ಗ್ರಾಮೀಣ ಪ್ರದೇಶಗಳ ಆಚಾರ ವಿಚಾರಗಳನ್ನು ಯುವ ಪೀಳಿಗೆಗೆ ಮತ್ತೆ ಮತ್ತೆ ನೆನಪಿಸುವ ಜೊತೆಗೆ ಅಳವಡಿಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಈ ನಿಟ್ಟಿನಲ್ಲಿ ಗ್ರಾಮೀಣ ಗದ್ದೆಯಲ್ಲಿ ಸಾಮೂಹಿಕ ನೇಜಿ ನೆಡುವ ‘ನಟ್ಟಿ’ ಕಾರ್ಯಕ್ರಮದ ಜೊತೆಗೆ ಹಿರಿಯ ಕೃಷಿಕರನ್ನು ಗೌರವಿಸಿರುವ ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ತಂಡದ ಪ್ರಯತ್ನ ಶ್ಲಾಘನೀಯ ಎಂದು ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಹೇಳಿದರು.
ಅವರು ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾದ ವತಿಯಿಂದ ಅಧ್ಯಕ್ಷೆ ನೀತಾ ಪ್ರಭು ನೇತೃತ್ವದಲ್ಲಿ ಅಂಬಲಪಾಡಿ ಬಂಕೇರ್ಕಟ್ಟ ಗದ್ದೆಯಲ್ಲಿ ಸ್ಥಳೀಯ ಕಾರ್ಯಕರ್ತರ ಸಹಕಾರದೊಂದಿಗೆ ನಡೆದ ಸಾಮೂಹಿಕ ನೇಜಿ ನೆಡುವ ‘ನಟ್ಟಿ’ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.


‘ಏಕ್ ಪೇಡ್ ಮಾ ಕೇ ನಾಮ್’ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಕರೆಯಂತೆ ಎಲ್ಲರೂ ‘ತಾಯಿಯ ಹೆಸರಲ್ಲಿ ಒಂದೊಂದು ಗಿಡ’ ನೆಡುವ ಮೂಲಕ ಪರಿಸರ ಸಂರಕ್ಷಣೆಗೂ ಕೊಡುಗೆ ನೀಡುವಂತಾಗಬೇಕು. ಕಾಂಗ್ರೆಸ್ ನಿಂದ ನಿರಂತರ ಜನತೆಯ ದಾರಿ ತಪ್ಪಿಸುವ ಕೆಲಸ ಕಾರ್ಯಗಳು ನಡೆಯುತ್ತಿರುವ ಕಾಲಘಟ್ಟದಲ್ಲಿ ಪಕ್ಷದ ಕಾರ್ಯಕರ್ತರು ಸದಾ ಜಾಗೃತರಾಗಿದ್ದು ರಾಷ್ಟ್ರೀಯ ಚಿಂತನೆಯೊಂದಿಗೆ ಸಮಾಜಮುಖಿ ಸೇವೆಯ ಜೊತೆಗೆ ಸದೃಢ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ಅವರು ಕರೆ ನೀಡಿದರು.
ಹಿರಿಯ ಪ್ರಗತಿಪರ ಕೃಷಿಕರಾದ ಸರೋಜಿನಿ ಪೂಜಾರ್ತಿ, ಜಾನಕಿ ಪೂಜಾರ್ತಿ, ಭವಾನಿ ಪೂಜಾರ್ತಿ, ಸಂಜೀವಿನಿ ಒಕ್ಕೂಟದ ಕೃಷಿ ಸಖಿ ಸವಿತಾ ಸಂತೋಷ್ ಹಾಗೂ ಕಾರ್ಯಕ್ರಮಕ್ಕೆ ಸಹಕಾರವನಿತ್ತ ವಾಣಿ ಪ್ರಭಾಕರ್ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಎಸ್ಐಆರ್ ಮಂಗಳೂರು ವಿಭಾಗ ಸಂಚಾಲಕ ಕೆ.ಉದಯಕುಮಾರ್ ಶೆಟ್ಟಿ, ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಉಡುಪಿ ನಗರಸಭೆಯ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ ಪೂಜಾರಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ವಕ್ತಾರ ಮಧುಕರ ಮುದ್ರಾಡಿ, ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಪಂದುಬೆಟ್ಟು, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ, ನಗರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ತ್ರಿವೇಣಿ ಅಮೀನ್, ನಗರ ಎಸ್.ಟಿ. ಮೋರ್ಚಾ ಅಧ್ಯಕ್ಷೆ ಸುಮಾ ನಾಯ್ಕ್, ನಗರಸಭಾ ಸದಸ್ಯ ಹರೀಶ್ ಶೆಟ್ಟಿ, ಬಿಜೆಪಿ ಅಂಬಲಪಾಡಿ ಗ್ರಾಮಾಂತರ ಅಧ್ಯಕ್ಷ ಗಿರೀಶ್ ಅಮೀನ್, ಅಂಬಲಪಾಡಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷೆ ಸುಜಾತ ಶೆಟ್ಟಿ, ಮಾಜಿ ಅಧ್ಯಕ್ಷೆ ಭಾರತಿ ಭಾಸ್ಕರ್, ಮಾಜಿ ಗ್ರಾಮ ಪಂಚಾಯತ್ ಸದಸ್ಯ ರಾಜೇಶ್ ಸುವರ್ಣ, ಬೂತ್ ಅಧ್ಯಕ್ಷ ಹರೀಶ್ ಆಚಾರ್ಯ, ಶ್ರೀ ನಾಗರಾಜ ಸೇವಾ ಸಮಿತಿಯ ಅಧ್ಯಕ್ಷ ಶಿವಾಜಿ ಸನಿಲ್, ಗೌರವಾಧ್ಯಕ್ಷ ವಿಶ್ವನಾಥ ಹೆಗ್ಡೆ, ಎನ್.ಸಿ. ಯೂತ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್(ರಿ.) ಸಂಘಟನಾ ಕಾರ್ಯದರ್ಶಿ ನವೀನ್ ಸುವರ್ಣ, ಗೌರವ ಸಲಹೆಗಾರ ಸದಾನಂದ ಜಿ.ಕಾಂಚನ್ ಸಹಿತ ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ಪದಾಧಿಕಾರಿಗಳು, ಪಕ್ಷದ ಪ್ರಮುಖರು, ಸಂಜೀವಿನಿ ಒಕ್ಕೂಟದ ಸದಸ್ಯೆಯರು, ಸ್ಥಳೀಯ ಯುವಕ-ಯುವತಿಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಸಾಂಪ್ರದಾಯಿಕವಾಗಿ ಗದ್ದೆಗೆ ಹಾಲೆರೆಯುವ ಮೂಲಕ ಸಾಮೂಹಿಕ ನೇಜಿ ನೆಡುವ ‘ನಟ್ಟಿ’ ಕಾರ್ಯಕ್ರಮ ಚಾಲನೆಗೊಂಡಿತು.
ಸ್ಥಳೀಯ ಮಹಿಳೆಯರ ಸಹಕಾರದಿಂದ ವಾಣಿ ಪ್ರಭಾಕರ್ ಅವರ ನಿವಾಸದಲ್ಲಿ ಸಾಮೂಹಿಕ ಸಹ ಭೋಜನದೊಂದಿಗೆ ‘ನಟ್ಟಿ’ ಕಾರ್ಯಕ್ರಮವು ಸಮಾಪನಗೊಂಡಿತು.







