Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: ಉದ್ಯೋಗದ ಆಮಿಷ: ₹6.23 ಲಕ್ಷ ವಂಚನೆ; ಪ್ರಕರಣ ದಾಖಲು

Dhrishya News by Dhrishya News
24/05/2026
in ಸುದ್ದಿಗಳು
0
ಉಡುಪಿ: ಉದ್ಯೋಗದ ಆಮಿಷ: ₹6.23 ಲಕ್ಷ ವಂಚನೆ; ಪ್ರಕರಣ ದಾಖಲು
0
SHARES
16
VIEWS
Share on FacebookShare on Twitter

ಉಡುಪಿ: ಯು.ಕೆ. ದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ₹6.23 ಲಕ್ಷ ಹಣ ಪಡೆದು ವಂಚನೆ ಎಸಗಿದ ಆರೋಪದಲ್ಲಿ ನಾಲ್ವರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಿರ್ಯಾದಿದಾರ ಎನ್.ಆರ್. ಪದ್ಮನಾಭ ಉಪಾಧ್ಯ, ನಿಟ್ಟೂರು, ಉಡುಪಿ ಇವರು ಉದ್ಯೋಗ ಹುಡುಕುತ್ತಿದ್ದ ವೇಳೆ 1ನೇ ಆರೋಪಿತೆ ಆಶ್ಲೆ ಕರ್ನೇಲಿಯೋ ಅವರು 2025ರ ಫೆಬ್ರವರಿ 12ರಂದು ಸಂಪರ್ಕಿಸಿ, ಯು.ಕೆ.ನಲ್ಲಿ ಹೌಸ್ ಕೀಪಿಂಗ್ ಸೂಪರ್‌ವೈಸರ್ ಉದ್ಯೋಗವಿದ್ದು ವ್ಯವಸ್ಥೆ ಮಾಡಿಕೊಡುವುದಾಗಿ ನಂಬಿಕೆ ಮೂಡಿಸಿದ್ದರೆಂದು ದೂರಿನಲ್ಲಿ ತಿಳಿಸಿದ್ದಾರೆ.

ಬಳಿಕ ತನ್ನ ಸಹಾಯಕಿ ಎಂದು ಪರಿಚಯಿಸಿದ 2ನೇ ಆರೋಪಿ ಸವಿತಾ ಅವರ ಮೊಬೈಲ್ ಸಂಖ್ಯೆಯನ್ನು ನೀಡಿದ್ದು, ವೀಸಾ ಪ್ರಕ್ರಿಯೆಗಾಗಿ ₹2 ಲಕ್ಷ ಪ್ರೊಸೆಸಿಂಗ್ ಶುಲ್ಕ ಪಾವತಿಸುವಂತೆ ತಿಳಿಸಿದ್ದರೆನ್ನಲಾಗಿದೆ. ಅದರಂತೆ ಪಿರ್ಯಾದಿದಾರರು 2025ರ ಮಾರ್ಚ್ 19ರಂದು 2ನೇ ಆರೋಪಿಯ ಬ್ಯಾಂಕ್ ಆಫ್ ಬರೋಡ ಖಾತೆಗೆ ₹2 ಲಕ್ಷ ಜಮಾ ಮಾಡಿದ್ದರು.

ನಂತರ 3ನೇ ಆರೋಪಿ ಪ್ರಕೃತಿ ಹಾಗೂ 4ನೇ ಆರೋಪಿ ಪ್ರಶಾಂತ್ ಅವರು ಕೂಡ ಮೆಡಿಕಲ್ ಪರೀಕ್ಷೆ, ವೀಸಾ ಸ್ಟಾಂಪಿಂಗ್ ಹಾಗೂ ಎಂಬಸಿ ಪ್ರೊಸೆಸಿಂಗ್ ಹೆಸರಿನಲ್ಲಿ ಹಂತ ಹಂತವಾಗಿ ಹಣ ಪಡೆದುಕೊಂಡಿದ್ದು, ಒಟ್ಟು ₹6,23,000 ಹಣ ಹಾಗೂ ಪಾಸ್‌ಪೋರ್ಟ್ ತಮ್ಮ ವಶಕ್ಕೆ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಆದರೆ ಬಳಿಕ ವೀಸಾ ತಿರಸ್ಕೃತವಾಗಿದೆ ಎಂದು ಹೇಳಿ ಹಣ ಹಾಗೂ ಪಾಸ್‌ಪೋರ್ಟ್ ವಾಪಸು ನೀಡುವುದಾಗಿ ತಿಳಿಸಿದ್ದರೂ, ನಂತರ ಆರೋಪಿತರು ಫೋನ್ ಸಂಪರ್ಕ ಕಡಿತಗೊಳಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತು ಮಾನ್ಯ ನ್ಯಾಯಾಲಯದ ಖಾಸಗಿ ದೂರಿನ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Previous Post

ಕುಂದಾಪುರ: ಸಾರ್ವಜನಿಕ ಸ್ಥಳದಲ್ಲಿ ಗಲಾಟೆ; ನಾಲ್ವರು ಪೊಲೀಸ್ ವಶಕ್ಕೆ..!

Next Post

ಬಸ್ಸಿಗೆ ಕಾಯುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ; ಚಿಕಿತ್ಸೆ ಫಲಿಸದೇ ಸಾವು..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!

ಬಸ್ಸಿಗೆ ಕಾಯುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ; ಚಿಕಿತ್ಸೆ ಫಲಿಸದೇ ಸಾವು..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 24 ಬಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 24 ಬಾನುವಾರ )

24/05/2026
ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!

ಬಸ್ಸಿಗೆ ಕಾಯುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ; ಚಿಕಿತ್ಸೆ ಫಲಿಸದೇ ಸಾವು..!

24/05/2026
ಉಡುಪಿ: ಉದ್ಯೋಗದ ಆಮಿಷ: ₹6.23 ಲಕ್ಷ ವಂಚನೆ; ಪ್ರಕರಣ ದಾಖಲು

ಉಡುಪಿ: ಉದ್ಯೋಗದ ಆಮಿಷ: ₹6.23 ಲಕ್ಷ ವಂಚನೆ; ಪ್ರಕರಣ ದಾಖಲು

24/05/2026
ಕುಂದಾಪುರ: ಸಾರ್ವಜನಿಕ ಸ್ಥಳದಲ್ಲಿ ಗಲಾಟೆ; ನಾಲ್ವರು ಪೊಲೀಸ್ ವಶಕ್ಕೆ..!

ಕುಂದಾಪುರ: ಸಾರ್ವಜನಿಕ ಸ್ಥಳದಲ್ಲಿ ಗಲಾಟೆ; ನಾಲ್ವರು ಪೊಲೀಸ್ ವಶಕ್ಕೆ..!

24/05/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 24 ಬಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 24 ಬಾನುವಾರ )

24/05/2026
ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!

ಬಸ್ಸಿಗೆ ಕಾಯುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ; ಚಿಕಿತ್ಸೆ ಫಲಿಸದೇ ಸಾವು..!

24/05/2026
ಉಡುಪಿ: ಉದ್ಯೋಗದ ಆಮಿಷ: ₹6.23 ಲಕ್ಷ ವಂಚನೆ; ಪ್ರಕರಣ ದಾಖಲು

ಉಡುಪಿ: ಉದ್ಯೋಗದ ಆಮಿಷ: ₹6.23 ಲಕ್ಷ ವಂಚನೆ; ಪ್ರಕರಣ ದಾಖಲು

24/05/2026
ಕುಂದಾಪುರ: ಸಾರ್ವಜನಿಕ ಸ್ಥಳದಲ್ಲಿ ಗಲಾಟೆ; ನಾಲ್ವರು ಪೊಲೀಸ್ ವಶಕ್ಕೆ..!

ಕುಂದಾಪುರ: ಸಾರ್ವಜನಿಕ ಸ್ಥಳದಲ್ಲಿ ಗಲಾಟೆ; ನಾಲ್ವರು ಪೊಲೀಸ್ ವಶಕ್ಕೆ..!

24/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved