ಉಡುಪಿ: ಯಕ್ಷಗಾನ ಕಲಾರಂಗ ರಿ., ಉಡುಪಿ ವತಿಯಿಂದ ಕಲಾವಿದರು ಹಾಗೂ ವಿದ್ಯಾರ್ಥಿಗಳಿಗಾಗಿ ನಿರ್ಮಿಸಲಾದ 100 ಮನೆಗಳ ಯೋಜನೆಯ ಅಂಗವಾಗಿ ಆಯೋಜಿಸಲಾದ “ಸೂರು ನೂರರ ಸಡಗರ” ಸಮಾರಂಭವು ಭಾನುವಾರ ವಿಜೃಂಭಣೆಯಿಂದ ನಡೆಯಿತು.
ಕಾರ್ಯಕ್ರಮದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ ಭಾಗವಹಿಸಿ, ಶಿಕ್ಷಣ ಹಾಗೂ ಯಕ್ಷಗಾನ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸುತ್ತಿರುವ ಯಕ್ಷಗಾನ ಕಲಾರಂಗದ ಸಾಮಾಜಿಕ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿ ಅಭಿನಂದನೆ ಸಲ್ಲಿಸಿದರು.
ಸೋದೆ ಮಠದ ಪರಮಪೂಜ್ಯ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಸಮಾರಂಭವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.
ಈ ಸಂದರ್ಭದಲ್ಲಿ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಡಾ. ಎಚ್. ಎಸ್. ಬಲ್ಲಾಳ್, ಆನಂದ ಸಿ. ಕುಂದರ್, ರಾಘವೇಂದ್ರ ಭಟ್, ಯಕ್ಷಗಾನ ಕಲಾರಂಗದ ಮಾಜಿ ಅಧ್ಯಕ್ಷರಾದ ಶಿವರಾಮ ಶೆಟ್ಟಿ ತಲ್ಲೂರು ಹಾಗೂ ಗಣೇಶ್ ರಾವ್, ಅಧ್ಯಕ್ಷ ಗಂಗಾಧರ ರಾವ್, ಕಾರ್ಯದರ್ಶಿ ಮುರಳಿ ಕಡೆಕಾರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.







