ಉಡುಪಿ :ಉಡುಪಿ ಜಿಲ್ಲೆಯ ಶಿರ್ವಾದ ವ್ಯಕ್ತಿಯೊಬ್ಬರು ‘ಡಿಜಿಟಲ್ ಅರೆಸ್ಟ್’ ಸೈಬರ್ ವಂಚನೆಗೆ ಒಳಗಾಗಿ ಒಟ್ಟು ₹11 ಲಕ್ಷ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಪೊಲೀಸರ ಮಾಹಿತಿಯಂತೆ, ಜುಲೈ 28ರಂದು ಮಧ್ಯಾಹ್ನ ಅಪರಿಚಿತ ವ್ಯಕ್ತಿಯೊಬ್ಬರು ವಿಲ್ಲಿಯಮ್ ಪಾವ್ಲ್ ಕೊರೆಯರ್ ಅವರ ಮೊಬೈಲ್ಗೆ ಕರೆ ಮಾಡಿ, ಹಿಂದಿಯಲ್ಲಿ ಮಾತನಾಡುತ್ತಾ ಅವರ ಹೆಸರಿನಲ್ಲಿ ಸಿಮ್ ಕಾರ್ಡ್ ಪಡೆದು 20 ಪ್ರಕರಣಗಳು ದಾಖಲಾಗಿವೆ ಹಾಗೂ ಮನಿ ಲಾಂಡ್ರಿಂಗ್ ಪ್ರಕರಣದಲ್ಲಿ ಅವರ ಹೆಸರು ಇದೆ ಎಂದು ಹೆದರಿಸಿದ್ದಾರೆ. ಬಳಿಕ ಆರು ಜನರ ಫೋಟೋಗಳನ್ನು ಕಳುಹಿಸಿ, ಅವರ ಪರಿಚಯವಿದೆಯೇ ಎಂದು ಪ್ರಶ್ನಿಸಿದ್ದಾರೆ.
ನಂತರ ಮತ್ತೊಬ್ಬ ವ್ಯಕ್ತಿ ತಾನು ಮುಂಬೈನ ಕೊಲಾಬಾ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮ್ಯಾಥ್ಯೂ ಎಂದು ಪರಿಚಯಿಸಿಕೊಂಡು, ಪ್ರಕರಣದಿಂದ ತಪ್ಪಿಸಿಕೊಳ್ಳಲು ಕೂಡಲೇ ಹಣ ವರ್ಗಾಯಿಸುವಂತೆ ಸೂಚಿಸಿದ್ದಾನೆ. ಇದರಿಂದ ಭಯಗೊಂಡ ವಿಲ್ಲಿಯಮ್ ಅವರು ಜುಲೈ 29ರಂದು ತಮ್ಮ ಯೂನಿಯನ್ ಬ್ಯಾಂಕ್ನ ಎರಡು ಖಾತೆಗಳಿಂದ ₹6 ಲಕ್ಷ ಹಾಗೂ ಜುಲೈ 30ರಂದು ಮತ್ತಷ್ಟು ₹5 ಲಕ್ಷ ಸೇರಿ ಒಟ್ಟು ₹11 ಲಕ್ಷವನ್ನು ಆರೋಪಿಗಳು ಸೂಚಿಸಿದ ಖಾತೆಗೆ ವರ್ಗಾಯಿಸಿದ್ದಾರೆ.
ಬಳಿಕ ತಾವು ವಂಚನೆಗೆ ಒಳಗಾಗಿರುವುದು ತಿಳಿದು ಶಿರ್ವಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರಿನ ಆಧಾರದ ಮೇಲೆ ಮ್ಯಾಥ್ಯೂ ಹಾಗೂ ಇತರ ಅಪರಿಚಿತ ಆರೋಪಿಗಳ ವಿರುದ್ಧ ಶಿರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.






