Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

Dhrishya News by Dhrishya News
26/06/2026
in ಸುದ್ದಿಗಳು
0
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ
0
SHARES
3
VIEWS
Share on FacebookShare on Twitter

ರಾಜ್ಯ ಸರ್ಕಾರದ ಗೃಹ ಲಕ್ಷ್ಮೀ ಯೋಜನೆಯಲ್ಲಿ ಕೋಟ್ಯಾಂತರ ರೂಪಾಯಿ ಭಾರೀ ಅಕ್ರಮ ನಡೆದಿರುವ ಬಗ್ಗೆ ರಾಜ್ಯ ಸರ್ಕಾರ ನೇಮಿಸಿದ      ಸಿ ಎ ಜಿ ವರದಿಯಲ್ಲಿ ಬಹಿರಂಗವಾಗಿದ್ದು, ಯೋಜನೆಯಲ್ಲಿ ಅಕ್ರಮ ತಪ್ಪಿಸಲು ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಗಳು ಸಂಪೂರ್ಣ ವಿಫಲವಾಗಿದ್ದು, ಉಡುಪಿ ತಾಲೂಕು ಗ್ಯಾರಂಟಿ ಅಧ್ಯಕ್ಷ ರಮೇಶ್ ಕಾಂಚನ್ ರಿಗೆ ಸ್ವಲ್ಪವಾದರೂ ನೈತಿಕತೆ ಇದ್ದರೆ ರಾಜೀನಾಮೆ ನೀಡಲಿ ಎಂದು ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್ ಆಗ್ರಹಿಸಿದ್ದಾರೆ.

ಗೃಹ ಲಕ್ಷ್ಮೀ ಯೋಜನೆಯಲ್ಲಿ ಸುಮಾರು ರೂ. 225 ಕೋಟಿಗಳಷ್ಟು ಅವ್ಯವಹಾರ ನಡೆದಿದೆ ಎಂದು ಸಿಎಜಿ (CAG) ವರದಿಯಲ್ಲಿ ಬಹಿರಂಗವಾಗಿದೆ. ಬ್ಯಾಂಕ್ ಖಾತೆಯೇ ಇಲ್ಲದ 23,262 ಜನರಿಗೆ ಬರೋಬ್ಬರಿ 46.52 ಕೋಟಿ ರೂ. ಪಾವತಿಯಾಗಿರುವುದು ಮತ್ತು 19,020 ಜನರಿಗೆ ಒಂದೇ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿರುವುದನ್ನು ಸ್ವತಃ ಸಿಎಜಿ (CAG) ವರದಿಯಲ್ಲಿ ಬಹಿರಂಗವಾಗಿದ್ದು ಭಾರೀ ಅಕ್ರಮ ಸಾಬೀತಾಗಿದೆ.

ಕಾಂಗ್ರೆಸ್‌ನ ನಿರಾಶ್ರಿತ ನಾಯಕರಿಗೆ ಪದವಿ ಕೊಡಲು ಗ್ಯಾರಂಟಿ ಸಮಿತಿ ರಚಿಸಿ ಅದಕ್ಕೆ ನೂರಾರು ಕೋಟಿ ರೂ. ಖರ್ಚು ಮಾಡಿ ಲಕ್ಷಾಂತರ ರುಪಾಯಿ ಸಂಬಳ, ಕಚೇರಿಯನ್ನು ನೀಡಿದ್ದರೂ
ಈ ಸಮಿತಿ ಅಕ್ರಮ ತಡೆದಿಲ್ಲ. ಗ್ಯಾರಂಟಿ ಅನುಷ್ಠಾನ ಸಮಿತಿ ಕಾಂಗ್ರೆಸ್ ಅತೃಪ್ತರ ಜೇಬು ತುಂಬಿಸುವ ಗಂಜಿ ಕೇಂದ್ರವಾಗಿದೆ.

ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಹಾಗೂ ಸದಸ್ಯರು ಕಚೇರಿಗೆ ದೊಡ್ಡ ಬೋರ್ಡ್ ಹಾಕಿ ಕೊಂಡು, ಬಿಟ್ಟಿ ಸಂಬಳ ಪಡೆದು ಕೇವಲ ಪತ್ರಿಕಾ ಹೇಳಿಕೆಗೆ ಸೀಮಿತರಾಗಿ
ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ವಿಫಲರಾಗಿದ್ದಾರೆ. ಕೇವಲ ಸರ್ಕಾರಿ ಕಾರ್ಯಕ್ರಮದ ಕಾರ್ಯಕ್ರಮಗಳ ಶಿಷ್ಟಾಚಾರ ಪಟ್ಟಿಯಂತೆ ವೇದಿಕೆಯಲ್ಲಿ ಕುಳಿತು ಬಿಟ್ಟಿ ಭಾಷಣಕ್ಕೆ ಸೀಮಿತರಾಗಿ ಜನತೆಯ ಮುಂದೆ ನಗೆಪಾಟಲಿಗೆ ಗುರಿಯಾಗಿದ್ದಾರೆ.

ಸದಾ ಕಾಲ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುವ ಚಟ ಹೊಂದಿರುವ ರಮೇಶ್ ಕಾಂಚನ್ ರಿಗೆ ತಮ್ಮದೇ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ನೆಟ್ಟಗೆ ಅರ್ಹ ಜನತೆಗೆ ತಲುಪಿಸಲು ಸಾಧ್ಯವಾಗಿಲ್ಲ.

ಕಾಂಗ್ರೆಸ್ ನಾಯಕರಿಗೆ ನಿಜವಾಗಿಯೂ ನೈತಿಕತೆ, ಬದ್ಧತೆ ಇದ್ದರೆ ಈ ಅಕ್ರಮದ ಬಗ್ಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ತೊಲಗಲಿ ಎಂದು ದಿನೇಶ್ ಅಮೀನ್ ಆಗ್ರಹಿಸಿದ್ದಾರೆ.

Previous Post

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

Next Post

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026