ಉಡುಪಿ: ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿಧೋದ್ದೇಶ ಸಹಕಾರ ಸಂಘ (ನಿ.) ಇದರ 38ನೇ ವಾರ್ಷಿಕ ಮಹಾಸಭೆ ಹಾಗೂ 2025–26 ನೇ ಸಾಲಿನ ವಾರ್ಷಿಕ ವರದಿ ಮಂಡನೆ ಭಾನುವಾರ ಉಡುಪಿಯ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಸಂಘದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ 2025–26ನೇ ಸಾಲಿನ ವಾರ್ಷಿಕ ವರದಿ, ಲೆಕ್ಕಪರಿಶೋಧನಾ ವರದಿ, ಸಂಘದ ಆಡಳಿತಾತ್ಮಕ ಹಾಗೂ ಆರ್ಥಿಕ ಚಟುವಟಿಕೆಗಳ ಕುರಿತು ಸದಸ್ಯರಿಗೆ ಮಾಹಿತಿ ನೀಡಲಾಯಿತು. ಜೊತೆಗೆ ಸಂಘದ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿ, ಮುಂದಿನ ಕಾರ್ಯಯೋಜನೆಗಳಿಗೆ ಸದಸ್ಯರು ಅನುಮೋದನೆ ನೀಡಿದರು.
80 ವರ್ಷ ಮೇಲ್ಪಟ್ಟ ಮಾಜಿ ಸೈನಿಕರನ್ನು
ಸನ್ಮಾನಿಸಲಾಯಿತು ಮತ್ತು ಉಡುಪಿ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು ಅವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು.

ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು, ನಿರ್ದೇಶಕರು, ಮಾಜಿ ಸೈನಿಕರು ಹಾಗೂ ಸಂಘದ ಸದಸ್ಯರು ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.






