Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದಲ್ಲಿ ನವೀನ ಎಂಡೋಸ್ಕೋಪಿ (ಈ ಯು ಎಸ್ – ಗ್ಯಾಸ್ಟ್ರೊಜೆಜುನ್ಸೋಟಮಿ) ಕಾರ್ಯವಿಧಾನ – ಇದು ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಮೊದಲ ಬಾರಿಗೆ

Dhrishya News by Dhrishya News
06/06/2023
in ಕರಾವಳಿ, ಸುದ್ದಿಗಳು
0
0
SHARES
3
VIEWS
Share on FacebookShare on Twitter

ಮಣಿಪಾಲ : 6ನೇ ಜೂನ್ 2023: ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗದ ಪ್ರಾದ್ಯಾಪಕ ಮತ್ತು ಮುಖ್ಯಸ್ಥ ಡಾ.ಶಿರನ್ ಶೆಟ್ಟಿ ನೇತೃತ್ವದ ವೈದ್ಯರ ತಂಡ ಡಾ ಗಣೇಶ್ ಭಟ್, ಡಾ.ಅತಿಶ್ ಶೆಟ್ಟಿ, ಡಾ.ಬಾಲಾಜಿ ಮತ್ತು ಡಾ.ಸಂದೇಶ್ ಶೇಟ್ (ಅರಿವಳಿಕೆ) ಇವರುಗಳು ಎಂಡೋಲ್ಟ್ರಾಸೌಂಡ್ ಗೈಡೆಡ್ ಗ್ಯಾಸ್ಟ್ರೋಜೆಜುನೋಸ್ಟೋಮಿ ಎಂಬ ಸಂಕೀರ್ಣ ವಿನೂತನ ಎಂಡೋಸ್ಕೋಪಿ ಕಾರ್ಯವಿಧಾನ (ಶಸ್ತ್ರಚಿಕಿತ್ಸೆ)ವನ್ನು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಇತ್ತೀಚೆಗೆ ನಡೆಸಿದರು. ಕ್ಯಾನ್ಸರ್ ನಿಂದಾಗಿ ಗ್ಯಾಸ್ಟ್ರಿಕ್ ಔಟ್ಲೆಟ್ ಅಡಚಣೆಯನ್ನು ಹೊಂದಿರುವ ವ್ಯಕ್ತಿಗೆ ಯಶಸ್ವಿಯಾಗಿ ಈ ಕಾರ್ಯವಿಧಾನ ನಡೆಸಿದರು. ಈ ವಿಧಾನವು ಶಸ್ತ್ರಚಿಕಿತ್ಸೆಗಿಂತ ಕಡಿಮೆ ಆಕ್ರಮಣಕಾರಿಯಾಗಿದೆ ಮತ್ತು ಯಾವುದೇ ಶಸ್ತ್ರಚಿಕಿತ್ಸೆಗೆ ಸರಿಹೊಂದದ ರೋಗಿಗಳಿಗೆ ಇದು ಸೂಕ್ತ ವಿಧಾನವಾಗಿದೆ. ಎಂಡೋಸ್ಕೋಪಿಯ ಮರುದಿನವೇ ಆಸ್ಪತ್ರೆಯಿಂದ ಬಿಡುಗಡೆ ಮಾಡಬಹುದು ಮತ್ತು ಇದನ್ನು ಶಸ್ತ್ರಚಿಕಿತ್ಸೆಗಿಂತ ತುಂಬಾ ಕಡಿಮೆ ವೆಚ್ಚದಲ್ಲಿ ಮಾಡಬಹುದು.

ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್ ಮತ್ತು ಗ್ಯಾಸ್ಟ್ರಿಕ್ ಔಟ್ಲೆಟ್ ಅಡಚಣೆಯೊಂದಿಗೆ ನಿರಂತರ ವಾಂತಿ ಆಗುತ್ತಿದ್ದ 55 ವರ್ಷ ವಯಸ್ಸಿನ ಪುರುಷನನ್ನು ಮತ್ತೊಂದು ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗೆ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಕಳುಹಿಸಿದ್ದರು. ನಮ್ಮ ವೈದ್ಯರ ತಂಡ ಮತ್ತು ರೋಗಿಯ ಸಂಬಂಧಿಕರೊಂದಿಗೆ ಮಾತುಕತೆ ಮತ್ತು ಚರ್ಚೆಯ ನಂತರ, ಆಹಾರದ ಸುಲಭ ಮಾರ್ಗಕ್ಕಾಗಿ ಈ ಯು ಎಸ್ -ಗ್ಯಾಸ್ಟ್ರೋಜೆಜುನೋಸ್ಟೊಮಿ (ಹೊಟ್ಟೆ ಮತ್ತು ಸಣ್ಣ ಕರುಳಿನ ನಡುವಿನ ಸಂಪರ್ಕ) ಎಂಬ ವಿಶಿಷ್ಟವಾದ ಎಂಡೋಸ್ಕೋಪಿಕ್ ವಿಧಾನವನ್ನು ನಿರ್ವಹಿಸಲು ನಿರ್ಧರಿಸಲಾಯಿತು. ಕಾರ್ಯವಿಧಾನದ ನಂತರ ರೋಗಿಯು ಮೌಖಿಕ ಆಹಾರವನ್ನು ತೆಗೆದುಕೊಳ್ಳಲು ಸಾಧ್ಯವಾಗಿತ್ತು.

ಕರ್ನಾಟಕದ ಕರಾವಳಿ ಭಾಗದಲ್ಲಿ ಇದು ಮೊದಲನೆಯದು. ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗದ ಮುಖ್ಯಸ್ಥರು ಹಾಗೂ ಉಪ ವೈದ್ಯಕೀಯ ಅಧೀಕ್ಷಕರಾದ ಡಾ.ಶಿರನ್ ಶೆಟ್ಟಿ ಮಾತನಾಡಿ, “ಹೊಸ ತಂತ್ರಜ್ಞಾನದಿಂದಾಗಿ ವಿವಿಧ ಸಂಕೀರ್ಣ ರೋಗಗಳಿಗೆ ಎಂಡೋಸ್ಕೋಪಿ ಕಾರ್ಯವಿಧಾನಗಳ ಮೂಲಕವೇ ಹೆಚ್ಚಿನ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿದೆ ಮತ್ತು ಇದು ರೋಗಿ ಸ್ನೇಹಿ ಹಾಗೂ ಅತ್ಯಂತ ಕಡಿಮೆ ವೆಚ್ಚದಲ್ಲಿ ಇದನ್ನು ನಿರ್ವಹಿಸಬಹುದಾಗಿದೆ. ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲವು ಗ್ರಾಮೀಣ ಮಟ್ಟದ ಮತ್ತು ಬಡ ಹಿನ್ನೆಲೆಯ ರೋಗಿಗಳ ನಿರ್ವಹಣೆಗಾಗಿ ಇಂತಹ ಹೊಸ ಎಂಡೋಸ್ಕೋಪಿ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಭಾರತದ ಮೊದಲ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಒಂದಾಗಿದೆ” ಎಂದರು.

ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ.ಆನಂದ್ ವೇಣುಗೋಪಾಲ್ ಅವರು ಈ ವಿನೂತನ ಪ್ರಕ್ರಿಯೆಯಲ್ಲಿ ತೊಡಗಿರುವ ವೈದ್ಯರು ಮತ್ತು ಸಿಬ್ಬಂದಿಯ ತಂಡವನ್ನು ಶ್ಲಾಘಿಸಿದರು. ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯಕೀಯ ಅಧೀಕ್ಷಕರಾದ ಡಾ.ಅವಿನಾಶ್ ಶೆಟ್ಟಿ ಮಾತನಾಡಿ, “ಪ್ರಸ್ತುತ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗವು ಪ್ರತಿಷ್ಠಿತ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕೇಂದ್ರಗಳಿಗೆ ಸಮಾನವಾದ ಎಲ್ಲಾ ಪ್ರಮುಖ ಮತ್ತು ಸಂಕೀರ್ಣ ಎಂಡೋಸ್ಕೋಪಿಕ್ ಕಾರ್ಯವಿಧಾನಗಳನ್ನು ನಿರ್ವಹಿಸುತ್ತಿದೆ ಮತ್ತು ಇದರಿಂದ ಕರಾವಳಿ ಮತ್ತು ಮಧ್ಯ ಕರ್ನಾಟಕ ರೋಗಿಗಳಲ್ಲಿ ಹೊಸ ಭರವಸೆಯನ್ನು ನೀಡುತ್ತದೆ” ಎಂದು ಹೇಳಿದ್ದಾರೆ.

Previous Post

ಬಾಡಿಗೆದಾರರಿಗೂ 200 ಯೂನಿಟ್ ಉಚಿತ ವಿದ್ಯುತ್ : ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ..!!

Next Post

`ಮದ್ಯಪ್ರಿಯರಿಗೆ’ ಬಿಗ್ ಶಾಕ್ : ‘ಮದ್ಯದ ದರ’ ಹೆಚ್ಚಳ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

`ಮದ್ಯಪ್ರಿಯರಿಗೆ' ಬಿಗ್ ಶಾಕ್ : 'ಮದ್ಯದ ದರ' ಹೆಚ್ಚಳ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

23/06/2025
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಿಬ್ಬಂದಿ ಅಭಿವೃದ್ಧಿ ಕಾರ್ಯಕ್ರಮ : ಸಿಬ್ಬಂದಿಗಳಲ್ಲಿ ಶಿಸ್ತು ಮತ್ತು ಒಗ್ಗಟ್ಟು ಬಹು ಮುಖ್ಯ: ಪ್ರೊ. ಪಿ.ಎಲ್. ಧರ್ಮ..!!

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಿಬ್ಬಂದಿ ಅಭಿವೃದ್ಧಿ ಕಾರ್ಯಕ್ರಮ : ಸಿಬ್ಬಂದಿಗಳಲ್ಲಿ ಶಿಸ್ತು ಮತ್ತು ಒಗ್ಗಟ್ಟು ಬಹು ಮುಖ್ಯ: ಪ್ರೊ. ಪಿ.ಎಲ್. ಧರ್ಮ..!!

23/06/2025
ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

22/06/2025
ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

22/06/2025

Recent News

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

23/06/2025
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಿಬ್ಬಂದಿ ಅಭಿವೃದ್ಧಿ ಕಾರ್ಯಕ್ರಮ : ಸಿಬ್ಬಂದಿಗಳಲ್ಲಿ ಶಿಸ್ತು ಮತ್ತು ಒಗ್ಗಟ್ಟು ಬಹು ಮುಖ್ಯ: ಪ್ರೊ. ಪಿ.ಎಲ್. ಧರ್ಮ..!!

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಿಬ್ಬಂದಿ ಅಭಿವೃದ್ಧಿ ಕಾರ್ಯಕ್ರಮ : ಸಿಬ್ಬಂದಿಗಳಲ್ಲಿ ಶಿಸ್ತು ಮತ್ತು ಒಗ್ಗಟ್ಟು ಬಹು ಮುಖ್ಯ: ಪ್ರೊ. ಪಿ.ಎಲ್. ಧರ್ಮ..!!

23/06/2025
ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

22/06/2025
ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

22/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved