ಮಣಿಪಾಲ: ಮೇ 29: ಉಡುಪಿ ತಾಲೂಕಿನ 80 ಬಡಗುಬೆಟ್ಟು ಗ್ರಾಮದ ನಿವಾಸಿಯಾಗಿದ್ದು,ಮೂಲತಃ ನೇಪಾಳ ದೇಶದವರಾಗಿರುವ ಹಿಮ್ ಬಹದ್ದೂರ್ (38), ಅವರ ಪುತ್ರ ಮನೋಜ್ (20) ಮಣಿಪಾಲದ ಲಕ್ಷ್ಮೀಂದ್ರ ನಗರದ ಪ್ರಥಮ್ ಇನ್ ಹೋಟೆಲ್ನಲ್ಲಿ ವೇಟರ್ ಆಗಿ ಕೆಲಸ ಮಾಡುತ್ತಾ ಅಲ್ಲೇ ವಾಸವಾಗಿದ್ದನು.
ಮೇ 18ರಂದು ರಾತ್ರಿ 11 ಗಂಟೆ ಸುಮಾರಿಗೆ ಮನೋಜ್ ವಿಪರೀತ ಮದ್ಯಪಾನ ಸೇವಿಸಿ ಗಲಾಟೆ ಮಾಡುತ್ತಿರುವುದಾಗಿ ಸಹೋದ್ಯೋಗಿಯೊಬ್ಬರು ಹಿಮ್ ಬಹದ್ದೂರ್ ಅವರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದರು. ಬಳಿಕ ಮಗನನ್ನು ಮನೆಗೆ ಕರೆದುಕೊಂಡು ಹೋಗಲು ಹೋದಾಗ ಮನೋಜ್ ನಿರಾಕರಿಸಿ ಅಲ್ಲಿಂದ ಓಡಿ ಹೋಗಿದ್ದಾನೆ ಎನ್ನಲಾಗಿದೆ.
ನಂತರ ಸಂಬಂಧಿಕರು ಹಾಗೂ ಕುಟುಂಬಸ್ಥರು ಎಲ್ಲೆಡೆ ಹುಡುಕಾಟ ನಡೆಸಿದರೂ ಆತ ಪತ್ತೆಯಾಗಿಲ್ಲ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಗಂಡಸು ಕಾಣೆಯಾದ ಪ್ರಕರಣ ದಾಖಲಾಗಿದೆ.







