲಿದ್ದಾರೆ.
ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಮಹಿಳೆಯರು ಹಾಗೂ ಬಾಲಕಿಯರಿಗೆ ಈ ಸಂದರ್ಭದಲ್ಲಿ ಸನ್ಮಾನ ನಡೆಯಲಿದೆ.








