Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ ಎಸ್‌ಕೆಪಿಎ ವಲಯದ 31ನೇ ವಾರ್ಷಿಕ ಸಭೆ

Dhrishya News by Dhrishya News
13/08/2026
in ಸುದ್ದಿಗಳು
0
ಕಾರ್ಕಳ ಎಸ್‌ಕೆಪಿಎ ವಲಯದ 31ನೇ ವಾರ್ಷಿಕ ಸಭೆ
0
SHARES
3
VIEWS
Share on FacebookShare on Twitter

ಕಾರ್ಕಳ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.) ದಕ್ಷಿಣ ಕನ್ನಡ–ಉಡುಪಿ ಜಿಲ್ಲೆ, ಕಾರ್ಕಳ ವಲಯದ 31ನೇ ವಾರ್ಷಿಕ ಸಭೆ ಅಧ್ಯಕ್ಷ ಪ್ರಮೋದ್ ಚಂದ್ರ ಪೈ ಮುನಿಯಾಲ್ ಅವರ ಅಧ್ಯಕ್ಷತೆಯಲ್ಲಿ ಹೋಟೆಲ್ ಪ್ರಕಾಶ್ ಕಾರ್ಕಳ ಇಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಎಸ್‌ಕೆಪಿಎ ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ಅಧ್ಯಕ್ಷ ನವೀನ್ ರೈ ಪಂಜಾಳ ಉದ್ಘಾಟಿಸಿ, ಜಿಲ್ಲೆಯ ವಿವಿಧ ಯೋಜನೆಗಳನ್ನು ಸದಸ್ಯರು ಸದುಪಯೋಗಪಡಿಸಿಕೊಳ್ಳಬೇಕು. ವಿಶೇಷವಾಗಿ ‘ಛಾಯಾ ಸಾಂತ್ವನ’ ಯೋಜನೆಗೆ ಎಲ್ಲರೂ ಕೈಜೋಡಿಸುವ ಮೂಲಕ ಆಪತ್ಕಾಲದಲ್ಲಿ ಸದಸ್ಯರಿಗೆ ನೆರವಾಗುವಂತೆ ಸಹಕರಿಸಬೇಕು ಎಂದು ಕರೆ ನೀಡಿದರು. ಕಾರ್ಕಳ ವಲಯದ 31ನೇ ವಾರ್ಷಿಕ ಸಭೆಯ ಉತ್ತಮ ಆಯೋಜನೆಗೆ ಶುಭ ಹಾರೈಸಿದರು.

ಅಧ್ಯಕ್ಷೀಯ ಭಾಷಣದಲ್ಲಿ ಪ್ರಮೋದ್ ಚಂದ್ರ ಪೈ ಮುನಿಯಾಲ್ ಅವರು, ವಲಯದ ನೂತನ ಯೋಜನೆಯಾದ ‘ವೈದ್ಯ ಬಂಧು ಕಾರ್ಡ್’ ಅನ್ನು ಸದಸ್ಯರಿಗೆ ವೈದ್ಯಕೀಯ ಸಲಹೆಗಾಗಿ ನೀಡಲಾಗುತ್ತಿದ್ದು, ತುರ್ತು ಸಂದರ್ಭಗಳಲ್ಲಿ ಇದು ಸಹಕಾರಿಯಾಗಲಿದೆ ಎಂದರು. ಸದಸ್ಯ ಪ್ರಶಾಂತ್ ಬಜಗೋಳಿ ಅವರ ಸಹಕಾರವನ್ನು ಸ್ಮರಿಸಿದರು. ಅಲ್ಲದೆ, ಸದಸ್ಯರಿಗೆ ಆಪತ್ಕಾಲದಲ್ಲಿ ಆರ್ಥಿಕ ನೆರವು ನೀಡುವ ಉದ್ದೇಶದಿಂದ ‘ಸಹಾಯ ಹಸ್ತ ನಿಧಿ’ ರಚಿಸಲಾಗುತ್ತಿದ್ದು, ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು. ಕಳೆದ ಒಂದು ವರ್ಷದಲ್ಲಿ ಜಿಲ್ಲಾ ಹಾಗೂ ವಲಯದ ಪದಾಧಿಕಾರಿಗಳು ಮತ್ತು ಸದಸ್ಯರ ಸಹಕಾರದಿಂದ ಉತ್ತಮ ಕಾರ್ಯಚಟುವಟಿಕೆಗಳನ್ನು ನಡೆಸಲು ಸಾಧ್ಯವಾಗಿದ್ದು, ಮುಂದೆಯೂ ಇದೇ ಸಹಕಾರ ಮುಂದುವರಿಯಲಿ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸಂಚಾಲಕ ಗೋಪಾಲ್ ಸುಳ್ಯ, ಪ್ರಧಾನ ಕಾರ್ಯದರ್ಶಿ ಅಜಯ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ದತ್ತಾತ್ರೇಯ, ಜಿಲ್ಲಾ ಕಟ್ಟಡ ಸಮಿತಿ ಸದಸ್ಯ ಪ್ರಸಾದ್ ಐಸಿರ, ಕಾರ್ಕಳ ವಲಯದ ಗೌರವಾಧ್ಯಕ್ಷ ಟಿ.ವಿ. ಸುಶೀಲ್ ಕುಮಾರ್ ಸೇರಿದಂತೆ ಜಿಲ್ಲಾ ಹಾಗೂ ವಲಯದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಸಂಘಟನೆಯ ಕಾರ್ಯಚಟುವಟಿಕೆಗಳಲ್ಲಿ ವರ್ಷಪೂರ್ತಿ ವಿಶೇಷ ಸೇವೆ ಸಲ್ಲಿಸಿದ ಸುಶಾಂತ್ ಬಜಗೋಳಿ, ಪ್ರಶಾಂತ್ ಬಜಗೋಳಿ ಹಾಗೂ ವಿಶ್ರಾಂತ ಬಜಗೋಳಿ ಅವರನ್ನು ಗೌರವಿಸಲಾಯಿತು.
ಸುಶಾಂತ್ ಬಜಗೋಳಿ ಸ್ವಾಗತಿಸಿದರು,
ವಾರ್ಷಿಕ ಲೆಕ್ಕಪತ್ರವನ್ನು ಕೋಶಾಧಿಕಾರಿ ಸತೀಶ್ ಆಚಾರ್ಯ ವರಂಗ ಮಂಡಿಸಿದರು. ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ಶೇಖರ್ ಕೊಕ್ಕುಜೆ ವಾಚಿಸಿದರು. ಕಾರ್ಯಕ್ರಮವನ್ನು ವಿಠ್ಠಲ್ ಅಮೀನ್ ಕಾರ್ಕಳ ನಿರೂಪಿಸಿದರು. ಜೊತೆ ಕಾರ್ಯದರ್ಶಿ ಸುಜಿತ್ ಅಂಚನ್ ಧನ್ಯವಾದ ಅರ್ಪಿಸಿದರು.

Previous Post

ಮೈಕ್ರೋಸಾಫ್ಟ್‌ನಿಂದ ಮಾಹೆಯಲ್ಲಿ ಐದು ಅತ್ಯಾಧುನಿಕ ಎಐ ತಂತ್ರಜ್ಞಾನ ಲ್ಯಾಬ್‌ಗಳ ಸ್ಥಾಪನೆ

Next Post

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026
ಕಾರ್ಕಳ ಎಸ್‌ಕೆಪಿಎ ವಲಯದ 31ನೇ ವಾರ್ಷಿಕ ಸಭೆ

ಕಾರ್ಕಳ ಎಸ್‌ಕೆಪಿಎ ವಲಯದ 31ನೇ ವಾರ್ಷಿಕ ಸಭೆ

13/08/2026

Recent News

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026
ಕಾರ್ಕಳ ಎಸ್‌ಕೆಪಿಎ ವಲಯದ 31ನೇ ವಾರ್ಷಿಕ ಸಭೆ

ಕಾರ್ಕಳ ಎಸ್‌ಕೆಪಿಎ ವಲಯದ 31ನೇ ವಾರ್ಷಿಕ ಸಭೆ

13/08/2026