Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಾಹೆಯ ನರ್ಸಿಂಗ್‌ ಸಾಧಕರಿಗೆ ಅಂತಾರಾಷ್ಟ್ರೀಯ ಗೌರವ

ಎಂಕಾನ್‌ ಡೀನ್‌ ಡಾ. ಜುಡಿತ್ ಏಂಜಲಿಟಾ ನೊರೊನ್ಹಾ ಅಮೆರಿಕನ್ ಅಕಾಡೆಮಿ ಆಫ್ ನರ್ಸಿಂಗ್‌ನ ಫೆಲೋ

Dhrishya News by Dhrishya News
03/07/2026
in ಸುದ್ದಿಗಳು
0
ಮಾಹೆಯ ನರ್ಸಿಂಗ್‌ ಸಾಧಕರಿಗೆ ಅಂತಾರಾಷ್ಟ್ರೀಯ ಗೌರವ
0
SHARES
4
VIEWS
Share on FacebookShare on Twitter

ಮಣಿಪಾಲ, ಜುಲೈ 03, 2026: ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (ಮಾಹೆ) ವಿಶ್ವವಿದ್ಯಾಲಯ ಎಂದು ಪರಿಗಣಿಸಲಾಗಿರುವ ಉತ್ಕೃಷ್ಟ ಸಂಸ್ಥೆಯ ಅಂಗಸಂಸ್ಥೆಯಾದ ಮಣಿಪಾಲ್ ಕಾಲೇಜ್ ಆಫ್ ನರ್ಸಿಂಗ್‌ [ಎಂಸಿಓಎನ್‌-ಎಂಕಾನ್‌] ಡೀನ್ ಡಾ. ಜುಡಿತ್ ಏಂಜಲಿಟಾ ನೊರೊನ್ಹಾ ಅವರು ಅಮೆರಿಕನ್ ಅಕಾಡೆಮಿ ಆಫ್ ನರ್ಸಿಂಗ್‌ನ (ಎಎಎನ್‌) 2026ನೇ ಸಾಲಿನ ಪ್ರತಿಷ್ಠಿತ ‘ಫೆಲೋ’ ಆಗಿ ಆಯ್ಕೆಯಾಗಿದ್ದಾರೆ.

ಶಿಕ್ಷಣ, ಸಂಶೋಧನೆ, ನಾವೀನ್ಯ ಹಾಗೂ ನಾಯಕತ್ವದ ಮೂಲಕ ಆರೋಗ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಜಾಗತಿಕ ನರ್ಸಿಂಗ್ ಸಾಧಕರನ್ನು ಗುರುತಿಸಿ ‘ಅಮೆರಿಕನ್ ಅಕಾಡೆಮಿ ಆಫ್ ನರ್ಸಿಂಗ್’ (ಎಎಎನ್‌) ಜೂನ್ 25ರಂದು ತನ್ನ 2026ನೇ ಸಾಲಿನ ಫೆಲೋಗಳನ್ನು ಪ್ರಕಟಿಸಿದೆ. ನರ್ಸಿಂಗ್ ವೃತ್ತಿಯ ಅತ್ಯುನ್ನತ ಗೌರವವೆಂದೇ ಹೆಸರಾದ ಈ ‘ಎಎಎನ್‌ ಫೆಲೋಶಿಪ್’, ಜಾಗತಿಕ ಆರೋಗ್ಯ ರಕ್ಷಣಾ ವಲಯದಲ್ಲಿ ಶಾಶ್ವತ ಛಾಪು ಮೂಡಿಸಿದ ಗಣ್ಯರಿಗೆ ನೀಡುವ ಪ್ರತಿಷ್ಠಿತ ಮನ್ನಣೆಯಾಗಿದೆ.

2026ನೇ ಸಾಲಿನ ಈ ಪ್ರತಿಷ್ಠಿತ ಪಟ್ಟಿಯಲ್ಲಿ ಅಮೆರಿಕದ 39 ರಾಜ್ಯಗಳು, ಡಿಸ್ಟ್ರಿಕ್ಟ್ ಆಫ್ ಕೊಲಂಬಿಯಾ ಹಾಗೂ 17 ದೇಶಗಳ ಪ್ರಖ್ಯಾತ ನರ್ಸಿಂಗ್ ನಾಯಕರು ಸ್ಥಾನ ಪಡೆದಿದ್ದಾರೆ. ಜ್ಞಾನ, ನೀತಿ ಮತ್ತು ನಾವೀನ್ಯದ ಮೂಲಕ ಆರೋಗ್ಯ ಕ್ಷೇತ್ರವನ್ನು ಪರಿವರ್ತಿಸುತ್ತಿರುವ ಪ್ರಭಾವಶಾಲಿ ವೃತ್ತಿಪರ ಸಮುದಾಯ ಇದಾಗಿದೆ. ಡಾ. ನೊರೊನ್ಹಾ ಅವರ ಈ ಆಯ್ಕೆಯು, ಜಾಗತಿಕ ನರ್ಸಿಂಗ್ ಸಾಧಕರ ಶ್ರೇಷ್ಠ ಅಂತಾರಾಷ್ಟ್ರೀಯ ಕೂಟದಲ್ಲಿ ಅವರಿಗೆ ಗೌರವಾನ್ವಿತ ಸ್ಥಾನವನ್ನು ತಂದುಕೊಟ್ಟಿದೆ.

ಡಾ. ನೊರೊನ್ಹಾ ಅವರ ಈ ಮಹತ್ವದ ಸಾಧನೆಯನ್ನು ಅಭಿನಂದಿಸಿದ ಮಾಹೆಯ ಕುಲಪತಿ ಡಾ. ಶರತ್ ಕೆ. ರಾವ್ ಅವರು, ʼಡಾ. ಜುಡಿತ್ ಏಂಜಲಿಟ್ಟಾ ನೊರೊನ್ಹಾ ಅವರು ಅಮೆರಿಕನ್ ಅಕಾಡೆಮಿ ಆಫ್ ನರ್ಸಿಂಗ್‌ನ ಫೆಲೋ ಆಗಿ ಆಯ್ಕೆಯಾಗಿರುವುದು ಮಾಹೆ ಮತ್ತು ಒಟ್ಟಾರೆ ಭಾರತೀಯ ನರ್ಸಿಂಗ್ ಸಮುದಾಯಕ್ಕೆ ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ. ಈ ಪ್ರತಿಷ್ಠಿತ ಅಂತಾರಾಷ್ಟ್ರೀಯ ಮನ್ನಣೆಯು, ಹಲವು ದಶಕಗಳಿಂದ ಡಾ. ನೊರೊನ್ಹಾ ಅವರು ನರ್ಸಿಂಗ್ ಶಿಕ್ಷಣ, ಸಂಶೋಧನೆ ಮತ್ತು ನಾಯಕತ್ವಕ್ಕೆ ನೀಡಿದ ಕೊಡುಗೆಗಳಿಗೆ ಸಂದ ಮನ್ನಣೆಯಾಗಿದೆʼ ಎಂದು ಸಂತಸ ವ್ಯಕ್ತಪಡಿಸಿದರು.

‘ಅಮೆರಿಕನ್ ಅಕಾಡೆಮಿ ಆಫ್ ನರ್ಸಿಂಗ್‌ನ ಫೆಲೋ ಆಗಿರುವುದು ಅತ್ಯಂತ ಹೆಮ್ಮೆಯ ಸಂಗತಿ. ಇದು ನನ್ನ ವೈಯಕ್ತಿಕ ಸಾಧನೆಯಷ್ಟೇ ಅಲ್ಲ; ನನ್ನ ವೃತ್ತಿ ಹಾಗೂ ಶೈಕ್ಷಣಿಕ ಪಯಣದಲ್ಲಿ ಬೆಂಬಲವಾಗಿ ನಿಂತ ಸಹೋದ್ಯೋಗಿಗಳು, ವಿದ್ಯಾರ್ಥಿಗಳು ಮತ್ತು ಮಾರ್ಗದರ್ಶಕರ ಒಗ್ಗಟ್ಟಿನ ಶ್ರಮಕ್ಕೆ ಸಂದ ಜಯ’ ಎಂದು ಮಣಿಪಾಲ್ ಕಾಲೇಜ್ ಆಫ್ ನರ್ಸಿಂಗ್‌ನ ಡೀನ್ ಡಾ. ಜುಡಿತ್ ಏಂಜಲಿಟಾ ನೊರೊನ್ಹಾ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

2026ನೇ ಸಾಲಿನ ಫೆಲೋಗಳ ಅಧಿಕೃತ ಸೇರ್ಪಡೆ ಕಾರ್ಯಕ್ರಮವು ಅಮೆರಿಕದ ವಾಷಿಂಗ್ಟನ್ ಡಿ.ಸಿ.ಯಲ್ಲಿ ಅಕ್ಟೋಬರ್ 8 ರಿಂದ 10ರವರೆಗೆ ನಡೆಯಲಿರುವ ಅಮೆರಿಕನ್ ಅಕಾಡೆಮಿ ಆಫ್ ನರ್ಸಿಂಗ್‌ನ ‘ಹೆಲ್ತ್ ಪಾಲಿಸಿ ಕಾನ್ಫರೆನ್ಸ್’ (ಆರೋಗ್ಯ ನೀತಿ ಸಮ್ಮೇಳನ) ವೇಳೆ ಜರುಗಲಿದ್ದು, ಸಮ್ಮೇಳನದ ಕೊನೆಯ ದಿನದಂದು ಪದಗ್ರಹಣ ಸಮಾರಂಭ ನೆರವೇರಲಿದೆ.

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಕುರಿತು:

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವಿಶ್ವವಿದ್ಯಾಲಯ ಎಂದು ಪರಿಗಣಿತವಾಗಿರುವ ಉತ್ಕೃಷ್ಟ ಸಂಸ್ಥೆಯಾಗಿದೆ. ಆರೋಗ್ಯ ವಿಜ್ಞಾನ, ನಿರ್ವಹಣೆ, ಕಾನೂನು, ಮಾನವಿಕ ಹಾಗೂ ಸಮಾಜ ವಿಜ್ಞಾನ, ತಂತ್ರಜ್ಞಾನ ಮತ್ತು ವಿಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ 400ಕ್ಕೂ ಹೆಚ್ಚು ವಿಶೇಷ ಕೋರ್ಸ್‌ಗಳನ್ನು ಮಾಹೆ ನೀಡುತ್ತಿದೆ. ಮಣಿಪಾಲ, ಮಂಗಳೂರು, ಬೆಂಗಳೂರು, ಜಂಶೆಡ್ಪುರ ಹಾಗೂ ದುಬೈ ಕ್ಯಾಂಪಸ್‌ಗಳ ಮೂಲಕ ಶಿಕ್ಷಣ, ಸಂಶೋಧನೆ ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಮಾಹೆ ವಿಶಿಷ್ಟ ಗುರುತನ್ನು ಸಂಪಾದಿಸಿದೆ. 2020ರಲ್ಲಿ ಭಾರತ ಸರ್ಕಾರದ ಶಿಕ್ಷಣ ಸಚಿವಾಲಯವು ಮಾಹೆಗೆ ಪ್ರತಿಷ್ಠಿತ ‘ಇನ್‌ಸ್ಟಿಟ್ಯೂಷನ್ ಆಫ್ ಎಮಿನೆನ್ಸ್’ ಮಾನ್ಯತೆಯನ್ನು ನೀಡಿದೆ. ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಚೌಕಟ್ಟಿನ (NIRF) 2025ರ ಶ್ರೇಯಾಂಕದಲ್ಲಿ ದೇಶದಲ್ಲಿ 3ನೇ ಸ್ಥಾನ ಪಡೆದಿರುವ ಮಾಹೆ, ಗುಣಮಟ್ಟದ ಶಿಕ್ಷಣ, ಸಮೃದ್ಧ ಕ್ಯಾಂಪಸ್ ಜೀವನ ಮತ್ತು ಜಾಗತಿಕ ಮಟ್ಟದ ವೃತ್ತಿ ಅವಕಾಶಗಳನ್ನು ಹುಡುಕುವ ವಿದ್ಯಾರ್ಥಿಗಳ ಆದ್ಯತೆಯ ತಾಣವಾಗಿದೆ.

Previous Post

ಜುಲೈ 5ರಂದು ಉಡುಪಿಯಲ್ಲಿ AURA WOMEN’S FEST 2026: ಮಹಿಳೆಯರು ಮತ್ತು ಮಕ್ಕಳಿಗಾಗಿ ವಿಶೇಷ ಕಾರ್ಯಕ್ರಮಗಳು

Next Post

ಹೆರೂರಿನಲ್ಲಿ ಜುಲೈ ೪ರಂದು ‘ಸಹಕಾರದಿಂದ ಸಮೃದ್ಧಿ’ ವಿಶೇಷ ಕಾರ್ಯಕ್ರಮ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಹೆರೂರಿನಲ್ಲಿ ಜುಲೈ ೪ರಂದು ‘ಸಹಕಾರದಿಂದ ಸಮೃದ್ಧಿ’ ವಿಶೇಷ ಕಾರ್ಯಕ್ರಮ

ಹೆರೂರಿನಲ್ಲಿ ಜುಲೈ ೪ರಂದು ‘ಸಹಕಾರದಿಂದ ಸಮೃದ್ಧಿ’ ವಿಶೇಷ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಡಾ| ಶ್ಯಾಮಪ್ರಸಾದ್ ಮುಖರ್ಜಿ ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣೆ : ಕುತ್ಯಾರು ನವೀನ್ ಶೆಟ್ಟಿ

ಡಾ| ಶ್ಯಾಮಪ್ರಸಾದ್ ಮುಖರ್ಜಿ ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣೆ : ಕುತ್ಯಾರು ನವೀನ್ ಶೆಟ್ಟಿ

03/07/2026
ಹೆರೂರಿನಲ್ಲಿ ಜುಲೈ ೪ರಂದು ‘ಸಹಕಾರದಿಂದ ಸಮೃದ್ಧಿ’ ವಿಶೇಷ ಕಾರ್ಯಕ್ರಮ

ಹೆರೂರಿನಲ್ಲಿ ಜುಲೈ ೪ರಂದು ‘ಸಹಕಾರದಿಂದ ಸಮೃದ್ಧಿ’ ವಿಶೇಷ ಕಾರ್ಯಕ್ರಮ

03/07/2026
ಮಾಹೆಯ ನರ್ಸಿಂಗ್‌ ಸಾಧಕರಿಗೆ ಅಂತಾರಾಷ್ಟ್ರೀಯ ಗೌರವ

ಮಾಹೆಯ ನರ್ಸಿಂಗ್‌ ಸಾಧಕರಿಗೆ ಅಂತಾರಾಷ್ಟ್ರೀಯ ಗೌರವ

03/07/2026
ಜುಲೈ 5ರಂದು ಉಡುಪಿಯಲ್ಲಿ AURA WOMEN’S FEST 2026: ಮಹಿಳೆಯರು ಮತ್ತು ಮಕ್ಕಳಿಗಾಗಿ ವಿಶೇಷ ಕಾರ್ಯಕ್ರಮಗಳು

ಜುಲೈ 5ರಂದು ಉಡುಪಿಯಲ್ಲಿ AURA WOMEN’S FEST 2026: ಮಹಿಳೆಯರು ಮತ್ತು ಮಕ್ಕಳಿಗಾಗಿ ವಿಶೇಷ ಕಾರ್ಯಕ್ರಮಗಳು

03/07/2026

Recent News

ಡಾ| ಶ್ಯಾಮಪ್ರಸಾದ್ ಮುಖರ್ಜಿ ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣೆ : ಕುತ್ಯಾರು ನವೀನ್ ಶೆಟ್ಟಿ

ಡಾ| ಶ್ಯಾಮಪ್ರಸಾದ್ ಮುಖರ್ಜಿ ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣೆ : ಕುತ್ಯಾರು ನವೀನ್ ಶೆಟ್ಟಿ

03/07/2026
ಹೆರೂರಿನಲ್ಲಿ ಜುಲೈ ೪ರಂದು ‘ಸಹಕಾರದಿಂದ ಸಮೃದ್ಧಿ’ ವಿಶೇಷ ಕಾರ್ಯಕ್ರಮ

ಹೆರೂರಿನಲ್ಲಿ ಜುಲೈ ೪ರಂದು ‘ಸಹಕಾರದಿಂದ ಸಮೃದ್ಧಿ’ ವಿಶೇಷ ಕಾರ್ಯಕ್ರಮ

03/07/2026
ಮಾಹೆಯ ನರ್ಸಿಂಗ್‌ ಸಾಧಕರಿಗೆ ಅಂತಾರಾಷ್ಟ್ರೀಯ ಗೌರವ

ಮಾಹೆಯ ನರ್ಸಿಂಗ್‌ ಸಾಧಕರಿಗೆ ಅಂತಾರಾಷ್ಟ್ರೀಯ ಗೌರವ

03/07/2026
ಜುಲೈ 5ರಂದು ಉಡುಪಿಯಲ್ಲಿ AURA WOMEN’S FEST 2026: ಮಹಿಳೆಯರು ಮತ್ತು ಮಕ್ಕಳಿಗಾಗಿ ವಿಶೇಷ ಕಾರ್ಯಕ್ರಮಗಳು

ಜುಲೈ 5ರಂದು ಉಡುಪಿಯಲ್ಲಿ AURA WOMEN’S FEST 2026: ಮಹಿಳೆಯರು ಮತ್ತು ಮಕ್ಕಳಿಗಾಗಿ ವಿಶೇಷ ಕಾರ್ಯಕ್ರಮಗಳು

03/07/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved