ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ಎರಡು ಆನೆಗಳ ಕಾಳಗದ ವೇಳೆ ಚೆನ್ನೈ ಮೂಲದ ಪ್ರವಾಸಿ ಮಹಿಳೆ ತುಳಸಿ (ಜಿನ್ನು) ಮೃತಪಟ್ಟ ದಾರುಣ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ರಕ್ಷಿಸಲು ಹಾಗೂ ಸಮಯಕ್ಕೆ ಚಿಕಿತ್ಸೆ ನೀಡಲು ವಿಳಂಬವಾಗಿದ್ದು, ಅರಣ್ಯ ಇಲಾಖೆಯ ನಿರ್ಲಕ್ಷ್ಯ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಮೃತಳ ಪತಿ ಜೋಯೆಲ್, ಪತ್ನಿಯ ಕಣ್ಣುಗಳನ್ನು ದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಸರ್ಕಾರ ಮೃತರ ಕುಟುಂಬಕ್ಕೆ ₹20 ಲಕ್ಷ ಪರಿಹಾರ ಘೋಷಿಸಿದೆ. ಘಟನೆಗೆ ಸಂಬಂಧಿಸಿ ಸುರಕ್ಷತಾ ಲೋಪ ಹಾಗೂ ಮಾವುತರ ನಿರ್ಲಕ್ಷ್ಯದ ಆರೋಪಗಳು ಕೇಳಿಬಂದಿವೆ.







