ಉಡುಪಿ :ಆಗಸ್ಟ್ 22:ಸಂಪಾಜೆ ರಂಗಸಂಗಮ (ರಿ.), ಬೆಂಗಳೂರು ಇದರ ವಾರ್ಷಿಕೋತ್ಸವದ ಶುಭ ಸಂದರ್ಭದಲ್ಲಿ, ಸಮಾಜ ಸೇವೆ ಹಾಗೂ ಕಲಾ ಕ್ಷೇತ್ರದಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಗುರುತಿಸಿ ಸುಷ್ಮಾ ಎಸ್. ಬಂಟ್ವಾಳ ಅವರನ್ನು ಪ್ರತಿಷ್ಠಿತ ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.
ಸಮಾಜ ಸೇವೆ ಮತ್ತು ಕಲಾ ಕ್ಷೇತ್ರಕ್ಕೆ ನೀಡಿದ ಅವರ ಕೊಡುಗೆಗೆ ಈ ಗೌರವ ಸಂದಿರುವುದು ಹೆಮ್ಮೆಯ ಸಂಗತಿಯಾಗಿದೆ.






