ಉಡುಪಿ : ಮೇ 21:ಅರಬ್ಬಿ ಸಮುದ್ರದಲ್ಲಿ ಭಾರಿ ಗಾಳಿ ಮತ್ತು ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಹಿನ್ನೆಲೆ, ಮೇ 25ರವರೆಗೆ ಕರ್ನಾಟಕ ಕರಾವಳಿಯ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರ್ನಾಟಕ, ಕೇರಳ, ಗೋವಾ ಸೇರಿದಂತೆ ಕರಾವಳಿ ಪ್ರದೇಶಗಳಲ್ಲಿ ಗಂಟೆಗೆ 40ರಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಕೆಲವೆಡೆ ಸಮುದ್ರ ಅಲೆಗಳು ಅಬ್ಬರಿಸುವ ಭೀತಿಯೂ ಇದೆ.
ಈಗಾಗಲೇ ಸಮುದ್ರಕ್ಕೆ ತೆರಳಿರುವ ಮೀನುಗಾರರು ತಕ್ಷಣ ಸುರಕ್ಷಿತವಾಗಿ ದಡ ಸೇರಲು ಸೂಚಿಸಲಾಗಿದೆ. ಹವಾಮಾನ ಇಲಾಖೆ ನೀಡುವ ಅಧಿಕೃತ ಮಾಹಿತಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.







