Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ.

Dhrishya News by Dhrishya News
15/08/2026
in ಸುದ್ದಿಗಳು
0
ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.
0
SHARES
7
VIEWS
Share on FacebookShare on Twitter

ಉಡುಪಿ : ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಉಪ್ಪೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ” ವಯೋವಂದನ ಆತಿಥ್ಯ ಗೃಹದ
” ಸೈಟ್ ಆಫೀಸ್” ಉದ್ಘಾಟನೆಯನ್ನು ಡಾ. ಪಾಂಗಾಳ ಸೀತಾರಾಮ ನಾಯಕ್ ರವರು ನೆರವೇರಿಸಿ ಮಾತನಾಡುತ್ತಾ, ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ಸಮಾಜದ ಹಿರಿಯರ ಬಾಳಿಗೆ ಆಶಾಕಿರಣ ವಾಗಿದ್ದು, ಅವರ ಜೀವನ ಸಂಧ್ಯಾಕಾಲಕ್ಕೆ ಅತಿ ಅಗತ್ಯವಾದ ವಯೋವಂದನ ಆತಿಥ್ಯ ಗೃಹ ನಿರ್ಮಾಣಕ್ಕೆ ಮುಂದಾಗಿರುವುದು ಶ್ಲಾಘನೀಯ.

ಸಮಾಜದ ದಾನಿಗಳ ಸಹಕಾರದಿಂದ ಆದಷ್ಟು ಶೀಘ್ರ ಈ ಯೋಜನೆ ಲೋಕಾರ್ಪಣೆಗೊಳ್ಳಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ರಾಷ್ಟ್ರಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಶಿವಮೊಗ್ಗದ ಉದ್ಯಮಿ ಶ್ರೀ ಮಣೂರು ಪ್ರಕಾಶ್ ಪ್ರಭುರವರು, ಸಮಾಜ ಸಂಘಟನೆ ಮತ್ತು ಸಮಾಜಮುಖಿ ಕಾರ್ಯದ ಜೊತೆಗೆ ರಾಷ್ಟ್ರ ಮೊದಲು ಎನ್ನುವ ಕಲ್ಪನೆಯೊಂದಿಗೆ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿರುವುದು ಯುವ ಪೀಳಿಗೆಗೆ ಮೇಲ್ಪಂಕ್ತಿ ಹಾಕಿಕೊಟ್ಟಂತಾಗಿದೆ ಎಂದು ಶುಭ ಹಾರೈಸಿದರು.
ವೇದಮೂರ್ತಿ ಶ್ರೀ ಹರಿಪ್ರಸಾದ್ ಶರ್ಮಾ ರವರ ಪೌರೋಹಿತ್ಯದಲ್ಲಿ ಶ್ರೀ ಲಕ್ಷ್ಮಿ ಪೂಜೆಯನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ದಾನಿಗಳಾದ ಮಂಗಳೂರಿನ ಶ್ರೀ ರಘುರಾಮ್ ಕಾಮತ್, ಶ್ರೀಮತಿ ಚಂದ್ರ ಪ್ರಭಾಕಾಮತ್, ಉಡುಪಿಯ ಭಾರತ ವಿಕಾಸ ಪರಿಷತ್ ಪ್ರಮುಖರಾದ ಶ್ರೀ ವಸಂತ ಭಟ್ ದಂಪತಿಗಳು, ಮಣಿಪಾಲದ ಭಾರತ ವಿಕಾಸ್ ಟ್ರಸ್ಟಿನ ಕಾರ್ಯದರ್ಶಿ ಶ್ರೀ ಜಗದೀಶ್ ಪೈ, ಬ್ರಹ್ಮಾವರದ ಬಾಲಕೃಷ್ಣ ಪೈ, ಉಡುಪಿಯ ಡಾ. ರಾಮಚಂದ್ರ ಕಾಮತ್ ಕಟ್ಟಡ ನಿರ್ಮಾಣ ಪರಿಸರದಲ್ಲಿ ವೃಕ್ಷಾರೋಪಣೆಗೈದರು.

ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆಯ ಸಂಚಾಲಕರಾದ ಆರ್ .ವಿವೇಕಾನಂದ ಶೆಣೈ ಯವರು ಸ್ವಾಗತಿಸಿ, ಪ್ರಸ್ತಾವನೆಗೈದರು.

ಉಡುಪಿ ಕಟಪಾಡಿಯ ತ್ರಿಶಾ ವಿದ್ಯಾ ಸಮೂಹ ಸಂಸ್ಥೆಯ ಸಂಸ್ಥಾಪಕರಾದ ಸಿಎ ಗೋಪಾಲಕೃಷ್ಣ ಭಟ್ ರವರು ವಯೋ ವಂದನ ಆತಿಥ್ಯ ಗೃಹ ನಿರ್ಮಾಣದ ಮಹತ್ವ, ಸಮಾಜದ ಸಹಭಾಗಿತ್ವ ಮತ್ತು ವೇದಿಕೆಯ ನೇತೃತ್ವದ ಬಗ್ಗೆ ಸವಿವರವಾಗಿ ಮಾತನಾಡಿದರು.
ಅಮ್ಮುನ್ಜೆ ಶ್ರೀ ದಾಮೋದರ ದೇವಸ್ಥಾನದ ಆಡಳಿತ ಮೊಕ್ತೇಸರರರಾದ ಶ್ರೀ ವಿನೋದ್ ನಾಯಕ್ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ವೇದಿಕೆಯ ಮಹತ್ವಕಾಂಕ್ಷಿ ಯೋಜನೆಗೆ ಶುಭ ಹಾರೈಸಿದರು.

ಕಟ್ಟಡ ನಿರ್ಮಾಣ ಕಾಮಗಾರಿಯ ಇಂಜಿನಿಯರ್ ಕಾಮಾಕ್ಷಿ ಕನ್ಸ್ಟ್ರಕ್ಷನ್ ನಿರ್ಮಾಣ ಸಂಸ್ಥೆಯ ಶ್ರೀ ಸುಧೀರ್ ಕಾಮತ್ ರವರು ಕಟ್ಟಡ ನಿರ್ಮಾಣದ ರೂಪುರೇಷೆ ,ವಿನ್ಯಾಸದ ಬಗ್ಗೆ ತಾಂತ್ರಿಕ ಮಾಹಿತಿ ನೀಡಿದರು.

ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆಯ ಅಧ್ಯಕ್ಷರಾದ ಶ್ರೀ ಜಿ. ಸತೀಶ್ ಹೆಗ್ಡೆ ಅಧ್ಯಕ್ಷೀಯ ಮಾತುಗಳನ್ನಾಡುತ್ತಾ, ಕಳೆದ 14 ವರ್ಷಗಳಲ್ಲಿ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ನಡೆಸಿಕೊಂಡು ಬರುತ್ತಿರುವ ಸಮಾಜ ಸಂಘಟನೆ ಮತ್ತು ಸಮಾಜಮುಖಿ ಕಾರ್ಯಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.

ಜಿಎಸ್‌ಬಿ ಸಮಾಜ ಹಿತ ರಕ್ಷಣಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ರವರು ಕಾರ್ಯಕ್ರಮ ನಿರೂಪಿಸಿದರು.

ಕಾಪು ಹರೀಶ್ ನಾಯಕ್ ರವರು ವಂದನಾರ್ಪಣೆಗೈದರು.

Previous Post

ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Next Post

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

15/08/2026
ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

15/08/2026
ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

15/08/2026
20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

15/08/2026

Recent News

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

15/08/2026
ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

15/08/2026
ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

15/08/2026
20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

15/08/2026