ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಉಡುಪಿಯ ಗುಂಡಿಬೈಲು ಬಳಿ ನಿರ್ಮಾಣಗೊಳ್ಳುತ್ತಿರುವ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯ ನೂತನ ಕಟ್ಟಡದ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.

ಮುಂದಿನ 2027ರ ಅಕ್ಟೊಬರ್-ನವೆoಬರ್ ತಿಂಗಳಲ್ಲಿ ನೂತನ ಜಿಲ್ಲಾ ಕಛೇರಿಯ ಸಮುಚ್ಚಯವು ಉದ್ಘಾಟನೆಗೊಂಡು, 2028ರ ವಿಧಾನಸಭಾ ಚುನಾವಣಾ ಗೆಲುವಿಗೆ ದಿಕ್ಸೂಚಿಯಾಗುವಂತಾಗಲಿ ಎಂದು ಬಿ.ಎಲ್. ಸಂತೋಷ್ ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ನೂತನ ಕಟ್ಟಡದ ಗುತ್ತಿಗೆದಾರ ಕೇದಾರನಾಥ ಕನ್ಸ್ಟ್ರಕ್ಷನ್ಸ್ ನ ಕೃಷ್ಣಮೂರ್ತಿ ಭಟ್ ಕೆಮ್ತೂರು, ಶಾಸಕರಾದ ಯಶ್ಪಾಲ್ ಎ. ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ, ವೈ.ಭರತ್ ಶೆಟ್ಟಿ, ರಾಜ್ಯ ಪ್ರಮುಖರಾದ ವಿಕಾಸ್ ಪುತ್ತೂರು, ಮಾಜಿ ಜಿಲ್ಲಾಧ್ಯಕ್ಷರುಗಳಾದ ಮಟ್ಟಾರ್ ರತ್ನಾಕರ ಹೆಗ್ಡೆ, ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಸಹಿತ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಮತ್ತು ಮಂಡಲಗಳ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.







