ಬ್ರಹ್ಮಾವರ: ಸಾರ್ವಜನಿಕರ ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಿ, ಅಗತ್ಯವಿರುವವರಿಗೆ ತಜ್ಞರ ಸಲಹೆ ಹಾಗೂ ಸಮಾಲೋಚನೆ ಒದಗಿಸುವ ಉದ್ದೇಶದಿಂದ ಬ್ರಹ್ಮಾವರದ ಮಹೇಶ್ ಆಸ್ಪತ್ರೆ ವತಿಯಿಂದ ಸಂಪೂರ್ಣ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರವನ್ನು ಜುಲೈ 19, ಭಾನುವಾರ ಆಯೋಜಿಸಲಾಗಿದೆ.
ಶಿಬಿರವು ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ ಬ್ರಹ್ಮಾವರದ ಎನ್.ಎಚ್. 66ರಲ್ಲಿರುವ ಮಹೇಶ್ ಆಸ್ಪತ್ರೆ ಆವರಣದಲ್ಲಿ ನಡೆಯಲಿದೆ.
ಮಾನಸಿಕ ಒತ್ತಡ, ಆತಂಕ, ಖಿನ್ನತೆ, ಚಿಂತೆ, ನಿದ್ರಾಹೀನತೆ ಸೇರಿದಂತೆ ವಿವಿಧ ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಈ ಉಚಿತ ಶಿಬಿರದ ಪ್ರಯೋಜನ ಪಡೆಯಬಹುದು.
ಶಿಬಿರದಲ್ಲಿ ಮನೋವೈದ್ಯರಾದ ಡಾ. ಗುರುಪ್ರಸಾದ್ ಕೆ. ಜಿ. ಹಾಗೂ ಮನಶ್ಶಾಸ್ತ್ರಜ್ಞ ಶ್ರೀ ಗಿರೀಶ್ ಎಂ. ಎಸ್. ಅವರು ತಪಾಸಣೆ ನಡೆಸಿ ಅಗತ್ಯ ಸಲಹೆ ಹಾಗೂ ಸಮಾಲೋಚನೆ ನೀಡಲಿದ್ದಾರೆ.
ಆಸ್ಪತ್ರೆಯ ಪ್ರಕಟಣೆಯ ಪ್ರಕಾರ, ಶಿಬಿರಕ್ಕೆ ಸೀಮಿತ ಸ್ಥಾನಗಳು ಮಾತ್ರ ಲಭ್ಯವಿದ್ದು, ಆಸಕ್ತರು ಮುಂಚಿತವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
94498 35256, 72578 62056,
72593 23056, 74117 38056.








