ಉಡುಪಿ: ವಿದ್ಯಾಭಾರತಿ ಉಡುಪಿ ಜಿಲ್ಲೆ ಕರ್ನಾಟಕ, ರಾಷ್ಟ್ರೋತ್ಥಾನ ಪದವಿ ಪೂರ್ವ ಕಾಲೇಜು ಹಾಗೂ ವಿದ್ಯಾ ಕೇಂದ್ರ ಚೇರ್ಕಾಡಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ 19 ನೇ ವರ್ಷದ ಅಥ್ಲೆಟಿಕ್ ಕ್ರೀಡಾ ಕೂಟದಲ್ಲಿ, ಬ್ರಹ್ಮಾವರ ಚೇರ್ಕಾಡಿಯ ರಾಷ್ಟ್ರೋತ್ಥಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆಗೈದು, ವೈಯಕ್ತಿಕ ಮತ್ತು ತಂಡ ಛಾಂಪಿಯನ್ ಪ್ರಶಸ್ತಿ ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ. 17 ರ ವಯೋಮಾನದ ಕಿಶೋರ ವರ್ಗದಲ್ಲಿ ಚಿನ್ಮಯ್ ಕೆ ವೈಯಕ್ತಿಕ ಛಾಂಪಿಯನ್ ಪ್ರಶಸ್ತಿ ಪಡೆದಿದ್ದಾರೆ. 19 ರ ವಯೋಮಾನದ ತರುಣ ವರ್ಗ ದಲ್ಲಿ ನಾಗರಾಜ್ ಮತ್ತು ಪ್ರಜ್ಞಾ ವೈಯಕ್ತಿಕ ಛಾಂಪಿಯನ್ ಪ್ರಶಸ್ತಿ ಪಡೆದಿದ್ದಾರೆ.
ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಭಾಗ್ಯಶ್ರೀ ಐತಾಳ್ ಹಾಗೂ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ರಜತ್ ಮರಕಾಲ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.







