ಕಾರ್ಕಳ, ಜೂನ್ 25: ಕಾರ್ಕಳ ಟೈಗರ್ಸ್, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಬೃಹತ್ ಉಚಿತ ಬ್ಲಡ್ ಶುಗರ್ ಹಾಗೂ ಕಣ್ಣಿನ ತಪಾಸಣಾ ಶಿಬಿರವನ್ನು ಜುಲೈ 5ರಂದು (ಭಾನುವಾರ) ಆಯೋಜಿಸಲಾಗಿದೆ.
ಶಿಬಿರವು ಸಾಲ್ಮರ್, ಕಾರ್ಕಳದಲ್ಲಿ ಬೆಳಿಗ್ಗೆ 9.00 ಗಂಟೆಯಿಂದ ಮಧ್ಯಾಹ್ನ 1.00 ಗಂಟೆಯವರೆಗೆ ನಡೆಯಲಿದೆ. ವೈದ್ಯರಾದ ಡಾ. ಕಾರ್ತಿಕ್ ರಾವ್ (MD, DNB Medicine) ಅವರಿಂದ ಮಧುಮೇಹ ಮತ್ತು ರಕ್ತದೊತ್ತಡ ತಪಾಸಣೆ ನಡೆಸಲಾಗುವುದು. ಜೊತೆಗೆ ಕಣ್ಣಿನ ತಜ್ಞರಿಂದ ಸಮಗ್ರ ನೇತ್ರ ತಪಾಸಣೆ ನಡೆಯಲಿದೆ.
ಶಿಬಿರದಲ್ಲಿ ಉಚಿತ ಕಣ್ಣಿನ ಪರೀಕ್ಷೆ, ಡಯಾಬಿಟಿಕ್ ರೆಟಿನೋಪತಿ ಹಾಗೂ ಗ್ಲೂಕೋಮಾ ತಪಾಸಣೆ, ಅಗತ್ಯವಿರುವವರಿಗೆ ಕಣ್ಣಿನ ಶಸ್ತ್ರಚಿಕಿತ್ಸೆ ಕುರಿತು ಉಚಿತ ಸಲಹೆ ಮತ್ತು ಫಿಸಿಯೋಥೆರಪಿ ಹಾಗೂ ಅಕ್ಯುಪ್ರೆಶರ್ ಸೇವೆಗಳನ್ನೂ ಒದಗಿಸಲಾಗುತ್ತದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಉಚಿತ ಆರೋಗ್ಯ ಶಿಬಿರದ ಪ್ರಯೋಜನ ಪಡೆಯುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಮಧುಕರ ಕನ್ನಾರ್ – 9844761421
ಮೋಹನ್ ದಾಸ್ ಶೆಟ್ಟಿ – 8496895530
ಪ್ರದೀಪ್ ತ್ರಂಗಾರ್ – 9901144080
ಪ್ರವೀಣ್ ಕುಮಾರ್ – 7892976977







