ಉಡುಪಿ: ಶ್ರೀಮನ್ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಶ್ರೀ ಪುತ್ತಿಗೆ ಮಠಾಧೀಶರಾದ ವಿಶ್ವ ಮಾನ್ಯ ಯತಿಕುಲ ಚಕ್ರವರ್ತಿ ಶ್ರೀಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತವರ ಶಿಷ್ಯ ಶ್ರೀಶ್ರೀಸುಶ್ರೀಂದ್ರ ತೀರ್ಥ ಶ್ರೀಪಾದರ ಸಂಕಲ್ಪ ಮತ್ತು ಮಾರ್ಗದರ್ಶನದಂತೆ ವಿಶ್ವಯೋಗ ದಿನದ ಪ್ರಯುಕ್ತ ಗೀತಾಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮವನ್ನು ಉಡುಪಿಯ ಎಸ್ ಡಿ ಎಂ ಆಯುರ್ವೇದ ಕಾಲೇಜಿನ ಪ್ರಾಚಾರ್ಯೆ ಡಾ. ಮಮತಾ ಕೆ.ವಿ. ಸಂಪನ್ಮೂಲ ವ್ಯಕ್ತಿ ಪತಂಜಲಿ ಯೋಗ ಸಮಿತಿಯ ರಾಜ್ಯ ಪ್ರಭಾರಿ ರಾಘವೇಂದ್ರ ಭಟ್, ನವದೆಹಲಿಯ ಸಿಸಿ ಆರ್ ಎ ಯಸ್ ತಜ್ಞ ದಿಲೀಪ್ ಕುಮಾರ್ ಉಪಸ್ಥಿತಿಯಲ್ಲಿ ದಿವಾನ ನಾಗರಾಜ ಆಚಾರ್ಯ ಅವರ ಅಧ್ಯಕ್ಷತೆಯಲ್ಲಿ ಉದ್ಘಾಟನೆಗೊಂಡಿತು.








