ಕುಂದಾಪುರ: ಕುಂದಾಪುರ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ನಂಜಾನಾಯ್ಕ್ ಎನ್. ಅವರು ಠಾಣಾ ಸಿಬ್ಬಂದಿಗಳೊಂದಿಗೆ ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ, ಕುಂದಾಪುರ ಕಸಬಾ ಗ್ರಾಮದ ಚರ್ಚ್ ರೋಡ್ನಿಂದ ಕೋಡಿಗೆ ಸಂಪರ್ಕಿಸುವ ಸೇತುವೆ ಮೇಲೆ ಕೆಲವರು ಗುಂಪುಗೂಡಿ ಗಲಾಟೆ ನಡೆಸುತ್ತಿರುವುದು ಪತ್ತೆಯಾಗಿದೆ.
ಸುಮಾರು ರಾತ್ರಿ 10 ಗಂಟೆ ಸುಮಾರಿಗೆ ಸಾರ್ವಜನಿಕ ಸ್ಥಳದಲ್ಲಿ ಜೋರಾಗಿ ಬೊಬ್ಬೆ ಹಾಕುತ್ತಾ, ಕೈಕೈ ಮಿಲಾಯಿಸಿ, ಒಬ್ಬರನ್ನೊಬ್ಬರು ದೂಡಾಡಿಕೊಂಡು ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ಉಂಟು ಮಾಡುತ್ತಿರುವುದನ್ನು ಗಮನಿಸಿದ ಪೊಲೀಸರು ತಕ್ಷಣ ಇಲಾಖೆಯ ಜೀಪ್ ನಿಲ್ಲಿಸಿ ಸಿಬ್ಬಂದಿಗಳ ಸಹಕಾರದಿಂದ ಸ್ಥಳವನ್ನು ಸುತ್ತುವರೆದಿದ್ದಾರೆ.
ಈ ವೇಳೆ ಕೆಲವರು ಸ್ಥಳದಿಂದ ಪರಾರಿಯಾಗಿದ್ದು, ಉಳಿದವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಬಂಧಿತರನ್ನುನವೀನ – ಕಸಬಾ ಗ್ರಾಮ, ಕುಂದಾಪುರ ತಾಲೂಕುಪ್ರಶಾಂತ – ಕೋಡಿ ಕಸಬಾ ಗ್ರಾಮ ವಿಘ್ನೇಶ್ – ಹಂಗಳೂರು ಗ್ರಾಮ ಮತ್ತು ಅಂಚೆಗಣೇಶ್ – ಕೋಡಿ ಕಸಬಾ ಗ್ರಾಮಎಂದು ಗುರುತಿಸಲಾಗಿದೆ.
ಇನ್ನೂ ಪರಾರಿಯಾದವರಲ್ಲಿ ಹೋವಿನಟೆಬಲ್ ಮಹೇಶ್, ನಿಶಾಂತ್ ಹಾಗೂ ಇತರರು ಇದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







