ಕಾರ್ಕಳ : ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳು ಆ. 24ರಂದು ದಿಢೀರ್ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು ಲೋಕಾಯುಕ್ತ ಇನ್ಸ್ಪೆಕ್ಟರ್ ಚಂದ್ರಶೇಖರ್ ನೇತೃತ್ವದ ಎಂಟು ಮಂದಿ ಅಧಿಕಾರಿಗಳ ತಂಡ ಭೇಟಿ ನೀಡಿದ್ದು, ಬಾಕಿ ಕಡತಗಳು, ಖಾತೆ ತಿದ್ದುಪಡಿ, ಉದ್ದಿಮೆ ಪರವಾನಗಿ, ಜನನ ಮರಣ ಪ್ರಮಾಣ ಪತ್ರ ಅರ್ಜಿಗಳ ವಿಲೇವಾರಿ ಸೇರಿದಂತೆ ವಿವಿಧ ಸಾರ್ವಜನಿಕ ಅರ್ಜಿಗಳ ವಿಲೇವಾರಿ ಕುರಿತು ಪರಿಶೀಲನೆ ನಡೆಸಿದ್ದಾರೆ.







