ಉಡುಪಿ : ಉಡುಪಿ ಜಿಲ್ಲಾ ನಾಗರಿಕ ಸಮಿತಿ ವತಿಯಿಂದ 80ನೇ ಸ್ವಾತಂತ್ರೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಉಡುಪಿ ಜಿಲ್ಲಾ ನಾಗರೀಕ ಸಮಿತಿ , ಮಿತ್ರ ಸ್ಕೂಲ್ ಆಫ್ ನರ್ಸಿಂಗ್ ವತಿಯಿಂದ ನಾಗರೀಕ ಸಮಿತಿಯ ಕಚೇರಿಯ ಮುಂಬಾಗ ಬ್ರಹತ್ ಗಾತ್ರದ 20*14 ಅಗಲದ ರಾಷ್ಟ್ರದ್ವಜವನ್ನು ಪ್ರದರ್ಶಿಸಲಾಯಿತು.
ಮುಖ್ಯ ಅತಿಥಿಯಾಗಿ ಬಾಗವವಹಿಸಿ ಭೀಮಾ ಜುವೆಲ್ಲರ್ ನ ಮ್ಯಾನೇಜರ್ ಆಶೀಶ್ ಅವರು ಸ್ವಾತಂತ್ರೋತ್ಸವಕ್ಕೆ ಶುಭ ಕೋರಿದರು.
ಈ ಸಂದರ್ಬದಲ್ಲಿ ಮಿತ್ರ ಸ್ಕೂಲ್ ಆಫ್ ನರ್ಸಿಂಗ್ ನ ಪ್ರಾಂಶುಪಾಲೆ ವನಿತಾ, ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಮುಂತಾದವರು ಉಪಸ್ಥಿತರಿದ್ದರು.







