ಉಡುಪಿ: ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದ ನಿವಾಸಿ ಜಯಂತಿ ಅಮೀನ್ ಅವರ ಗಂಡ ಪ್ರವೀಣ್ ಕುಮಾರ್ (76) ಅವರು ಮೇ 15ರಂದು ಮಧ್ಯಾಹ್ನ 3:30ರ ಸುಮಾರಿಗೆ ಉಡುಪಿ ತಾಲೂಕು ತೆಂಕನಿಡಿಯೂರು ಗ್ರಾಮದ ತೊಟ್ಟಂನಲ್ಲಿರುವ ಸೂರಜ್ ಕುಮಾರ್ ಅವರ ಮನೆಯಿಂದ ತೆರಳಿದ್ದು, ಬಳಿಕ ಮನೆಗೆ ವಾಪಾಸು ಬಾರದೇ ಕಾಣೆಯಾಗಿದ್ದಾರೆ.
ಸಂಬಂಧಿಕರ ಮನೆಗಳು ಸೇರಿದಂತೆ ವಿವಿಧ ಕಡೆಗಳಲ್ಲಿ ಹುಡುಕಾಟ ನಡೆಸಿದರೂ ಅವರ ಬಗ್ಗೆ ಯಾವುದೇ ಸುಳಿವು ದೊರಕಿಲ್ಲ ಎಂದು ತಿಳಿದುಬಂದಿದೆ.
ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಮನುಷ್ಯ ಕಾಣೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.







