ಉಡುಪಿ :ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಉಡುಪಿ ವಲಯ ಸಮಿತಿ ನೇತ್ರತ್ವದಲ್ಲಿ ಇಂದು ತಮ್ಮ ಕಛೇರಿ ಮುಂದೆ 80 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.
ಸಿಐಟಿಯು ಉಡುಪಿ ಜಿಲ್ಲಾ ಅಧ್ಯಕ್ಷ ರಾದ ಶಶಿಧರ್ ಗೊಲ್ಲ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ದಲಿತ ಹಕ್ಕುಗಳ ಸಮಿತಿ ಉಡುಪಿ ಜಿಲ್ಲಾ ಅಧ್ಯಕ್ಷ ರಾದ ಸಂಜೀವ ಬಳ್ಕೂರು ಶುಭ ಕೋರಿ ಮಾತನಾಡಿದರು. ಉಡುಪಿ ಜಿಲ್ಲಾ ಕಟ್ಟಡ ಸಂಘದ ಅಧ್ಯಕ್ಷರಾದ ಸುಭಾಸ್ ನಾಯಕ್, ಕೋಶಾಧಿಕಾರಿ ವಾಮನ ಪೂಜಾರಿ, ಮುಖಂಡರಾದ ರಾಮ ಸಾಲ್ಯಾನ್, ಸರೋಜ.ಎಸ್, ಮುರಳಿ, ಉಡುಪಿ ಬೀಡಿ ಎಂಡ್ ಟೊಬ್ಯಾಕೋ ಲೇಬರ್ ಯೂನಿಯನ್ ಅಧ್ಯಕ್ಷರಾದ ನಳಿನಿ, ಕಾರ್ಯದರ್ಶಿ ಉಮೇಶ್ ಕುಂದರ್, ಸಾರಿಕ, ಶರ್ಮಿಳ, ಸೌಮ್ಯ ಉಪಸ್ಥಿತರಿದ್ದರು
ಸಿಐಟಿಯು ಉಡುಪಿ ವಲಯ ಸಂಚಾಲಕರಾದ ಕವಿರಾಜ್. ಎಸ್.ಕಾಂಚನ್ ಕಾರ್ಯಕ್ರಮ ನಿರೂಪಣೆ ಮಾಡಿ ಧನ್ಯವಾದ ನೀಡೀದರು.






