Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಭಕ್ತರ ಸಹಕಾರದಿಂದ ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ

ಉಡುಪಿ–ಉಚ್ಚಿಲ ದಸರಾ ರೂವಾರಿ ನಾಡೋಜ ಡಾ. ಜಿ. ಶಂಕರ್

Dhrishya News by Dhrishya News
08/08/2026
in ಸುದ್ದಿಗಳು
0
ಭಕ್ತರ ಸಹಕಾರದಿಂದ ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ
0
SHARES
5
VIEWS
Share on FacebookShare on Twitter

ಉಚ್ಚಿಲ: ಭಕ್ತರು, ದಾನಿಗಳು ಹಾಗೂ ಸಮಾಜದ ಸರ್ವರ ಸಹಕಾರದೊಂದಿಗೆ ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026 ಅನ್ನು ಈ ಬಾರಿ ಅತ್ಯಂತ ಶಿಸ್ತುಬದ್ಧವಾಗಿ, ಅಚ್ಚುಕಟ್ಟಾಗಿ ಹಾಗೂ ವೈಭವೋಪೇತವಾಗಿ ಆಚರಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಉಡುಪಿ–ಉಚ್ಚಿಲ ದಸರಾ ರೂವಾರಿ ನಾಡೋಜ ಡಾ. ಜಿ. ಶಂಕರ್ ಹೇಳಿದರು.

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆದ ಉಡುಪಿ–ಉಚ್ಚಿಲ ದಸರಾ ಸಮಿತಿಯ ಸರ್ವ ಸಮಿತಿಯ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಕ್ಷೇತ್ರದ ಭಕ್ತರು ಹಾಗೂ ದಾನಿಗಳ ಸಹಕಾರದಿಂದ ಅತ್ಯಂತ ಯಶಸ್ವಿಯಾಗಿ ಹಾಗೂ ಭಕ್ತಿಪೂರ್ವಕವಾಗಿ ದಸರಾ ಉತ್ಸವವನ್ನು ಆಚರಿಸಲಾಗುತ್ತಿದೆ. ವರ್ಷದಿಂದ ವರ್ಷಕ್ಕೆ ಈ ಉತ್ಸವವು ದೇಶ-ವಿದೇಶಗಳ ಭಕ್ತರ ಗಮನ ಸೆಳೆಯುತ್ತಿದ್ದು, ಪಂಚಮ ವರ್ಷದ ದಸರಾ ಉತ್ಸವವನ್ನು ಇನ್ನಷ್ಟು ವೈಭವದಿಂದ ಹಾಗೂ ವ್ಯವಸ್ಥಿತವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದರು.

ಈ ವರ್ಷದ ದಸರಾ ಉತ್ಸವದಲ್ಲಿ ನಿತ್ಯ ಚಂಡಿಕಾಯಾಗ, ನಿತ್ಯ ಸಾಮೂಹಿಕ ಕುಂಕುಮಾರ್ಚನೆ, ಕಲ್ಪೋಕ್ತ ಪೂಜೆ, ಮಹಾಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಇದರೊಂದಿಗೆ ವೈಭವೋಪೇತ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಶಿಷ್ಟ ವಸ್ತುಪ್ರದರ್ಶನ, ವಿದ್ಯುದ್ದೀಪಾಲಂಕಾರ, ನಿತ್ಯ ಅನ್ನಸಂತರ್ಪಣೆ ಹಾಗೂ ಸಂಜೆ ಉಪಹಾರದ ವ್ಯವಸ್ಥೆ ಇರಲಿದೆ.

ವಿಶೇಷವಾಗಿ ರಂಗೋಲಿ ಸ್ಪರ್ಧೆ, ಮಕ್ಕಳಿಗಾಗಿ ಶ್ರೀ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಹುಲಿಕುಣಿತ ಸ್ಪರ್ಧೆ, ಕುಣಿತ ಭಜನೆ ಹಾಗೂ ಸಾಮೂಹಿಕ ದಾಂಡಿಯಾ ಸೇರಿದಂತೆ ವಿವಿಧ ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು.

ಶ್ರೀ ಮಹಾಲಕ್ಷ್ಮೀ ಅಮ್ಮನವರ ಸಾನಿಧ್ಯದಲ್ಲಿ ಶ್ರೀ ಶಾರದಾ ಮಾತೆಯ ಸಹಿತ ನವದುರ್ಗೆಯರ ಆರಾಧನೆಯನ್ನು ಅತ್ಯಂತ ಭಕ್ತಿಪೂರ್ವಕವಾಗಿ ನೆರವೇರಿಸಲಾಗುವುದು. ದಸರಾ ಉತ್ಸವದ ಎಲ್ಲಾ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯಲು ಭಗವದ್ಭಕ್ತರು, ದಾನಿಗಳು ಹಾಗೂ ಸರ್ವರ ಸಂಪೂರ್ಣ ಸಹಕಾರ ಅಗತ್ಯವಾಗಿದ್ದು, ಎಲ್ಲರೂ ಸಹಕರಿಸುವಂತೆ ನಾಡೋಜ ಡಾ. ಜಿ. ಶಂಕರ್ ವಿನಂತಿಸಿದರು.

ಉದ್ಯಮಿ ಆನಂದ್ ಸಿ. ಕುಂದರ್ ಮಾತನಾಡಿ, ಬೆಲೆ ಏರಿಕೆಯಿಂದ ಕಾರ್ಯಕ್ರಮದ ಖರ್ಚು-ವೆಚ್ಚಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಈ ಬಗ್ಗೆ ಸೂಕ್ತ ಗಮನಹರಿಸಿ ಕಾರ್ಯಕ್ರಮಗಳನ್ನು ಯೋಜನಾಬದ್ಧವಾಗಿ ಸಂಯೋಜಿಸಬೇಕಾಗಿದೆ. ಈ ವರ್ಷದ ದಸರಾ ಉತ್ಸವಕ್ಕೂ ತಮ್ಮ ಸಂಪೂರ್ಣ ಸಹಕಾರ ನೀಡುವುದಾಗಿ ಅವರು ಭರವಸೆ ನೀಡಿದರು.

ದ.ಕ. ಮೊಗವೀರ ಮಹಾಜನ ಸಂಘ (ರಿ.), ಉಚ್ಚಿಲ ಇದರ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್ ಮಾತನಾಡಿ, ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಸರ್ವ ಭಕ್ತರು ಸಹಕಾರ ನೀಡುವಂತೆ ಮನವಿ ಮಾಡಿದರು.

ದಸರಾ ಸಮಿತಿ ಅಧ್ಯಕ್ಷರಾದ ವಿನಯ್ ಕರ್ಕೇರ ಪ್ರಾಸ್ತಾವಿಕವಾಗಿ ಮಾತನಾಡಿದರು. ದಸರಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕುಂದರ್, ಮಲ್ಪೆ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

ಈ ಸಂದರ್ಭದಲ್ಲಿ ನಾಡೋಜ ಡಾ. ಜಿ. ಶಂಕರ್, ಆನಂದ್ ಸಿ. ಕುಂದರ್,
ಜಯ ಸಿ. ಕೋಟ್ಯಾನ್,  ಯಶ್ ಪಾಲ್ ಎ. ಸುವರ್ಣ, ಮೋಹನ್ ಬೆಂಗ್ರೆ, ಶರಣ್ ಕುಮಾರ್ ಮಟ್ಟು, ವಿನಯ್ ಕರ್ಕೇರ, ರಾಘವೇಂದ್ರ ಉಪಾಧ್ಯಯ, ಗಿರಿಧರ್ ಸುವರ್ಣ ಮೂಳೂರು, ಹರಿಯಪ್ಪ ಆರ್ ಕೋಟ್ಯಾನ್, ಯುವರಾಜ್ ಸಾಲಿಯಾನ್ ಮಸ್ಕತ್,
ಸತೀಶ್ ಅಮೀನ್ ಬಾರ್ಕೂರ್,
ಉದಯ್ ಕುಮಾರ್ ಹಟ್ಟಿಯಂಗಡಿ, ರತ್ನಾಕರ್ ಸಾಲ್ಯಾನ್ ಮಲ್ಪೆ, ನಾಗರಾಜ್ ಸುವರ್ಣ ಮಲ್ಪೆ,
ಶ್ರೀಪತಿ ಭಟ್ ಉಚ್ಚಿಲ, ಕವಿತಾ ಕಾಂಚನ್, ಸುಗುಣ ಕರ್ಕೇರ, ಸುಧೀರ್ ಉಳ್ಳಾಲ, ಮನೋಜ್ ಕಾಂಚನ್ ಎರ್ಮಾಳ್, ಮನೋಜ್ ಉಳ್ಳಾಲ, ರಾಜೇಶ್ ಪುತ್ರನ್ ಉಳ್ಳಾಲ, ಸತೀಶ್ ಕುಂದರ್ ಮಲ್ಪೆ, ರವೀಶ್ ಎಸ್.ಕೊರವಡಿ, ಗೌತಮ್ ಕೋಡಿಕಲ್, ಗುಂಡು ಬಿ. ಅಮೀನ್ ಕಿದಿಯೂರ್, ವಾಸುದೇವ ಸಾಲ್ಯಾನ್ ಕಟಪಾಡಿ, ಸುಧಾಕರ್ ಕುಂದರ್ ಮಲ್ಪೆ, ದಿನೇಶ್ ಎರ್ಮಾಳ್, ಚೇತನ್ ಬೆಂಗ್ರೆ,
ಶಿವರಾಮ್ ಕೋಟ, ಕಿರಣ್ ಕುಮಾರ್ ಪಿತ್ರೋಡಿ ಉಪಸ್ಥಿತರಿದ್ದರು.

 

 

Previous Post

‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಕ್ತರ ಸಹಕಾರದಿಂದ ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ

ಭಕ್ತರ ಸಹಕಾರದಿಂದ ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ

08/08/2026
‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

08/08/2026
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

08/08/2026
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026

Recent News

ಭಕ್ತರ ಸಹಕಾರದಿಂದ ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ

ಭಕ್ತರ ಸಹಕಾರದಿಂದ ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ

08/08/2026
‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

08/08/2026
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

08/08/2026
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026