ಉಡುಪಿ.:ದಾಖಲೆಯ 4339ನೇ ದಿನವನ್ನು ಪೂರೈಸಿದ, ಸತತವಾಗಿ 12 ವರ್ಷಗಳು ಧಿರ್ಘಾವಧಿ ಭಾರತದ ಪ್ರಧಾನ ಸೇವಕರಾಗಿ ಸೇವೆ ಸಲ್ಲಿಸಿದ ನಮ್ಮ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ದಾಮೋದರ ದಾಸ್ ಮೋದಿಯವರಿಗೆ ದೀರ್ಘಾಯುಷ್ಯ ಕೋರಿ ಹಾಗೂ 2047ರ ವಿಕಸಿತ ಭಾರತದ ಸಂಕಲ್ಪ ಸಾಧನೆ ಯ ಯಶಸ್ಸನ್ನು ಕೋರಿ ಇಂದು ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ಪರ್ಯಾಯ ಶ್ರೀ ಶೀರೂರು ಶ್ರೀ ಕೃಷ್ಣ ಮಠ ದ ಶ್ರೀ ಶ್ರೀ ವೇದವರ್ಧನತೀರ್ಥ ಶ್ರೀ ಪಾದರಿಂದ ಹಾಗೂ ಭಾರತೀಯ ಜನತಾಪಕ್ಷ ಉಡುಪಿ ಜಿಲ್ಲೆ ವತಿಯಿಂದ ವಿಶೇಷ ಪೂಜೆ ಜೂನ್ 10ರಂದು ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಠ ದ ದಿವಾನರಾದ ಶ್ರೀ ಉದಯ ಕುಮಾರ್ ಸರಳತ್ತಾಯ.ಉಡುಪಿಯ ಜನಪ್ರಿಯ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ, ಜಿಲ್ಲಾಧ್ಯಕ್ಷ ಶ್ರೀ ಕುತ್ಯಾರು ನವೀನ್,ಪ್ರ.ಕಾರ್ಯದರ್ಷಿಗಳಾದ ಶ್ರೀ ಶ್ರೀಕಾಂತ್ ನಾಯಕ್, ಶ್ರೀ ದಿನಕರಶೆಟ್ಟಿ, ಜಿಲ್ಲಾ ವಕ್ತಾರ ಶ್ರೀ ಮಧುಕರ ಮುದ್ರಾಡಿ, ಶ್ರೀ ಸುಪ್ರಸಾದ್ ಶೆಟ್ಟಿ, ಮಹಿಳಾ ಮೋರ್ಚಾದ ಶ್ರೀ ಮತಿ ಸಂಧ್ಯಾ ರಮೇಶ್,ನಯನಾ ಗಣೇಶ್, ವೀಣಾ ಶೆಟ್ಟಿ, ಪ್ರಜ್ಞಾ ಶೆಟ್ಟಿ, ಪದ್ಮಾ ರತ್ನಾಕರ್, ಶ್ರೀ ಅಜಿತ್ ಪೈ, ಶಾಮ್ ಪ್ರಸಾದ್ ಕುಡ್ವ ಉಪಸ್ಥಿತರಿದ್ದರು.






