ಉಡುಪಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್, ಉಡುಪಿ ತಾಲೂಕು ಇದರ ವತಿಯಿಂದ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನ, ಅಂಬಲಪಾಡಿ ಇದರ ಸಹಯೋಗದಲ್ಲಿ ಆಗಸ್ಟ್ 2, ರವಿವಾರ ನಡೆಯಲಿರುವ ಉಡುಪಿ ತಾಲೂಕು ಮಟ್ಟದ
ಭಜನೋತ್ಸವ – 2026 ಇದರ ಆಮಂತ್ರಣ ಪತ್ರಿಕೆ ಯನ್ನು ಶ್ರೀ ದೇವಳದ ಧರ್ಮದರ್ಶಿಗಳಾದ ಡಾ! ನಿ. ಬೀ. ವಿಜಯ ಬಳ್ಳಾಳ್, ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಈ ಸಭೆಯ ಅಧ್ಯಕ್ಷತೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತ್, ಉಡುಪಿ ತಾಲೂಕು ಅಧ್ಯಕ್ಷರಾದ ಶ್ರೀ ವಿಜಯ ಶೆಟ್ಟಿ ಕೊಂಡಾಡಿಯವರು ವಹಿಸಿದ್ದರು .
ಭಜನಾ ಪರಿಷತ್ ರಾಜ್ಯ ಉಪಾಧ್ಯಕ್ಷರಾದ ಶ್ರೀ ರಾಜೇಂದ್ರ ಕುಮಾರ್ ಬಸ್ರೂರುರವರು ಕ್ಷೇತ್ರದ ಕಾರ್ಯಕ್ರಮಗಳ ಬಗ್ಗೆ ಹಾಗೂ ಭಜನಾ ಪರಿಷತ್ತಿನ ಚಟುವಟಿಕೆಗಳ ಬಗ್ಗೆ ಮತ್ತು 28ನೇ ವರ್ಷದ ಭಜನಾ ಕಮ್ಮಟದ ಬಗ್ಗೆ ಮಾಹಿತಿಯನ್ನು ನೀಡಿದರು.
ಉಡುಪಿ ತಾಲೂಕು ಯೋಜನಾಧಿಕಾರಿಗಳಾದ ಶ್ರೀ ಸುರೇಂದ್ರ ನಾಯ್ಕ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.
ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿಯಾದ ಶ್ರೀ ಶಿವಕುಮಾರ್ ಅಂಬಲಪಾಡಿ ಭಜನೋತ್ಸವದ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿ, ಎಲ್ಲರನ್ನೂ ಸ್ವಾಗತಿಸಿದರು, ಉಡುಪಿ ಜಿಲ್ಲಾ ಸಮನ್ವಯಾಧಿಕಾರಿ ಶ್ರೀ ರವೀಂದ್ರರವರು ಧನ್ಯವಾದ ಸಮರ್ಪಿಸಿದರು.
ತಾಲೂಕು ಸಮಿತಿಯ ಪದಾಧಿಕಾರಿಗಳು ಮತ್ತು ತಾಲೂಕಿನ ಎಲ್ಲಾ ವಲಯಗಳ ಸಂಯೋಜಕರು, ತಾಲೂಕಿನ ವಿವಿಧ ಭಜನಾ ಮಂಡಳಿಯ ಅಧ್ಯಕ್ಷರು, ಕಾರ್ಯದರ್ಶಿಯವರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.







