ಉಡುಪಿ :ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆಯು ಇಂದು ಬನ್ನಂಜೆ ಶ್ರೀ ನಾರಾಯಣ ಗುರು ಸಭಾಂಗಣದಲ್ಲಿ ನಡೆಯಿತು.
ಸಭೆಯ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಬೀಡಿ ಕಾರ್ಮಿಕರ ಫೆಡರೇಶನ್ ನ ರಾಜ್ಯ ಅಧ್ಯಕ್ಷ ರಾದ ಕಾಮ್ರೇಡ್ ಜೆ.ಬಾಲಕೃಷ್ಣ ಶೆಟ್ಟಿ ಮಾಡಿ ಮಾತನಾಡುತ್ತಾ ಕೇಂದ್ರ ಸರಕಾರ ಜಾರಿಗೆ ತಂದಿರುವ 4ಲೇಬರ್ ಕೋಡ್ ಗಳಿಂದ ಇವತ್ತು ಬೀಡಿ ಕಾರ್ಮಿಕರು ಹಲವಾರು ಸಂಕಷ್ಟಗಳನ್ನು ಎದುರಿಸುವಂತಾಗಿದೆ. ಬೀಡಿ ಕಾರ್ಮಿಕರ ಕಲ್ಯಾಣ ಮಂಡಳಿ ರಾಜ್ಯದಿಂದ ಕೇಂದ್ರಕ್ಕೆ ಹೋಗಿರುವುದರಿಂದ ಬೀಡಿ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೆತನ ಸರಿಯಾಗಿ ಸಿಗುತ್ತಿಲ್ಲ,ಬೀಡಿ ಆಸ್ಪತ್ರೆಗಳಲ್ಲಿ ಸರಿಯಾಗಿ ಚಿಕಿತ್ಸೆಗಳು ಹಾಗೂ ಡಿಸ್ಪೇನ್ಷರಿಗಳಲ್ಲಿ ಔಷಧಿಗಳು ಸಿಗುತ್ತಿಲ್ಲ.ಮನೆ ಕಟ್ಟಲು ಸಹಾಯಧನ,ಆರೋಗ್ಯಕ್ಕೆ ಸಹಾಯ ಧನ ಕೂಡ ಸಿಗುತ್ತಿಲ್ಲ ಇನ್ನೊಂದು ಕಡೆ ರಾಜ್ಯ ಸರಕಾರಗಳು ಬೀಡಿ ಕಾರ್ಮಿಕರ ವೇತನ ಹೆಚ್ಚಳ ಮಾಡುತ್ತಿಲ್ಲ ಬದಲಾಗಿ ಬೀಡಿ ಕಂಪನಿಯ ಮಾಲಿಕರ ಜೊತೆ ಕೆಲವು ಒಪ್ಪಂದ ಮಾಡಿಕೊಂಡಂತಿದೆ. ಅದ್ದರಿಂದ ಇವತ್ತು ಬೀಡಿ ಕಾರ್ಮಿಕರು ಬೀದಿ ಪಾಲಾಗುವಂತಾಗಿದೆ.
ಮುಖ್ಯ ಅತಿಥಿಗಳಾಗಿ ಸಿಐಟಿಯು ಉಡುಪಿ ಜಿಲ್ಲಾ ಅಧ್ಯಕ್ಷ ರಾದ ಶಶಿಧರ್ ಗೊಲ್ಲ, ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ ಫೆಡರೇಶನ್ ಪ್ರಧಾನ ಕಾರ್ಯದರ್ಶಿ ಕವಿರಾಜ್. ಎಸ್. ಕಾಂಚನ್, ಜಿಲ್ಲಾ ಕೋಶಾಧಿಕಾರಿ ಬಲ್ಕೀಸ್, ಬೀಡಿ ಎಂಡ್ ಟೋಬ್ಯಾಕೋ ಲೇಬರ್ ಯೂನಿಯನ್ ಅಧ್ಯಕ್ಷ ರಾದ ನಳಿನಿ.ಎಸ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದರು. ಕಾರ್ಯದರ್ಶಿ ಉಮೇಶ್ ಕುಂದರ್ ಕಾರ್ಯಕ್ರಮ ನಿರೂಪಣೆ ಮಾಡಿ ಸ್ವಾಗತಿಸಿದರು, ಕೊನೆಯಲ್ಲಿ ಕೋಶಾಧಿಕಾರಿ ಜ್ಯೋತಿ ಧನ್ಯವಾದ ನೀಡಿದರು.






