Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಗಾನಕೋಗಿಲೆ ಎಸ್. ಜಾನಕಿ ವಿಧಿವಶ..!!

88ನೇ ವಯಸ್ಸಿನಲ್ಲಿ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರು – 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಹೆಚ್ಚು ಗೀತೆಗಳ ಮೂಲಕ ಅಜರಾಮರವಾದ ಗಾನಸರಸ್ವತಿ

Dhrishya News by Dhrishya News
11/07/2026
in ಮುಖಪುಟ
0
ಗಾನಕೋಗಿಲೆ ಎಸ್. ಜಾನಕಿ ವಿಧಿವಶ..!!
0
SHARES
37
VIEWS
Share on FacebookShare on Twitter

ದೃಶ್ಯ ನ್ಯೂಸ್ | ಮೈಸೂರು, ಜುಲೈ 11:ಭಾರತೀಯ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಇಂದು (ಜುಲೈ 11) ವಯೋಸಹಜ ಅನಾರೋಗ್ಯದಿಂದ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಅವರ ಅಗಲಿಕೆಯಿಂದ ಭಾರತೀಯ ಸಂಗೀತ ಲೋಕವು ಅಪರೂಪದ ಗಾನಮಣಿಯನ್ನು ಕಳೆದುಕೊಂಡಂತಾಗಿದೆ.

ಕಳೆದ ಕೆಲವು ತಿಂಗಳುಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಜಾನಕಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಈ ವರ್ಷದ ಜನವರಿಯಲ್ಲಿ ಪುತ್ರ ಮುರಳಿ ಕೃಷ್ಣ ಅವರ ನಿಧನವು ಅವರಿಗೆ ತೀವ್ರ ಆಘಾತ ಉಂಟುಮಾಡಿದ್ದು, ಅದರ ಬಳಿಕ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿತ್ತು ಎನ್ನಲಾಗಿದೆ.

ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಮೂಲದ ಎಸ್. ಜಾನಕಿ ಅವರು 20ಕ್ಕೂ ಹೆಚ್ಚು ಭಾರತೀಯ ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡುವ ಮೂಲಕ ಭಾರತೀಯ ಸಂಗೀತ ಇತಿಹಾಸದಲ್ಲಿ ಅಚ್ಚಳಿಯದ ಹೆಜ್ಜೆ ಗುರುತು ಮೂಡಿಸಿದ್ದಾರೆ. ವಿಶೇಷವಾಗಿ ಕನ್ನಡ ಭಾಷೆಯ ಸ್ಪಷ್ಟ ಉಚ್ಚಾರಣೆ ಹಾಗೂ ಭಾವಪೂರ್ಣ ಗಾಯನದಿಂದ ಅವರು ಕನ್ನಡಿಗರ ಮನೆಮಾತಾಗಿದ್ದರು.

ಸಣ್ಣ ಮಗುವಿನ ಧ್ವನಿಯಿಂದ ಹಿಡಿದು ಪ್ರೌಢ ಮಹಿಳೆಯ ಧ್ವನಿವರೆಗೂ ವಿಭಿನ್ನ ಧ್ವನಿಶೈಲಿಯಲ್ಲಿ ಹಾಡುವ ಅಪರೂಪದ ಪ್ರತಿಭೆ ಜಾನಕಿ ಅವರದ್ದಾಗಿತ್ತು. ಅವರ ಗಾಯನದಲ್ಲಿ ಭಾವ, ಅಭಿನಯ ಮತ್ತು ಸಂಗೀತದ ಮಧುರತೆ ಒಂದಾಗಿದ್ದು, ಅನೇಕ ಹಾಡುಗಳು ಇಂದಿಗೂ ಸಂಗೀತ ಪ್ರಿಯರ ಮನದಲ್ಲಿ ಚಿರಸ್ಥಾಯಿಯಾಗಿ ಉಳಿದಿವೆ.

ಅವರ ಕಲಾಸೇವೆಗೆ ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು, 33 ವಿವಿಧ ರಾಜ್ಯಗಳ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ತಮಿಳುನಾಡು ಸರ್ಕಾರದ ಕಲೈಮಾಮಣಿ ಪ್ರಶಸ್ತಿ, ಗೌರವ ಡಾಕ್ಟರೇಟ್ ಸೇರಿದಂತೆ ಹಲವು ಗೌರವಗಳು ಲಭಿಸಿವೆ. 2013ರಲ್ಲಿ ಭಾರತ ಸರ್ಕಾರವು ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಅವರನ್ನು ಗೌರವಿಸಿತ್ತು.

ಎಸ್. ಜಾನಕಿ ಅವರ ನಿಧನಕ್ಕೆ ಚಿತ್ರರಂಗ, ಸಂಗೀತ ಕ್ಷೇತ್ರದ ಗಣ್ಯರು, ರಾಜಕೀಯ ನಾಯಕರು ಹಾಗೂ ಕೋಟ್ಯಂತರ ಅಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಧ್ವನಿ ಎಂದೆಂದಿಗೂ ಸಂಗೀತ ಪ್ರಿಯರ ಹೃದಯದಲ್ಲಿ ಜೀವಂತವಾಗಿರಲಿದೆ.

Previous Post

‘ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ’ ರಾಷ್ಟ್ರೀಯ ಭದ್ರತೆಗೆ ಅಪಾಯ

Next Post

ಜೋಯ್ ಕ್ರಶರ್ಸ್ ಮಾಲಕ ಸಿಎಮ್ ಜೋಯ್ ನಿಧನಕ್ಕೆ ಉದಯ ಶೆಟ್ಟಿ ಮುನಿಯಾಲು ಸಂತಾಪ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಜೋಯ್ ಕ್ರಶರ್ಸ್ ಮಾಲಕ ಸಿಎಮ್ ಜೋಯ್ ನಿಧನಕ್ಕೆ ಉದಯ ಶೆಟ್ಟಿ ಮುನಿಯಾಲು ಸಂತಾಪ

ಜೋಯ್ ಕ್ರಶರ್ಸ್ ಮಾಲಕ ಸಿಎಮ್ ಜೋಯ್ ನಿಧನಕ್ಕೆ ಉದಯ ಶೆಟ್ಟಿ ಮುನಿಯಾಲು ಸಂತಾಪ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜೋಯ್ ಕ್ರಶರ್ಸ್ ಮಾಲಕ ಸಿಎಮ್ ಜೋಯ್ ನಿಧನಕ್ಕೆ ಉದಯ ಶೆಟ್ಟಿ ಮುನಿಯಾಲು ಸಂತಾಪ

ಜೋಯ್ ಕ್ರಶರ್ಸ್ ಮಾಲಕ ಸಿಎಮ್ ಜೋಯ್ ನಿಧನಕ್ಕೆ ಉದಯ ಶೆಟ್ಟಿ ಮುನಿಯಾಲು ಸಂತಾಪ

11/07/2026
ಗಾನಕೋಗಿಲೆ ಎಸ್. ಜಾನಕಿ ವಿಧಿವಶ..!!

ಗಾನಕೋಗಿಲೆ ಎಸ್. ಜಾನಕಿ ವಿಧಿವಶ..!!

11/07/2026
‘ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ’ ರಾಷ್ಟ್ರೀಯ ಭದ್ರತೆಗೆ ಅಪಾಯ

‘ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ’ ರಾಷ್ಟ್ರೀಯ ಭದ್ರತೆಗೆ ಅಪಾಯ

11/07/2026
ಮಣಿಪಾಲ್ ಸ್ಕೂಲ್ ಆಫ್ ಲೈಫ್ ಸೈನ್ಸಸ್‌ನಲ್ಲಿ ಜೀವಕೋಶ ವಿಶ್ಲೇಷಣೆ ಕುರಿತ ಮೂರು ದಿನಗಳ ಕಾರ್ಯಾಗಾರ

ಮಣಿಪಾಲ್ ಸ್ಕೂಲ್ ಆಫ್ ಲೈಫ್ ಸೈನ್ಸಸ್‌ನಲ್ಲಿ ಜೀವಕೋಶ ವಿಶ್ಲೇಷಣೆ ಕುರಿತ ಮೂರು ದಿನಗಳ ಕಾರ್ಯಾಗಾರ

11/07/2026

Recent News

ಜೋಯ್ ಕ್ರಶರ್ಸ್ ಮಾಲಕ ಸಿಎಮ್ ಜೋಯ್ ನಿಧನಕ್ಕೆ ಉದಯ ಶೆಟ್ಟಿ ಮುನಿಯಾಲು ಸಂತಾಪ

ಜೋಯ್ ಕ್ರಶರ್ಸ್ ಮಾಲಕ ಸಿಎಮ್ ಜೋಯ್ ನಿಧನಕ್ಕೆ ಉದಯ ಶೆಟ್ಟಿ ಮುನಿಯಾಲು ಸಂತಾಪ

11/07/2026
ಗಾನಕೋಗಿಲೆ ಎಸ್. ಜಾನಕಿ ವಿಧಿವಶ..!!

ಗಾನಕೋಗಿಲೆ ಎಸ್. ಜಾನಕಿ ವಿಧಿವಶ..!!

11/07/2026
‘ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ’ ರಾಷ್ಟ್ರೀಯ ಭದ್ರತೆಗೆ ಅಪಾಯ

‘ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ’ ರಾಷ್ಟ್ರೀಯ ಭದ್ರತೆಗೆ ಅಪಾಯ

11/07/2026
ಮಣಿಪಾಲ್ ಸ್ಕೂಲ್ ಆಫ್ ಲೈಫ್ ಸೈನ್ಸಸ್‌ನಲ್ಲಿ ಜೀವಕೋಶ ವಿಶ್ಲೇಷಣೆ ಕುರಿತ ಮೂರು ದಿನಗಳ ಕಾರ್ಯಾಗಾರ

ಮಣಿಪಾಲ್ ಸ್ಕೂಲ್ ಆಫ್ ಲೈಫ್ ಸೈನ್ಸಸ್‌ನಲ್ಲಿ ಜೀವಕೋಶ ವಿಶ್ಲೇಷಣೆ ಕುರಿತ ಮೂರು ದಿನಗಳ ಕಾರ್ಯಾಗಾರ

11/07/2026