ಉಡುಪಿ:ಮಕ್ಕಳಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ aura creations ,event’s & pramotions ಹಾಗೂ ದೃಶ್ಯ ಮೀಡಿಯಾ ಸಹಯೋಗದಲ್ಲಿ ಚಿತ್ರಕಲಾ ಸ್ಪರ್ಧೆಯನ್ನು ಎರಡು ವಿಭಾಗಗಳಲ್ಲಿ ಆಯೋಜಿಸಲಾಗಿದೆ.
🟢 1–5ನೇ ತರಗತಿ ವಿಭಾಗ
ವಿಷಯ: ಪರಿಸರ ಸಂರಕ್ಷಣೆ
🟠 6–10ನೇ ತರಗತಿ ವಿಭಾಗ
ವಿಷಯ: ತುಳುನಾಡಿನ ಸಂಸ್ಕೃತಿ
ಸ್ಪರ್ಧೆಯು ಜುಲೈ 5, 2026 (ಭಾನುವಾರ) ರಂದು ಬೆಳಿಗ್ಗೆ 10 ಗಂಟೆಯಿಂದ ನಾರಾಯಣ ಗುರು ಸಭಾಗ್ರಹ , ಬನ್ನಂಜೆ ಇಲ್ಲಿ ನಡೆಯಲಿದೆ.
ಜಿಲ್ಲೆಯ ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶವಿದ್ದು, ವಿಜೇತರಿಗೆ ಆಕರ್ಷಕ ಬಹುಮಾನಗಳು ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.
ಆಸಕ್ತ ವಿದ್ಯಾರ್ಥಿಗಳು ಹಾಗೂ ಪೋಷಕರು ಹೆಚ್ಚಿನ ಮಾಹಿತಿಗಾಗಿ 94801 15547 ಸಂಖ್ಯೆಯನ್ನು ಸಂಪರ್ಕಿಸಬಹುದು.







