ಬ್ರಹ್ಮಾವರ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ.) ಬ್ರಹ್ಮಾವರ ತಾಲೂಕು, ಬಾರ್ಕೂರು ವಲಯ ಇದರ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮವನ್ನು ಸರಕಾರಿ ಪ್ರೌಢಶಾಲೆ, ಕಾವಡಿ ಇಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರೌಢಶಾಲೆಯ ಮುಖ್ಯ ಶಿಕ್ಷಕಿರಾದ *ಶ್ರೀಮತಿ ಜಯಶ್ರೀ ನೆರವೇರಿಸಿ ಜೂನ್ ತಿಂಗಳಲ್ಲಿ ವಿಶ್ವದಾದ್ಯಂತ ಅನೇಕ ಸಂಘ ಸಂಸ್ಥೆಗಳು ಪರಿಸರ ರಕ್ಷಣೆಗೆ ಪೂರಕವಾಗಿ ಅನೇಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿದ್ದು ಇದರಿಂದ ವಿದ್ಯಾರ್ಥಿಗಳಲ್ಲಿ ಪರಿಸರದ ಸಂರಕ್ಷಣೆಯ ಬಗ್ಗೆ ಅರಿವು ಹಾಗೂ ಕಾಳಜಿವಹಿಸಬೇಕಾದ ಅರಿವು ಮೂಡಿಸಿದಂತಾಗುತ್ತದೆ. ಇಂದಿನ ಯುವ ಪೀಳಿಗೆ ಸ್ವಚ್ಛಂದವಾಗಿ ಉಸಿರಾಡುತ್ತಿದೆ ಎಂಬುದಕ್ಕೆ ಮುಖ್ಯ ಕಾರ್ಯಭೂತರು ನಮ್ಮ ಹಿರಿಯರು, ಆದ್ದರಿಂದ ಇಂದಿನ ಯುವ ಪೀಳಿಗೆ ಗಿಡ ನಾಟಿ ಮಾಡಿ ಪೋಷಣೆ ಮಾಡುವ ಮೂಲಕ ಮುಂದಿನ ಪೀಳಿಗೆಗೆ ನಾವು ಸ್ವಚ್ಛಂದ ಪರಿಸರವನ್ನು ಹಸ್ತಾಂತರಿಸಬೇಕಾಗಿದೆ. ಪ್ರತಿ ವಿದ್ಯಾರ್ಥಿಗಳು ತಮ್ಮ ಹುಟ್ಟಿದ ದಿನದಂದು ಕನಿಷ್ಠ ಒಂದು ಗಿಡ ನಾಟಿಮಾಡಿ ಅದನ್ನು ಪೋಷಣೆ ಮಾಡಿದಲ್ಲಿ ಅದಕ್ಕಿಂತ ದೊಡ್ಡ ಉಡುಗೊರೆ ಇಲ್ಲ ಎಂಬುದಾಗಿ ಶುಭ ಹಾರೈಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಇಕೋ ಕ್ಲಬ್ನ ಸದಸ್ಯರಾದ ಸುಂದರ್ ಇವರು ಇಂದಿನ ದಿನಗಳಲ್ಲಿ ಪರಿಸರದಲ್ಲಿ ಆಮ್ಲಜನಕದ ಕೊರತೆ ಉಂಟಾಗುತ್ತಿದೆ ಇದಕ್ಕೆ ಮುಖ್ಯ ಕಾರಣ ಅಭಿವೃದ್ಧಿಯ ಹೆಸರಿನಲ್ಲಿ ಪರಿಸರದ ಮೇಲೆ ಆಗುವ ದೌರ್ಜನ್ಯಗಳು ಮುಖ್ಯ ಕಾರಣವಾಗಿದೆ. ಅಭಿವೃದ್ಧಿಯ ಜೊತೆ ಜೊತೆಗೆ ಪರಿಸರದ ಬಗ್ಗೆ ಕಾಳಜಿಯು ಕೂಡ ಅಷ್ಟೇ ಮುಖ್ಯವಾಗಿದ್ದು ಪರಿಸರವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಪ್ರಜೆಯ ಕರ್ತವ್ಯ ಹಾಗೂ ಜವಾಬ್ದಾರಿ ಆಗಿರುತ್ತದೆ.
ನಮ್ಮ ಹಿರಿಯರು ಪರಿಸರದಲ್ಲಿ ದೈವತ್ವವನ್ನು ಕಾಣುತ್ತಿದ್ದು ಅದರಂತೆಯೇ ನಾಗಬನಗಳು, ದೇವರ ಕಾಡುಗಳು ಎಂಬ ಪರಿಕಲ್ಪನೆಗಳು ಈಗಲೂ ಚಾಲ್ತಿಯಲ್ಲಿದ್ದು ಈ ಪರಿಕಲ್ಪನೆಗಳು ಪರಿಸರದ ರಕ್ಷಣೆಗೆ ಕಾರಣೀಭೂತವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯು ತನ್ನ ವಿದ್ಯಾರ್ಥಿ ಜೀವನದಲ್ಲಿ ತನ್ನ ಕೈಲಾದಷ್ಟು ಪರಿಸರ ಸಂರಕ್ಷಣೆ ಮಾಡುವ ಸಂಕಲ್ಪ ಕೈಗೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಜ್ಯೋತಿ ವಹಿಸಿಕೊಂಡಿದ್ದರು ವೇದಿಕೆಯಲ್ಲಿ ಒಕ್ಕೂಟದ ಕಾರ್ಯದರ್ಶಿ ಸರಿತಾ, ಹವರಾಲು ಸೇವಾ ಪ್ರತಿನಿಧಿ ನಂದಿನಿ ಉಪಸ್ಥಿತರಿದ್ದರು.
ಶಿಕ್ಷಕರದ ಪ್ರಶಾಂತ್ ಇವರು ಸಾವತಿಸಿ, ವಲಯ ಮೇಲ್ವಿಚಾರಕ ರವೀಂದ್ರ ಎಸ್ ಕಾರ್ಯಕ್ರಮ ನಿರೂಪಿಸಿ, ಎಲ್ಲರನ್ನು ವಂದಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನ ವಿತರಣೆ ಮಾಡಲಾಯಿತು. ಸಾಂಕೇತಿಕ ಗಿಡ ವಿತರಣೆ ಮಾಡಿ , ಶಾಲಾ ಆವರಣದಲ್ಲಿ ಗಿಡ ನಾಟಿ ಮಾಡಲಾಯಿತು.







