ಉಡುಪಿ; ಜುಲೈ,10: ಕೇಂದ್ರ ಸರ್ಕಾರ ಐಸಿಡಿಎಸ್ ಯೋಜನೆಗೆ ನೀಡುತ್ತಿದ್ದ ಅನುದಾನವನ್ನು ಬೆಲೆಯೇರಿಕೆಗೆ ತಕ್ಕಂತೆ ಹೆಚ್ಚಳ ಮಾಡದಿರುವುದನ್ನು ಖಂಡಿಸಿ, ರಾಷ್ಟ್ರೀಯ ಶಿಕ್ಷಣ ನೀತಿ -2020 ಜಾರಿ ಮಾಡಿ 3-6 ವರ್ಷದ ಮಕ್ಕಳನ್ನು ಅಂಗನವಾಡಿಗಳಿಂದ ದೂರವಿಟ್ಟು ಸರ್ಕಾರಿ ಶಾಲೆಗಳಲ್ಲಿ ಎಲ್ ಕೆ ಜಿ,ಯುಕೆಜಿ ಪ್ರಾರಂಭಿಸಿ ಅಂಗನವಾಡಿ ಕೇಂದ್ರಗಳಲ್ಲಿ ಫಲಾನುಭವಿಗಳ ಸಂಖ್ಯೆ ಇಳಿಮುಖವಾಗುತ್ತಿದೆ.
ಐಸಿಡಿಎಸ್ ಖಾಸಗೀಕರಣದ ಭಾಗವಾಗಿ ಕೂಸಿನ ಮನೆಗಳನ್ನು ಮಾಡಲು ಹೊರಟಿರುವುದು ಇತ್ಯಾದಿ ಬೇಡಿಕೆಗಳಿಗಾಗಿ ಜುಲೈ 10 ರಂದು ಸ್ಕೀಂ ನೌಕರರ ಕರಾಳ ದಿನದ ಭಾಗವಾಗಿ ಉಡುಪಿ ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲು ಉಡುಪಿ ಜಿಲ್ಲಾ ಅಂಗನವಾಡಿ ನೌಕರರ ಸಂಘ ( ರಿ) ಸಿಐಟಿಯು ಧರಣಿ ನಡೆಸಲು ನಿರ್ಧರಿಸಿದೆ.
ಧರಣಿಯನ್ನು ಸಿಐಟಿಯು ರಾಜ್ಯ ಕಾರ್ಯದರ್ಶಿ ಹಾಗೂ ಅಂಗನವಾಡಿ ನೌಕರರ ಸಂಘದ ರಾಜ್ಯ ಅಧ್ಯಕ್ಷರಾದ ಎಸ್ ವರಲಕ್ಷ್ಮಿ ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







