Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಎರಡು ವಾರಗಳ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಾರ್ಯಾಗಾರ ಸಮಾರೋಪದಲ್ಲಿ ಡಾ. ನಾರಾಯಣಂ ಶ್ರೀಕಾಂತ್ ಅಭಿಮತ

Dhrishya News by Dhrishya News
28/06/2026
in ಸುದ್ದಿಗಳು
0
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ
0
SHARES
6
VIEWS
Share on FacebookShare on Twitter

ಉಡುಪಿಯ ಗೀತಾ ಮಂದಿರದ ಶ್ರೀ ಪುತ್ತಿಗೆ ನೃಸಿಂಹ ಸಭಾಭವನದಲ್ಲಿ ಶ್ರೀ ಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥಶ್ರೀಪಾದರು ಮತ್ತು ಕಿರಿಯ ಪಟ್ಟದ ಪರಮಪೂಜ್ಯ ಶ್ರೀ ಶ್ರೀ ಸುಶ್ರೀಂದ್ರತೀರ್ಥಶ್ರೀಪಾದರ ಪರಮಾನುಗ್ರಹದಿಂದ ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನ(ರಿ) ಉಡುಪಿ ಮತ್ತು ಭಾರತ ಸರಕಾರದ ಅಧೀನದಲ್ಲಿರುವ ನವದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ (CSU) ಹಾಗೂ ಕೇಂದ್ರೀಯ ಆಯುರ್ವೇದೀಯ ವಿಜ್ಞಾನ ಅನುಸಂಧಾನ ಪರಿಷತ್ (CCRAS) ಇವರ ಸಹಭಾಗಿತ್ವದಲ್ಲಿ ಎರಡು ವಾರಗಳ ಕಾಲ ನಡೆದ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಸಾಮರ್ಥ್ಯ ನಿರ್ಮಾಣ ಕಾರ್ಯಾಗಾರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕೇಂದ್ರೀಯ ಆಯುರ್ವೇದೀಯ ವಿಜ್ಞಾನ ಅನುಸಂಧಾನ ಪರಿಷತ್ ಸಂಸ್ಥೆಯ ಉಪ ಮಹಾನಿರ್ದೇಶಕರಾದ ಡಾ. ನಾರಾಯಣಂ ಶ್ರೀಕಾಂತ್ ಇವರು ಶಿಬಿರಾರ್ಥಿಗಳೊಂದಿಗೆ ಸಂವಾದಗೈಯುತ್ತ 15 ದಿನಗಳ ಕಾರ್ಯಾಗಾರ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದಕ್ಕೆ ಹರ್ಷ ವ್ಯಕ್ತಪಡಿಸಿದರು. ಅವರು
ಈ ಕಾರ್ಯಾಗಾರದಲ್ಲಿ ತುಳು ಮತ್ತು ಪ್ರಾಚೀನ ಕನ್ನಡ ಲಿಪಿಗಳನ್ನು ಚೆನ್ನಾಗಿ ಕಲಿತ ಫಲಾನುಭವಿಗಳೊಂದಿಗೆ ಸಂವಾದ ಗೈಯುತ್ತಾ ಮೇಲಿನ ಈ ಸಂದೇಶವನ್ನು ನೀಡಿದರು.
ಹಸ್ತಪ್ರತಿಗಳ ಲಿಪಿಗಳ ಸಂರಕ್ಷಣೆ ಕಾರ್ಯದ ಬಗ್ಗೆ ಬಹಳ ಅಪೇಕ್ಷೆ ಇದ್ದು ಮುಂದಿನ ದಿನಗಳಲ್ಲಿ ವ್ಯಾಪಕವಾದ ಲಿಪಿ ಕಾರ್ಯಾಗಾರಗಳು ನಡೆಯುವಂತೆ ಯೋಜನೆಯನ್ನು ರೂಪಿಸಲಾಗುವುದು.
ನಮ್ಮ ದೇಶದಲ್ಲಿ ಮನೆ-ಮನೆಗಳಲ್ಲಿ ದೊರಕುವ ವೈದ್ಯಶಾಸ್ತ್ರದ – ರಸಶಾಸ್ತ್ರ ಮನೆಮದ್ದು ಮೊದಲಾದವುಗಳ ಆಕಾರವೇ ಇದ್ದು ಇದರ ಲಿಪ್ಯಂತರ ಕಾರ್ಯ ಹಾಗೂ ಶುದ್ಧ ಪ್ರತಿಗಳನ್ನು ಸಿದ್ಧಪಡಿಸುವಿಕೆ ಹಾಗೂ ಪುಸ್ತಕ ಪ್ರಕಾಶನಕ್ಕೆ ಬೇಕಾದ ಎಲ್ಲ ವಿಧದ ವ್ಯವಸ್ಥೆಗಾಗಿ ನಿಮ್ಮೊಂದಿಗೆ ಭಾರತ ಸರ್ಕಾರದ CCRAS ಸಂಸ್ಥೆಯು ಕೈಜೋಡಿಸುತ್ತದೆ. ತಮ್ಮ ಹೆಸರಿನಲ್ಲಿ ಪುಸ್ತಕ ಪ್ರಕಾಶನ ನಡೆಸಲಾಗುವುದು . ಈ ಮೂಲಕ ಭಾರತೀಯ ವೈದ್ಯಶಾಸ್ತ್ರದ ಪ್ರಯೋಜನ ಸಾಮಾಜಿಕವಾಗಿ ಲಭ್ಯವಾಗಲಿದೆ. ಇದಕ್ಕೆ ನಮ್ಮ ಸಂಸ್ಥೆ ಕಟಿಬದ್ಧವಾಗಿದೆ.
ಉತ್ತರ ಭಾರತ -ಪೂರ್ವ ಭಾರತಗಳಲ್ಲಿ ಈ ಕಾರ್ಯ ಈಗಾಗಲೇ ಭರದಿಂದ ಸಾಗುತ್ತಿದ್ದು ಇದೀಗ ದಕ್ಷಿಣದ ಭಾಗದಲ್ಲಿ ವಿಶೇಷವಾಗಿ ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಈ ಕಾರ್ಯಕ್ಕೆ ಈ ಕಾರ್ಯಗಾರದ ಮೂಲಕ ಚಾಲನೆ ದೊರೆತಂತಾಗಿದೆ. ಮುಂದಿನ ದಿನಗಳಲ್ಲಿ ಭಾರತ ಸರಕಾರದ ವಿಶೇಷ ಮಾನ್ಯತೆಯಲ್ಲಿ ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನದಿಂದ ಇನ್ನೂ ಹೆಚ್ಚಿನ ಸಂಶೋಧನಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಹರುಷ ವ್ಯಕ್ತಪಡಿಸಿದರು.
ಈ ಸಮಾರೋಪ ಸಮಾರಂಭದಲ್ಲಿ ಹಿರಿಯ ವಿದ್ವಾಂಸರಾದ ಡಾ ಪಾದೇಕಲ್ ವಿಷ್ಣು ಭಟ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಅವರು ಹಸ್ತಪ್ರತಿಗಳ ಲಿಪಿಗಳ ಸೊಬಗು ಮತ್ತು ಸ್ವಾರಸ್ಯಕರ ಸಂಗತಿಗಳನ್ನು ವಿವರಿಸಿದರು.
ಬೆಂಗಳೂರಿನ ಕೇಂದ್ರೀಯ ಆಯುರ್ವೇದ ಸಂಸ್ಥೆಯ ನಿರ್ದೇಶಕರಾದ ಡಾ ಟಿ ಮಹೇಶ್ವರ್ ಅವರು ಉಪಸ್ಥಿತರಿದ್ದರು.
ಎರಡು ವಾರಗಳ ಕಾಲ ಈ ಕಾರ್ಯಾಗಾರದಲ್ಲಿ ಪ್ರಮುಖ ಸಂಪನ್ಮೂಲ ವ್ಯಕ್ತಿಗಳಾಗಿದ್ದ ನವ ದೆಹಲಿಯ CCRAS ನ ಸಂಸ್ಕೃತ ವಿದ್ವಾಂಸರಾದ ಡಾ.ದಿಲೀಪ್ ಕುಮಾರ್ ಕಾರ್ ಅವರನ್ನು ಸನ್ಮಾನಿಸಲಾಯಿತು.

ಈ ಕಾರ್ಯಾಗಾರದಲ್ಲಿ ಉದ್ಯಾವರದ SDM ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳು ಮತ್ತು SDM ಹಾಸನ ಕಾಲೇಜಿನ ವಿದ್ಯಾರ್ಥಿಗಳು, ಶ್ರೀ ಪುತ್ತಿಗೆ ವಿದ್ಯಾಪೀಠದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಈ ಕಾರ್ಯಾಗಾರದಲ್ಲಿ ಉಡುಪಿಯ ಪ್ರಾಚ್ಯ ಸಂಚಯ ಪ್ರತಿಷ್ಠಾನದ ಡಾ ಕೃಷ್ಣಯ್ಯ, ತುಳು ಲಿಪಿ ವಿದ್ವಾಂಸರಾದ ಸುಗುಣಮಾಲಾ ಪತ್ರಿಕೆಯ ಸಂಪಾದಕ ಶ್ರೀ ಮಹಿತೋಷ ಆಚಾರ್ಯ, ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀನಿಕೇತನ ಸಂಶೋಧನಾ ಕೇಂದ್ರದ ನಿರ್ದೇಶಕರಾದ ಡಾ.ಜಿ.ವಿ.ಕಲ್ಲಾಪುರ ಬೆಂಗಳೂರಿನ IGNC ಸಂಸ್ಥೆಯ ಡಾ ಸದ್ಯೋಜಾತ ಭಟ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನ ದ ವಿದ್ವಾನ್ ಶ್ರೀಧರ ಆಚಾರ್ಯ ಸ್ಥಳೀಯ ಸಂಯೋಜಕರಾಗಿ ಕಾರ್ಯ ನಿರ್ವಹಿಸಿದರು. ಭಾಗವಹಿಸಿದ ಎಲ್ಲರಿಗೂ ಪ್ರಮಾಣ ಪತ್ರವನ್ನು ನೀಡಲಾಯಿತು. ಈ ಕಾರ್ಯಾಗಾರದ ಮುಖ್ಯ ಸಂಘಟಕರಾದ ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನ ದ ನಿರ್ದೇಶಕರಾದ ಡಾ ಬಿ ಗೋಪಾಲಾಚಾರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Previous Post

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

Next Post

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026